AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTPS: ರಾಯಚೂರಿನಲ್ಲಿ ಕೋಲ್ ಬಂಕರ್ ಕುಸಿತ; ಬೃಹತ್ ಯಂತ್ರಗಳಿಗೆ ಹಾನಿ, ವಿದ್ಯುತ್ ಉತ್ಪಾದನೆ ಸ್ಥಗಿತ

ಸದ್ಯಕ್ಕೆ 8 ಘಟಕಗಳಲ್ಲೂ ವಿದ್ಯುತ್ ಉತ್ಪಾದನೆ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಹಾಗೂ ಬೃಹತ್ ಯಂತ್ರಗಳಿಗೆ ಹಾನಿಯಾಗಿರುವ ಕಾರಣದಿಂದ ದುರಸ್ತಿ ಕಾರ್ಯಕ್ಕೆ ಬೆಂಗಳೂರಿನಿಂದ ತಜ್ಞರು ಬರುವ ಸಾಧ್ಯತೆಯಿದೆ

RTPS: ರಾಯಚೂರಿನಲ್ಲಿ ಕೋಲ್ ಬಂಕರ್ ಕುಸಿತ; ಬೃಹತ್ ಯಂತ್ರಗಳಿಗೆ ಹಾನಿ, ವಿದ್ಯುತ್ ಉತ್ಪಾದನೆ ಸ್ಥಗಿತ
ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕ
TV9 Web
| Edited By: |

Updated on:Aug 10, 2022 | 1:08 PM

Share

ರಾಯಚೂರು: ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ (Raichur Thermal Power Station) ಕಲ್ಲಿದ್ದಲು ಬಂಕರ್‌ ಕುಸಿತವಾಗಿದೆ. ಈ ವೇಳೆ ಕೂದಲೆಳೆಯ ಅಂತರದಲ್ಲಿ ದೊಡ್ಡ ಅನಾಹುತ ತಪ್ಪಿದೆ. ರಾಯಚೂರು ತಾಲೂಕಿನ ಶಕ್ತಿನಗರದಲ್ಲಿರುವ ಆರ್​​ಟಿಪಿಎಸ್​ನ (RTPS) 1ನೇ ಘಟಕದ ಕಲ್ಲಿದ್ದಲು ಬಂಕರ್ ಕುಸಿತವಾಗಿ ಅಪಾರ ಹಾನಿಯಾಗಿದ್ದು, ಯಂತ್ರೋಪಕರಣಗಳು ಧ್ವಂಸವಾಗಿವೆ. ಮಳೆಯಿಂದ ತೊಯ್ದ ಕಲ್ಲಿದ್ದಲನ್ನು ಕಲ್ಲಿದ್ದಲು ಬಂಕರ್​ಗೆ (Coal Bunker) ಹಾಕಲಾಗಿತ್ತು. ಇದರಿಂದ ಈ ದುರಂತ ನಡೆದಿದೆ ಎನ್ನಲಾಗಿದೆ.

ಒಟ್ಟು 8 ವಿದ್ಯುತ್ ಉತ್ಪಾದನಾ ಘಟಕ ಹೊಂದಿರುವ RTPS ಘಟಕದ ಕೋಲ್ ಬಂಕರ್​ನಲ್ಲಿದ್ದ 500 ಟನ್ ಕಲ್ಲಿದ್ದಲು ಮಳೆಯಿಂದ ಒದ್ದೆಯಾಗಿತ್ತು. ತೇವಗೊಂಡಿದ್ದ ಕಲ್ಲಿದ್ದಲನ್ನು ಬಂಕರ್​ಗೆ ಹಾಕಿದ್ದರಿಂದ ಒತ್ತಡ ಹೆಚ್ಚಾಗಿ, ಸಾಮರ್ಥ್ಯಕ್ಕಿಂತ ಹೆಚ್ಚಿನ ಭಾರವಾಗಿದ್ದಕ್ಕೆ ಈ ಅವಘಡ ಸಂಭವಿಸಿದೆ. ಹಾಗೇ, ಕಲ್ಲಿದ್ದಲು ಬಂಕರ್​​ನ ಸಾಮರ್ಥ್ಯದ ಮಿತಿಗಿಂತಲೂ ಹೆಚ್ಚು ಕಲ್ಲಿದ್ದಲನ್ನು ಸಂಗ್ರಹಿಸಿದ್ದರಿಂದ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಹೊರನಾಡು ಸಮೀಪ ಭಾರೀ ಭೂ ಕುಸಿತ, ಮಡಿಕೇರಿ ಊರುಬೈಲು ಗ್ರಾಮದಲ್ಲಿ 15 ಅಡಿ ಕುಸಿದು, ಕೊಚ್ಚಿ ಹೋದ ಗ್ರಾಮೀಣ ರಸ್ತೆ

ಈ ಹಿನ್ನೆಲೆಯಲ್ಲಿ ಏಕಾಏಕಿ ಕೋಲ್ ಬಂಕರ್ ಕುಸಿದು ಬಿದ್ದಿದೆ. ಈ ವೇಳೆ ಕಾರ್ಮಿಕರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಸದ್ಯ 8 ಘಟಕಗಳಲ್ಲೂ ವಿದ್ಯುತ್ ಉತ್ಪಾದನೆ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಹಾಗೂ ಬೃಹತ್ ಯಂತ್ರಗಳಿಗೆ ಹಾನಿಯಾಗಿರುವ ಕಾರಣದಿಂದ ದುರಸ್ತಿ ಕಾರ್ಯಕ್ಕೆ ಬೆಂಗಳೂರಿನಿಂದ ತಜ್ಞರು ಬರುವ ಸಾಧ್ಯತೆಯಿದೆ ಎಂದು ಟಿವಿ9ಗೆ ಆರ್​​ಟಿಪಿಎಸ್ ಮೂಲಗಳಿಂದ ಸ್ಪಷ್ಟನೆ ಸಿಕ್ಕಿದೆ.

ಕೋಲ್ ಬಂಕರ್ ತುಂಬಾ ಹಳೆಯದ್ದಾಗಿದ್ದರಿಂದ ಕುಸಿದಿದೆ. ಈ ಘಟನೆಯಲ್ಲಿ ಯಾವುದೇ ದುರಂತ ಸಂಭವಿಸಿಲ್ಲ ಎಂದು ಕಲ್ಲಿದ್ದಲು ಬಂಕರ್​ನ ಸಿಬ್ಬಂದಿ ಹೇಳಿದ್ದಾರೆ. ಸದ್ಯಕ್ಕೆ ವಿದ್ಯುತ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:59 pm, Wed, 10 August 22

Follow Us
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?