AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTPS: ರಾಯಚೂರಿನಲ್ಲಿ ಕೋಲ್ ಬಂಕರ್ ಕುಸಿತ; ಬೃಹತ್ ಯಂತ್ರಗಳಿಗೆ ಹಾನಿ, ವಿದ್ಯುತ್ ಉತ್ಪಾದನೆ ಸ್ಥಗಿತ

ಸದ್ಯಕ್ಕೆ 8 ಘಟಕಗಳಲ್ಲೂ ವಿದ್ಯುತ್ ಉತ್ಪಾದನೆ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಹಾಗೂ ಬೃಹತ್ ಯಂತ್ರಗಳಿಗೆ ಹಾನಿಯಾಗಿರುವ ಕಾರಣದಿಂದ ದುರಸ್ತಿ ಕಾರ್ಯಕ್ಕೆ ಬೆಂಗಳೂರಿನಿಂದ ತಜ್ಞರು ಬರುವ ಸಾಧ್ಯತೆಯಿದೆ

RTPS: ರಾಯಚೂರಿನಲ್ಲಿ ಕೋಲ್ ಬಂಕರ್ ಕುಸಿತ; ಬೃಹತ್ ಯಂತ್ರಗಳಿಗೆ ಹಾನಿ, ವಿದ್ಯುತ್ ಉತ್ಪಾದನೆ ಸ್ಥಗಿತ
ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕ
TV9 Web
| Updated By: ಸುಷ್ಮಾ ಚಕ್ರೆ|

Updated on:Aug 10, 2022 | 1:08 PM

Share

ರಾಯಚೂರು: ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ (Raichur Thermal Power Station) ಕಲ್ಲಿದ್ದಲು ಬಂಕರ್‌ ಕುಸಿತವಾಗಿದೆ. ಈ ವೇಳೆ ಕೂದಲೆಳೆಯ ಅಂತರದಲ್ಲಿ ದೊಡ್ಡ ಅನಾಹುತ ತಪ್ಪಿದೆ. ರಾಯಚೂರು ತಾಲೂಕಿನ ಶಕ್ತಿನಗರದಲ್ಲಿರುವ ಆರ್​​ಟಿಪಿಎಸ್​ನ (RTPS) 1ನೇ ಘಟಕದ ಕಲ್ಲಿದ್ದಲು ಬಂಕರ್ ಕುಸಿತವಾಗಿ ಅಪಾರ ಹಾನಿಯಾಗಿದ್ದು, ಯಂತ್ರೋಪಕರಣಗಳು ಧ್ವಂಸವಾಗಿವೆ. ಮಳೆಯಿಂದ ತೊಯ್ದ ಕಲ್ಲಿದ್ದಲನ್ನು ಕಲ್ಲಿದ್ದಲು ಬಂಕರ್​ಗೆ (Coal Bunker) ಹಾಕಲಾಗಿತ್ತು. ಇದರಿಂದ ಈ ದುರಂತ ನಡೆದಿದೆ ಎನ್ನಲಾಗಿದೆ.

ಒಟ್ಟು 8 ವಿದ್ಯುತ್ ಉತ್ಪಾದನಾ ಘಟಕ ಹೊಂದಿರುವ RTPS ಘಟಕದ ಕೋಲ್ ಬಂಕರ್​ನಲ್ಲಿದ್ದ 500 ಟನ್ ಕಲ್ಲಿದ್ದಲು ಮಳೆಯಿಂದ ಒದ್ದೆಯಾಗಿತ್ತು. ತೇವಗೊಂಡಿದ್ದ ಕಲ್ಲಿದ್ದಲನ್ನು ಬಂಕರ್​ಗೆ ಹಾಕಿದ್ದರಿಂದ ಒತ್ತಡ ಹೆಚ್ಚಾಗಿ, ಸಾಮರ್ಥ್ಯಕ್ಕಿಂತ ಹೆಚ್ಚಿನ ಭಾರವಾಗಿದ್ದಕ್ಕೆ ಈ ಅವಘಡ ಸಂಭವಿಸಿದೆ. ಹಾಗೇ, ಕಲ್ಲಿದ್ದಲು ಬಂಕರ್​​ನ ಸಾಮರ್ಥ್ಯದ ಮಿತಿಗಿಂತಲೂ ಹೆಚ್ಚು ಕಲ್ಲಿದ್ದಲನ್ನು ಸಂಗ್ರಹಿಸಿದ್ದರಿಂದ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಹೊರನಾಡು ಸಮೀಪ ಭಾರೀ ಭೂ ಕುಸಿತ, ಮಡಿಕೇರಿ ಊರುಬೈಲು ಗ್ರಾಮದಲ್ಲಿ 15 ಅಡಿ ಕುಸಿದು, ಕೊಚ್ಚಿ ಹೋದ ಗ್ರಾಮೀಣ ರಸ್ತೆ

ಈ ಹಿನ್ನೆಲೆಯಲ್ಲಿ ಏಕಾಏಕಿ ಕೋಲ್ ಬಂಕರ್ ಕುಸಿದು ಬಿದ್ದಿದೆ. ಈ ವೇಳೆ ಕಾರ್ಮಿಕರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಸದ್ಯ 8 ಘಟಕಗಳಲ್ಲೂ ವಿದ್ಯುತ್ ಉತ್ಪಾದನೆ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಹಾಗೂ ಬೃಹತ್ ಯಂತ್ರಗಳಿಗೆ ಹಾನಿಯಾಗಿರುವ ಕಾರಣದಿಂದ ದುರಸ್ತಿ ಕಾರ್ಯಕ್ಕೆ ಬೆಂಗಳೂರಿನಿಂದ ತಜ್ಞರು ಬರುವ ಸಾಧ್ಯತೆಯಿದೆ ಎಂದು ಟಿವಿ9ಗೆ ಆರ್​​ಟಿಪಿಎಸ್ ಮೂಲಗಳಿಂದ ಸ್ಪಷ್ಟನೆ ಸಿಕ್ಕಿದೆ.

ಕೋಲ್ ಬಂಕರ್ ತುಂಬಾ ಹಳೆಯದ್ದಾಗಿದ್ದರಿಂದ ಕುಸಿದಿದೆ. ಈ ಘಟನೆಯಲ್ಲಿ ಯಾವುದೇ ದುರಂತ ಸಂಭವಿಸಿಲ್ಲ ಎಂದು ಕಲ್ಲಿದ್ದಲು ಬಂಕರ್​ನ ಸಿಬ್ಬಂದಿ ಹೇಳಿದ್ದಾರೆ. ಸದ್ಯಕ್ಕೆ ವಿದ್ಯುತ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:59 pm, Wed, 10 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ