AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTPS: ರಾಯಚೂರಿನಲ್ಲಿ ಕೋಲ್ ಬಂಕರ್ ಕುಸಿತ; ಬೃಹತ್ ಯಂತ್ರಗಳಿಗೆ ಹಾನಿ, ವಿದ್ಯುತ್ ಉತ್ಪಾದನೆ ಸ್ಥಗಿತ

ಸದ್ಯಕ್ಕೆ 8 ಘಟಕಗಳಲ್ಲೂ ವಿದ್ಯುತ್ ಉತ್ಪಾದನೆ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಹಾಗೂ ಬೃಹತ್ ಯಂತ್ರಗಳಿಗೆ ಹಾನಿಯಾಗಿರುವ ಕಾರಣದಿಂದ ದುರಸ್ತಿ ಕಾರ್ಯಕ್ಕೆ ಬೆಂಗಳೂರಿನಿಂದ ತಜ್ಞರು ಬರುವ ಸಾಧ್ಯತೆಯಿದೆ

RTPS: ರಾಯಚೂರಿನಲ್ಲಿ ಕೋಲ್ ಬಂಕರ್ ಕುಸಿತ; ಬೃಹತ್ ಯಂತ್ರಗಳಿಗೆ ಹಾನಿ, ವಿದ್ಯುತ್ ಉತ್ಪಾದನೆ ಸ್ಥಗಿತ
ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕ
TV9 Web
| Edited By: |

Updated on:Aug 10, 2022 | 1:08 PM

Share

ರಾಯಚೂರು: ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ (Raichur Thermal Power Station) ಕಲ್ಲಿದ್ದಲು ಬಂಕರ್‌ ಕುಸಿತವಾಗಿದೆ. ಈ ವೇಳೆ ಕೂದಲೆಳೆಯ ಅಂತರದಲ್ಲಿ ದೊಡ್ಡ ಅನಾಹುತ ತಪ್ಪಿದೆ. ರಾಯಚೂರು ತಾಲೂಕಿನ ಶಕ್ತಿನಗರದಲ್ಲಿರುವ ಆರ್​​ಟಿಪಿಎಸ್​ನ (RTPS) 1ನೇ ಘಟಕದ ಕಲ್ಲಿದ್ದಲು ಬಂಕರ್ ಕುಸಿತವಾಗಿ ಅಪಾರ ಹಾನಿಯಾಗಿದ್ದು, ಯಂತ್ರೋಪಕರಣಗಳು ಧ್ವಂಸವಾಗಿವೆ. ಮಳೆಯಿಂದ ತೊಯ್ದ ಕಲ್ಲಿದ್ದಲನ್ನು ಕಲ್ಲಿದ್ದಲು ಬಂಕರ್​ಗೆ (Coal Bunker) ಹಾಕಲಾಗಿತ್ತು. ಇದರಿಂದ ಈ ದುರಂತ ನಡೆದಿದೆ ಎನ್ನಲಾಗಿದೆ.

ಒಟ್ಟು 8 ವಿದ್ಯುತ್ ಉತ್ಪಾದನಾ ಘಟಕ ಹೊಂದಿರುವ RTPS ಘಟಕದ ಕೋಲ್ ಬಂಕರ್​ನಲ್ಲಿದ್ದ 500 ಟನ್ ಕಲ್ಲಿದ್ದಲು ಮಳೆಯಿಂದ ಒದ್ದೆಯಾಗಿತ್ತು. ತೇವಗೊಂಡಿದ್ದ ಕಲ್ಲಿದ್ದಲನ್ನು ಬಂಕರ್​ಗೆ ಹಾಕಿದ್ದರಿಂದ ಒತ್ತಡ ಹೆಚ್ಚಾಗಿ, ಸಾಮರ್ಥ್ಯಕ್ಕಿಂತ ಹೆಚ್ಚಿನ ಭಾರವಾಗಿದ್ದಕ್ಕೆ ಈ ಅವಘಡ ಸಂಭವಿಸಿದೆ. ಹಾಗೇ, ಕಲ್ಲಿದ್ದಲು ಬಂಕರ್​​ನ ಸಾಮರ್ಥ್ಯದ ಮಿತಿಗಿಂತಲೂ ಹೆಚ್ಚು ಕಲ್ಲಿದ್ದಲನ್ನು ಸಂಗ್ರಹಿಸಿದ್ದರಿಂದ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಹೊರನಾಡು ಸಮೀಪ ಭಾರೀ ಭೂ ಕುಸಿತ, ಮಡಿಕೇರಿ ಊರುಬೈಲು ಗ್ರಾಮದಲ್ಲಿ 15 ಅಡಿ ಕುಸಿದು, ಕೊಚ್ಚಿ ಹೋದ ಗ್ರಾಮೀಣ ರಸ್ತೆ

ಈ ಹಿನ್ನೆಲೆಯಲ್ಲಿ ಏಕಾಏಕಿ ಕೋಲ್ ಬಂಕರ್ ಕುಸಿದು ಬಿದ್ದಿದೆ. ಈ ವೇಳೆ ಕಾರ್ಮಿಕರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಸದ್ಯ 8 ಘಟಕಗಳಲ್ಲೂ ವಿದ್ಯುತ್ ಉತ್ಪಾದನೆ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಹಾಗೂ ಬೃಹತ್ ಯಂತ್ರಗಳಿಗೆ ಹಾನಿಯಾಗಿರುವ ಕಾರಣದಿಂದ ದುರಸ್ತಿ ಕಾರ್ಯಕ್ಕೆ ಬೆಂಗಳೂರಿನಿಂದ ತಜ್ಞರು ಬರುವ ಸಾಧ್ಯತೆಯಿದೆ ಎಂದು ಟಿವಿ9ಗೆ ಆರ್​​ಟಿಪಿಎಸ್ ಮೂಲಗಳಿಂದ ಸ್ಪಷ್ಟನೆ ಸಿಕ್ಕಿದೆ.

ಕೋಲ್ ಬಂಕರ್ ತುಂಬಾ ಹಳೆಯದ್ದಾಗಿದ್ದರಿಂದ ಕುಸಿದಿದೆ. ಈ ಘಟನೆಯಲ್ಲಿ ಯಾವುದೇ ದುರಂತ ಸಂಭವಿಸಿಲ್ಲ ಎಂದು ಕಲ್ಲಿದ್ದಲು ಬಂಕರ್​ನ ಸಿಬ್ಬಂದಿ ಹೇಳಿದ್ದಾರೆ. ಸದ್ಯಕ್ಕೆ ವಿದ್ಯುತ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:59 pm, Wed, 10 August 22

Follow Us
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!