AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧನೂರು ಅಪಘಾತ: ಮಂತ್ರಾಲಯ ಸಂಸ್ಕೃತ ಪಾಠ ಶಾಲೆಯ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರ ಸಾವು

ರಾಯಚೂರು ಜಿಲ್ಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಸಿಂಧನೂರಿನ ಅರಗಿನಮರ ಕ್ಯಾಂಪ್ ಬಳಿ ಕ್ರೂಸರ್ ವಾಹನದ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ. ಸುಮಾರು 10 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತ ಮಾಹಿತಿ ಇಲ್ಲಿದೆ.

ಸಿಂಧನೂರು ಅಪಘಾತ: ಮಂತ್ರಾಲಯ ಸಂಸ್ಕೃತ ಪಾಠ ಶಾಲೆಯ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರ ಸಾವು
ಪಲ್ಟಿಯಾದ ವಾಹನ
ಭೀಮೇಶ್​​ ಪೂಜಾರ್
| Edited By: |

Updated on:Jan 22, 2025 | 2:52 PM

Share

ರಾಯಚೂರು, ಜನವರಿ 22: ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂಧನೂರು (Sindhanur) ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ. ಕ್ರೂಸರ್ ಚಾಲಕ ಶಿವ (24), ಮಂತ್ರಾಲಯದ (Mantralaya) ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಅಯ್ಯವಂದನ್ (18), ಸುಜೇಂದ್ರ (22) ಹಾಗೂ ಅಭಿಲಾಷ್​(20) ಮೃತ ದುರ್ದೈವಿಗಳು. 10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂತ್ರಾಲಯ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿಗಳು ನರಹರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹಂಪಿಗೆ ಯಾತ್ರೆ ಹೊರಟಿದ್ದರು. ಇದೇ ವೇಳೆ ದುರ್ಘಟನೆ ಸಂಭವಿಸಿದೆ.

ಸುಬುಧೇಂದ್ರ ತೀರ್ಥರಿಂದ ಸಂತಾಪ

ರಸ್ತೆ ಅಪಘಾತದಲ್ಲಿ ಮಂತ್ರಾಲಯದ ಮಠದ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಬಗ್ಗೆ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಪ್ರತಿಕ್ರಿಯಿಸಿದ್ದು, ಸಂತಾಪ ಸೂಚಿಸಿದ್ದಾರೆ. ಸಂತಾಪ ಸೂಚನೆ ವೇಳೆ ವಿದ್ಯಾರ್ಥಿಗಳನ್ನು ನೆನೆದು ಶ್ರೀಗಳು ಭಾವುಕರಾದರು.

ಇದನ್ನೂ ಓದಿ: ಯಲ್ಲಾಪುರ: ಗುಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, 10 ಜನ ಸಾವು

ಕೊಪ್ಪಳದ ಆನೇಗುಂದಿಯಲ್ಲಿರುವ ನರಹರಿ ತೀರ್ಥರ ಕ್ಷೇತ್ರದಲ್ಲಿ ಮಾತನಾಡಿದ ಸುಬುಧೇಂದ್ರ ತೀರ್ಥರು, ಮಂತ್ರಾಲಯ ಮಠದ ಭಕ್ತರು, ವಿದ್ಯಾರ್ಥಿಗಳು ಆರಾಧನೆಗೆ ಬರುತ್ತಿದ್ದರು. ಈ ವೇಳೆ ವಾಹನದ ಎಕ್ಸೆಲ್ ತುಂಡಾಗಿ ಘಟನೆ ಸಂಭವಿಸಿದೆ ಎಂಬ ಮಾಹಿತಿ ಇದೆ. ಮೃತರ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲಿ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:37 am, Wed, 22 January 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್