AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ಗೋಲ್ಡ್ ಮೆಡಲ್ ಪಡೆದ ರಾಯಚೂರು ವಿದ್ಯಾರ್ಥಿನಿ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಟ್ರೋಲ್! ನೆಗೆಟಿವ್ ಟ್ರೋಲ್ಗೆ ವಿದ್ಯಾರ್ಥಿನಿ ಬೇಸರ

ನೆಗೆಟಿವ್ ಟ್ರೋಲ್​ಗೆ ಒಳಗಾಗುತ್ತಿರುವ ವಿದ್ಯಾರ್ಥಿನಿ ಬುಶ್ರಾ ಮತೀನ್ ರಾಯಚೂರು ನಗರದ ನಿವಾಸಿ. ಈಕೆ ಜಹೀರುದ್ದಿನ್ ಎಂಬುವವರ ಪುತ್ರಿ. ವಿದ್ಯಾರ್ಥಿನಿ ರಾಯಚೂರು ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದುತ್ತಿದ್ದಾರೆ.

16 ಗೋಲ್ಡ್ ಮೆಡಲ್ ಪಡೆದ ರಾಯಚೂರು ವಿದ್ಯಾರ್ಥಿನಿ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಟ್ರೋಲ್! ನೆಗೆಟಿವ್ ಟ್ರೋಲ್ಗೆ ವಿದ್ಯಾರ್ಥಿನಿ ಬೇಸರ
ಗೋಲ್ಡ್ ಮೆಡಲ್ ಹಿಡಿದಿರುವ ವಿದ್ಯಾರ್ಥಿನಿ ಬುಶ್ರಾ ಮತೀನ್
TV9 Web
| Edited By: |

Updated on: Mar 07, 2022 | 9:31 AM

Share

ರಾಯಚೂರು: ಜಿಲ್ಲೆ ಬಿಸಿಲುನಾಡು, ರಾಜ್ಯದಲ್ಲಿ ಹಿಂದುಳಿದ ಜಿಲ್ಲೆ ಎನ್ನುವ ಹಣೆಪಟ್ಟಿ ಕಟ್ಟಿಕೊಂಡಿದೆ. ಅದರಲ್ಲೂ ಶೈಕ್ಷಣಿಕ ವಿಭಾಗದಲ್ಲಿ ವಿದ್ಯಾರ್ಥಿಗಳು (Students) ಸಾಧನೆ ಮಾಡೋದು ಮರಿಚಿಕೆ ಎನ್ನುವ ಮಾತುಗಳು ಇದ್ದವು. ಆದರೆ ಈ ಹಣೆಪಟ್ಟಿಯನ್ನು ಬುಶ್ರಾ ಮತೀನ್ ಎನ್ನುವ ವಿದ್ಯಾರ್ಥಿನಿ ಅಳಿಸಿ ಹಾಕಿದ್ದಾರೆ. ಜೊತೆಗೆ, ವಿದ್ಯಾರ್ಥಿನಿ ಬುಶ್ರಾ ಮತೀನ್ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಛಿದ್ರಗೊಳೊಳಿಸಿ ರಾಜ್ಯದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ (Visvesvaraya Technological University) ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ.

ವಿಟಿಯು ಇತಿಹಾಸದಲ್ಲಿ ಹೊಸ ಸಾಧನೆ ಮಾಡಿದ ಬುಶ್ರಾ ಮತೀನ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಕೋರ್ಟ್​ಲ್ಲಿರುವ ಹಿಜಾಬ್ ವಿಚಾರವನ್ನು ಕೆಲ ಕಿಡಿಗೇಡಿಗಳು ಮುಂದಿಟ್ಟುಕೊಂಡು ಬುಶ್ರಾ ಮತೀನ್ ಅವರನ್ನು ಹಿಜಾಬೀಸ್ ರಾಕ್ಸ್ ಅಂತ ನೆಗೆಟಿವ್ ಟ್ರೋಲ್ ಮಾಡಿದ್ದಾರೆ.

ಸಾಧನೆಗೈದು ನೆಗೆಟಿವ್ ಟ್ರೋಲ್​ಗೆ ಒಳಗಾಗುತ್ತಿರುವ ವಿದ್ಯಾರ್ಥಿನಿ ಬುಶ್ರಾ ಮತೀನ್ ರಾಯಚೂರು ನಗರದ ನಿವಾಸಿ. ಈಕೆ ಜಹೀರುದ್ದಿನ್ ಎಂಬುವವರ ಪುತ್ರಿ. ವಿದ್ಯಾರ್ಥಿನಿ ರಾಯಚೂರು ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದುತ್ತಿದ್ದಾರೆ. ಸಿವಿಲ್ ಇಂಜಿನಿಯರಿಂಗ್​ನ ಎಲ್ಲಾ 8 ಸೆಮಿಸ್ಟರ್ಗಳಲ್ಲೂ ರಾಜ್ಯಕ್ಕೆ ಫರ್ಸ್ಟ್ ರ್ಯಾಂಕ್ ಪಡೆದಿದ್ದಾರೆ. ಜೊತೆಗೆ ವಿವಿಧ ವಿಷಯಗಳಲ್ಲೂ ವಿನೂತನ ಸಾಧನೆ ಮಾಡಿ ಒಟ್ಟು 16 ಗೋಲ್ಡ್ ಮೆಡಲ್ ಪಡೆಯುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ನೆಗೆಟಿವ್ ಟ್ರೋಲ್ ಬಗ್ಗೆ ಟಿವಿ9 ಗೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿನಿ ಬುಶ್ರಾ ಮತೀನ್, ನೆಗೆಟಿವ್ ಟ್ರೋಲ್ ಏಕೆ ಮಾಡಲಾಗುತ್ತಿದೆ ಗೊತ್ತಿಲ್ಲ. ನಾನೊಬ್ಬ ಭಾರತೀಯಳು ಎನ್ನುವುದಕ್ಕೆ ನನಗೆ ಹೆಮ್ಮೆಯಿದೆ ಎಂದರು. ಬುಶ್ರಾ ಮತೀನ್ ತಂದೆ ಜಹೀರುದ್ದಿನ್ ಮಾತನಾಡಿ, ನನ್ನ ಮಗಳನ್ನು ನೆಗೆಟಿವ್ ಟ್ರೋಲ್ ಮಾಡಲಾಗುತ್ತಿದೆ. ಧರ್ಮ ಬೇರೆ, ಶಿಕ್ಷಣ ಬೇರೆ. ಅವರನ್ನು ಹಾಗೇ ಬಿಂಬಿಸಬೇಡಿ ಅಂತ ಮನವಿ ಮಾಡಿದ್ದಾರೆ.

ಇದನ್ನೂ ಓದಿ

ತುಮಕೂರಿನಲ್ಲಿ ರೈತರ ಮನವಿಗೆ ಬಗ್ಗದೆ ಫಸಲು ನೀಡುತ್ತಿದ್ದ ಅಡಕೆ, ತೆಂಗಿನ ಮರಗಳನ್ನ ತೆರವುಗೊಳಿಸಿದ ಅರಣ್ಯ ಅಧಿಕಾರಿಗಳು

ನಾಗರಿಕರ ಮೇಲೆ ದಾಳಿಯಾದ್ರೆ ಅದು ಕೊಲೆ ಆಗುತ್ತೆ; ದೌರ್ಜನ್ಯ ಎಸಗಿದವರನ್ನು ಸುಮ್ಮನೆ ಬಿಡಲ್ಲ: ಝೆಲೆನ್‌ಸ್ಕಿ ಆಕ್ರೋಶ

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ