AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್-ಕೇಸರಿ ವಿವಾದಕ್ಕೆ ತುಪ್ಪ ಸುರಿಯಲು ಕಿಡಿಗೇಡಿಗಳಿಂದ ಷಡ್ಯಂತ್ರ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ಫೇಕ್ ಅಂದ ರಾಯಚೂರು ಎಸ್ಪಿ

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಕೇಸರಿ ಶಾಲು ಸಮರಕ್ಕೆ ಮತ್ತಷ್ಟು ತುಪ್ಪ ಸುರಿಯಲು ರಾಯಚೂರಿನಲ್ಲಿ ಕೆಲ ಕಿಡಿಗೇಡಿಗಳು ಪ್ರಚೋದನೆಯ ವಿಡಿಯೋ ಹರಿಬಿಟ್ಟಿದ್ದಾರೆ. ಹಳೆ ವಿಡಿಯೋಗೆ ಹಿಜಾಬ್ & ಕೇಸರಿ ಶಾಲು ವಿವಾದವನ್ನು ಲಿಂಕ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ರವಾನಿಸುತ್ತಿದ್ದಾರೆ.

ಹಿಜಾಬ್-ಕೇಸರಿ ವಿವಾದಕ್ಕೆ ತುಪ್ಪ ಸುರಿಯಲು ಕಿಡಿಗೇಡಿಗಳಿಂದ ಷಡ್ಯಂತ್ರ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ಫೇಕ್ ಅಂದ ರಾಯಚೂರು ಎಸ್ಪಿ
ಹಿಜಾಬ್-ಕೇಸರಿ ವಿವಾದಕ್ಕೆ ತುಪ್ಪ ಸುರಿಯಲು ಕಿಡಿಗೇಡಿಗಳಿಂದ ಷಡ್ಯಂತ್ರ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ಫೇಕ್ ಅಂದ ರಾಯಚೂರು ಎಸ್ಪಿ
TV9 Web
| Edited By: |

Updated on: Feb 10, 2022 | 2:01 PM

Share

ರಾಯಚೂರು: ರಾಜ್ಯದಲ್ಲಿ ಹಿಜಾಬ್(Hijab) ಮತ್ತು ಕೇಸರಿ ಶಾಲುಗಳ(Kesari Shawl) ನಡುವಿನ ವಿವಾದ ತಾರಕಕ್ಕೇರಿದೆ. ಜೊತೆಯಲ್ಲಿ ಕೂತು ಪಾಠ, ಊಟ, ನಕ್ಕು ನಲಿಯುತ್ತಿದ್ದವರ ನಡುವೆ ದ್ವೇಷ, ಗಲಾಟೆ ಹುಟ್ಟಿಕೊಂಡಿದೆ. ವಿದ್ಯಾರ್ಥಿಗಳ ಕತ್ತಲ್ಲಿ ಏಕಾಏಕಿ ಕೇಸರಿ ಶಾಲುಗಳು ಬಂದಿವೆ. ಜ್ಞಾನ ದೇಗುಲದಲ್ಲಿ ಸಮಾನತೆಯ ಹೆಸರಲ್ಲಿ ಜಾತಿ, ಧರ್ಮದ ಕಿಚ್ಚು ಹತ್ತಿಕೊಂಡಿದೆ. ಇಷ್ಟೆಲ್ಲಾ ಅನಾಹುತಗಳು ನಡೆಯುತ್ತಿದ್ದು ಕೆಲ ಕಿಡಿಗೇಡಿಗಳು ಸಂದರ್ಭವನ್ನು ಬಳಸಿಕೊಂಡು ಮತ್ತಷ್ಟು ಸಮಸ್ಯೆಯನ್ನು ಉಲ್ಬಣ ಮಾಡಲು ಮುಂದಾಗಿದ್ದಾರೆ. ಕಿಡಿಗೇಡಿಗಳು ರಾಯಚೂರು ಜಿಲ್ಲೆಯಲ್ಲಿ ಪ್ರಚೋದನೆಯ ವಿಡಿಯೋ ಹರಿಬಿಟ್ಟಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಈ ವಿಡಿಯೋ ಭಾರೀ ಸಂಚಲನ‌ ಸೃಷ್ಟಿಸಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಕೇಸರಿ ಶಾಲು ಸಮರಕ್ಕೆ ಮತ್ತಷ್ಟು ತುಪ್ಪ ಸುರಿಯಲು ರಾಯಚೂರಿನಲ್ಲಿ ಕೆಲ ಕಿಡಿಗೇಡಿಗಳು ಪ್ರಚೋದನೆಯ ವಿಡಿಯೋ ಹರಿಬಿಟ್ಟಿದ್ದಾರೆ. ಹಳೆ ವಿಡಿಯೋಗೆ ಹಿಜಾಬ್ & ಕೇಸರಿ ಶಾಲು ವಿವಾದವನ್ನು ಲಿಂಕ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ವೈರಲ್ ಆದ ವಿಡಿಯೋದಲ್ಲಿ ಕಿಡಿಗೇಡಿಗಳು, ಕಾಲೇಜು ಪ್ರಿನ್ಸಿಪಲ್ಗೆ ಎಸ್ಡಿಪಿಐ(SDPI) ಕಾರ್ಯಕರ್ತರು ಧಮ್ಕಿ ಹಾಕಿದ್ದಾರೆ ಅಂತ ಬಿಂಬಿಸಿದ್ದಾರೆ. ಸದ್ಯ ಈ ಬಗ್ಗೆ ಟಿವಿ9 ಗೆ ರಾಯಚೂರು ಎಸ್ಪಿ ನಿಖಿಲ್.ಬಿ. ಸ್ಪಷ್ಟನೆ ನೀಡಿದ್ದು ಇದು ಹಿಜಾಬ್ & ಕೇಸರಿ ಶಾಲು ವಿಚಾರದ ಗಲಾಟೆಯಲ್ಲ. ಈ ಬಗ್ಗೆ ಗಮನ ಹರಿಸದಂತೆ ಜನರಲ್ಲಿ ಮನವಿ ಮಾಡುತ್ತೇನೆ ಎಂದು ಸ್ಪಷ್ಟ ಪಡಿಸಿದ್ದಾರೆ.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಇದೇ ಜನವರಿನ 31 ರಂದು ನಡೆದಿದ್ದ ಘಟನೆಯನ್ನು ತಿರುಚಿ ಹಿಜಾಬ್ & ಕೇಸರಿ ಶಾಲು ಗಲಾಟೆಗೆ ಲಿಂಕ್ ಮಾಡಲಾಗಿದೆ. ಮುದಗಲ್ ಪಟ್ಟಣದಲ್ಲಿ ಇದೇ ಜನವರಿನ 31 ರಂದು ಧರ್ಮದ ಪ್ರಚಾರಕ್ಕೆ ಲಿಂಗಸುಗೂರು‌ ಚರ್ಚ್​ನ ಫಾದರ್ ಮಲ್ಲೇಶಪ್ಪ ಪಾಲ್ ಜಾನ್ ಮುದಗಲ್ಗೆ ಬಂದಿದ್ದರು. ಈ ವೇಳೆ ಮುಸ್ಲಿಂ ಸಮುದಾಯದವರಿರೊ ಏರಿಯಾದಲ್ಲಿ ಪ್ರಚಾರ ಮಾಡಿದ್ದರು. ಆಗ ಸ್ಥಳೀಯರು ಫಾದರ್ ಮಲ್ಲೇಶಪ್ಪನಿಗೆ ತರಾಟೆಗೆ ತೆಗೆದುಕೊಂಡಿದ್ದರು. ಆಗ ಸ್ಥಳೀಯ ಎಸ್ಡಿಪಿಐ ಕಾರ್ಯಕರ್ತ ಹಿಮದ್ ರಜಾಕ್ ಹಾಗೂ ಪಾಷಾರು ಫಾದರ್ಗೆ ವಾರ್ನಿಂಗ್ ಮಾಡಿ ಕಳಿಸಿದ್ದರು. ಈ ಬಗ್ಗೆ ಮುದಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫಾದರ್ ಮಲ್ಲೇಶಪ್ಪ ಹಾಗೂ ಎಸ್ಡಿಪಿಐ ಕಾರ್ಯಕರ್ತರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಹೀಗಾಗಿ ಜನರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಬಗ್ಗೆ ಗಮನ ಹರಿಸಬೇಡಿ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ದೇಶದ ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧ; ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ಭಾಷಣ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್