ರಾಯಚೂರಿನಲ್ಲಿ ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ‌ ಪ್ರಕರಣ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು

ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಮಣಿಕಂಠ ವಿರುದ್ಧ ಮಸ್ಕಿ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ರಾಯಚೂರಿನಲ್ಲಿ ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ‌ ಪ್ರಕರಣ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು
ಪಿಎಸ್​ಐ ಮಣಿಕಂಠ
Edited By: ವಿವೇಕ ಬಿರಾದಾರ

Updated on: Sep 24, 2023 | 1:33 PM

ರಾಯಚೂರು ಸೆ.23: ಟ್ರಾಕ್ಟರ್ (Tractor) ಚಾಲಕನ ಮೇಲೆ ಹಲ್ಲೆ‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ (PSI) ಮಣಿಕಂಠ ವಿರುದ್ಧ ಮಸ್ಕಿ (Maski) ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಹಲ್ಲೆ, ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಸೆಪ್ಟೆಂಬರ್ 20 ರಂದು ಮಸ್ಕಿ ಪಟ್ಟಣದಲ್ಲಿ ನಿರುಪಾದಿ ಎಂಬುವರು ಟ್ರ್ಯಾಕ್ಟರ್​ನಲ್ಲಿ ಮಣ್ಣು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಪಿಎಸ್​ಐ ಮಣಿಕಂಠ ಟ್ರ್ಯಾಕ್ಟರ್ ತಡೆದು ಮಣ್ಣು ತೆಗೆದುಕೊಂಡು ಹೋಗಲು 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು. ಅಲ್ಲದೇ ತನ್ನ ಜೀಪ್​ನಲ್ಲಿದ್ದ ಪೈಪ್ ತೆಗೆದುಕೊಂಡು ನಿರುಪಾದಿ ಅವರಿಗೆ ಮನಬಂದಂತೆ ಥಳಿಸಿದ್ದಾರೆ. ಹಾಗೇ ಪಿಎಸ್​ಐ ಮಣಿಕಂಠ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.

ವಾಲ್ಮೀಕಿ ನಾಯಕ ಸಮಾಜದ ಯುವಕ ನಿರುಪಾದಿ ಮೇಲೆ ಹಲ್ಲೆ ನಡೆದು ಮೂರು ದಿನಗಳಾದರೂ ಪ್ರಕರಣ ದಾಖಲಾಗಿರಲಿಲ್ಲ. ಶುಕ್ರವಾರ ವಾಲ್ಮೀಕಿ ನಾಯಕ ಮಾಹಾಸಭಾ ತಾಲೂಕು ಘಟಕವು ಪಿಎಸ್​ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಲಿಂಗಸೂರು ಡಿವೈಎಸ್​​ಪಿ ಮಂಜುನಾಥ ಹಾಗೂ ಸಿಪಿಐ ಬಾಲಚಂದ್ರ ಲಕ್ಕಂ ಅವರಿಗೆ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಜೈಲಿನಿಂದ ಎಸ್ಕೇಪ್ ಆಗಿದ್ದ ಕೊಲೆ ಆರೋಪಿಯನ್ನು ಪೋಷಕರು ವಾಪಸ್​​ ಕರೆತಂದು ಪೊಲೀಸರಿಗೆ ಒಪ್ಪಿಸಿದರು!

ಆದರೆ ಪೊಲೀಸ್​​ ಅಧಿಕಾರಿಗಳು ಯಾವುದೇ ಕ್ರಮ ಕೈಗಪೊಳ್ಳದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಪಿಎಸ್​​ಐ ವಿರುದ್ಧ ದೂರು ದಾಖಲಿಸುವಂತೆ ಮಹಾಸಭಾ ನೇತೃತ್ವದಲ್ಲಿ ನೂರಾರು ಜನರು ಪೊಲೀಸ್​ ಠಾಣೆ ಎದರು ಪ್ರತಿಭಟನೆ ನಡೆಸಿದರು.   ಪಿಎಸ್​ಐ ವಿರುದ್ಧ ದೂರು ದಾಖಲು ಮಾಡಿಕೊಳ್ಳದೇ ಅವರನ್ನು ರಕ್ಷಣೆಗೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪಿಎಸ್​ಐ ಮಣಿಕಂಠ ವಿರುದ್ಧ ಘೋಷಣೆ ಹಾಕಿದರು.

ಹಿರಿಯ ಮಹಾದೇವಪ್ಪಗೌಡ ಪೊಲೀಸ್‌ ಪಾಟೀಲ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಚರ್ಚಿಸಿದರು. ವಿಷಯ ತಿಳಿಯುತ್ತಲೇ ಡಿವೈಎಸ್​​ಪಿ ಮಂಜುನಾಥ ಪಟ್ಟಣಕ್ಕೆ ಆಗಮಿಸಿ  ಧರಣಿನಿರದ ಮನವೊಲಿಸಲು ಯತ್ನಿಸಿದರು. ಕೊನೆಗೆ ಪಿಎಸ್​ಐ ವಿರುದ್ಧ ದೂರು ದಾಖಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:04 am, Sun, 24 September 23

Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
Follow Us