AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ‌ ಪ್ರಕರಣ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು

ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಮಣಿಕಂಠ ವಿರುದ್ಧ ಮಸ್ಕಿ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ರಾಯಚೂರಿನಲ್ಲಿ ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ‌ ಪ್ರಕರಣ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು
ಪಿಎಸ್​ಐ ಮಣಿಕಂಠ
ಭೀಮೇಶ್​​ ಪೂಜಾರ್
| Edited By: |

Updated on:Sep 24, 2023 | 1:33 PM

Share

ರಾಯಚೂರು ಸೆ.23: ಟ್ರಾಕ್ಟರ್ (Tractor) ಚಾಲಕನ ಮೇಲೆ ಹಲ್ಲೆ‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ (PSI) ಮಣಿಕಂಠ ವಿರುದ್ಧ ಮಸ್ಕಿ (Maski) ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಹಲ್ಲೆ, ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಸೆಪ್ಟೆಂಬರ್ 20 ರಂದು ಮಸ್ಕಿ ಪಟ್ಟಣದಲ್ಲಿ ನಿರುಪಾದಿ ಎಂಬುವರು ಟ್ರ್ಯಾಕ್ಟರ್​ನಲ್ಲಿ ಮಣ್ಣು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಪಿಎಸ್​ಐ ಮಣಿಕಂಠ ಟ್ರ್ಯಾಕ್ಟರ್ ತಡೆದು ಮಣ್ಣು ತೆಗೆದುಕೊಂಡು ಹೋಗಲು 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು. ಅಲ್ಲದೇ ತನ್ನ ಜೀಪ್​ನಲ್ಲಿದ್ದ ಪೈಪ್ ತೆಗೆದುಕೊಂಡು ನಿರುಪಾದಿ ಅವರಿಗೆ ಮನಬಂದಂತೆ ಥಳಿಸಿದ್ದಾರೆ. ಹಾಗೇ ಪಿಎಸ್​ಐ ಮಣಿಕಂಠ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.

ವಾಲ್ಮೀಕಿ ನಾಯಕ ಸಮಾಜದ ಯುವಕ ನಿರುಪಾದಿ ಮೇಲೆ ಹಲ್ಲೆ ನಡೆದು ಮೂರು ದಿನಗಳಾದರೂ ಪ್ರಕರಣ ದಾಖಲಾಗಿರಲಿಲ್ಲ. ಶುಕ್ರವಾರ ವಾಲ್ಮೀಕಿ ನಾಯಕ ಮಾಹಾಸಭಾ ತಾಲೂಕು ಘಟಕವು ಪಿಎಸ್​ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಲಿಂಗಸೂರು ಡಿವೈಎಸ್​​ಪಿ ಮಂಜುನಾಥ ಹಾಗೂ ಸಿಪಿಐ ಬಾಲಚಂದ್ರ ಲಕ್ಕಂ ಅವರಿಗೆ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಜೈಲಿನಿಂದ ಎಸ್ಕೇಪ್ ಆಗಿದ್ದ ಕೊಲೆ ಆರೋಪಿಯನ್ನು ಪೋಷಕರು ವಾಪಸ್​​ ಕರೆತಂದು ಪೊಲೀಸರಿಗೆ ಒಪ್ಪಿಸಿದರು!

ಆದರೆ ಪೊಲೀಸ್​​ ಅಧಿಕಾರಿಗಳು ಯಾವುದೇ ಕ್ರಮ ಕೈಗಪೊಳ್ಳದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಪಿಎಸ್​​ಐ ವಿರುದ್ಧ ದೂರು ದಾಖಲಿಸುವಂತೆ ಮಹಾಸಭಾ ನೇತೃತ್ವದಲ್ಲಿ ನೂರಾರು ಜನರು ಪೊಲೀಸ್​ ಠಾಣೆ ಎದರು ಪ್ರತಿಭಟನೆ ನಡೆಸಿದರು.   ಪಿಎಸ್​ಐ ವಿರುದ್ಧ ದೂರು ದಾಖಲು ಮಾಡಿಕೊಳ್ಳದೇ ಅವರನ್ನು ರಕ್ಷಣೆಗೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪಿಎಸ್​ಐ ಮಣಿಕಂಠ ವಿರುದ್ಧ ಘೋಷಣೆ ಹಾಕಿದರು.

ಹಿರಿಯ ಮಹಾದೇವಪ್ಪಗೌಡ ಪೊಲೀಸ್‌ ಪಾಟೀಲ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಚರ್ಚಿಸಿದರು. ವಿಷಯ ತಿಳಿಯುತ್ತಲೇ ಡಿವೈಎಸ್​​ಪಿ ಮಂಜುನಾಥ ಪಟ್ಟಣಕ್ಕೆ ಆಗಮಿಸಿ  ಧರಣಿನಿರದ ಮನವೊಲಿಸಲು ಯತ್ನಿಸಿದರು. ಕೊನೆಗೆ ಪಿಎಸ್​ಐ ವಿರುದ್ಧ ದೂರು ದಾಖಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:04 am, Sun, 24 September 23

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ