AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಒಣಗಿದ ಬೆಳೆಗೆ ಜೀವ ಕೊಟ್ಟ ಅಕಾಲಿಕ ಮಳೆ, ಮೋಡ ಬಿತ್ತನೆ ಪ್ರಸ್ತಾವನೆ ಇಲ್ಲ ಎಂದ ಕೃಷಿ ಸಚಿವ

ಇಡೀ ರಾಜ್ಯಾದ್ಯಂತ ಬರಗಾಲದ ಛಾಯೆ ಇದೆ. ಇಡೀ ರಾಜ್ಯದ ರೈತರು ಈ ಬಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾನಿಯಾಗಿದ್ದು ಬರಗಾಲದ ಪರಿಹಾರಕ್ಕೆ ರೈತರು ಅರ್ಜಿ ಸಲ್ಲಿಸುತ್ತಿದ್ದಾರೆ. ಆದ್ರೆ ಮಳೆ ಅಭಾವ ಇರೋದ್ರಿಂದ ಮೋಡ ಬಿತ್ತನೆ ಮಾಡ್ಬೇಕಿತ್ತು ಅನ್ನೋ ಚರ್ಚೆ ನಡೀತಿದೆ.

ರಾಯಚೂರು: ಒಣಗಿದ ಬೆಳೆಗೆ ಜೀವ ಕೊಟ್ಟ ಅಕಾಲಿಕ ಮಳೆ, ಮೋಡ ಬಿತ್ತನೆ ಪ್ರಸ್ತಾವನೆ ಇಲ್ಲ ಎಂದ ಕೃಷಿ ಸಚಿವ
ಒಣಗಿದ ಬೆಳೆ
ಭೀಮೇಶ್​​ ಪೂಜಾರ್
| Edited By: |

Updated on: Nov 09, 2023 | 9:33 PM

Share

ರಾಯಚೂರು, ನವೆಂಬರ್ 9: ಬಿಸಿಲುನಾಡು ರಾಯಚೂರಿನಲ್ಲಿ (Raichur) ತೀವ್ರ ಬರಗಾಲಕ್ಕೆ ರೈತರು ಕಂಗಾಲಾಗಿದ್ದಾರೆ. ಈ ಮಧ್ಯೆ, ನೀರಿಲ್ಲದೇ ಒಣಗುತ್ತಿದ್ದ ಬೆಳೆಗಳಿಗೆ ಅಕಾಲಿಕ (Raichur Rains) ಮಳೆ ಜೀವ ಕಳೆ ತುಂಬಿದೆ. ಇತ್ತ ಮೊಡ ಬಿತ್ತನೆ ಪ್ರಸ್ತಾಪ ಸರ್ಕಾರದ ಎದುರು ಇಲ್ಲ ಅಂತ ಕೃಷಿ ಸಚಿವರು ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ನೀರಿಲ್ಲದೇ ಬೆಳೆಗಳು ಒಣಗುತ್ತಿವೆ. ಲಕ್ಷಾಂತರ ರೂ. ಸಾಲ ಸೋಲ ಮಾಡಿ ಬಿತ್ತಿದ್ದ ಬೆಳೆ ರೈತರ ಕಣ್ಣೇದುರೇ ಹಾಳಾಗುತ್ತಿತ್ತು. ಹೀಗಾಗಿ ರೈತರು ಈ ಬಾರಿ ಸಾಲದ ಸುಳಿಗೆ ಸಿಲುಕುವ ಭಯದಲ್ಲಿದ್ದಾರೆ. ಬಿತ್ತಿ ಬೆಳೆದ ಬೆಳೆಗೆ ರೈತರು ಕೆರೆ, ಬಾವಿಗಳಿಂದಲೂ ನೀರು ತಂದು ನೀರುಣಿಸೊ ಯತ್ನ ಕೂಡ ಮಾಡಿದ್ದಾರೆ. ಈ ಮಧ್ಯೆ ಕಳೆದ ಎರಡು ದಿನಗಳಿಂದ ಸುರಿದ ಅಕಾಲಿಕ ಮಳೆಯಿಂದ ರೈತರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಆದ್ರೆ ಬಹುತೇಕ ಕಡೆ ಬೆಳೆ ಇನ್ನೂ ಒಣಗುತ್ತಲೇ ಇದೆ. ಇತ್ತ ಮೊದ ಮೊದಲು ಕಾಳುವೆಗೆ ನೀರು ಹರಿಸದೇ ಇದ್ದದ್ದರಿಂದ ಬೆಳೆ ಹಾಳಾಗೋಕೆ ಪ್ರಮುಖ ಕಾರಣವೂ ಹೌದು. ಹೀಗಾಗಿ ರೈತರು ಆತ್ಮಹತ್ಯೆಯೊಂದೇ ದಾರಿ ಅಂತ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇಡೀ ರಾಜ್ಯಾದ್ಯಂತ ಬರಗಾಲದ ಛಾಯೆ ಇದೆ. ಇಡೀ ರಾಜ್ಯದ ರೈತರು ಈ ಬಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾನಿಯಾಗಿದ್ದು ಬರಗಾಲದ ಪರಿಹಾರಕ್ಕೆ ರೈತರು ಅರ್ಜಿ ಸಲ್ಲಿಸುತ್ತಿದ್ದಾರೆ. ಆದ್ರೆ ಮಳೆ ಅಭಾವ ಇರೋದ್ರಿಂದ ಮೋಡ ಬಿತ್ತನೆ ಮಾಡ್ಬೇಕಿತ್ತು ಅನ್ನೋ ಚರ್ಚೆ ನಡೀತಿದೆ. ಮೋಡ ಬಿತ್ತನೆ ಮಾಡಿದ್ರೆ ಮಳೆಯಾಗ್ತಿತ್ತೆನೋ, ಅದರಿಂದ ಒಣಗುತ್ತಿರೊ ಬೆಳೆಗೆ ಅನಕೂಲವಾಗ್ತಿತ್ತು ಅನ್ನೋ ವಾದವೂ ಇದೆ. ಆದ್ರೆ ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಮೋಡ ಬಿತ್ತನೆ ಸಂಬಂಧ ಸರ್ಕಾರದ ಎದುರು ಯಾವುದೇ ಪ್ರಸ್ತಾವಣೆ ಇಲ್ಲ. ಯಾಕಂದ್ರೆ ಈ ಹಿಂದೆ ಮಾಡಲಾಗಿದ್ದ ಮೋಡ ಬಿತ್ತನೆ ಸಕ್ಸಸ್ ಆಗಿಲ್ಲ. ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ,ರಾಯಚೂರಿನಲ್ಲಿ ರವಿ ಬೋಸರಾಜ್ ಹಾಗೂ ಹಾವೇರಿಯಲ್ಲಿ ಕೋಳಿವಾಡ್ ಮಾಡಿದ್ದಾರೆ. ಸದ್ಯ ಬೆಳೆ ಕಟಾವಿನ ಹಂತಕ್ಕೆ ಬಂದಿರೋದ್ರಿಂದ ಮೋಡ ಬಿತ್ತನೆ ಪ್ರಸ್ತಾವನೆ ಇಲ್ಲ ಅಂತ ರಾಯಚೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಆರಂಭವಾಗಲಿದೆ ಕೃಷಿ ಭಾಗ್ಯ ಯೋಜನೆ: ಸಚಿವ ಸಂಪುಟ ಮಹತ್ವದ ನಿರ್ಧಾರ

ಇತ್ತ ಅಕಾಲಿಕ ಮಳೆಯಿಂದ ಬೆಳೆಗೆ ನೀರು ಸಿಕ್ಕಂತಾಗಿದ್ರೆ ರಾಯಚೂರಿನ ಕೆಲವೆಡೆ ಹೆಚ್ಚಿನ ಮಳೆಯಿಂದ ಬೆಳೆಗಳು ಹಾಳಾಗಿರೊ ಘಟನೆಯೂ ನಡೆದಿದೆ. ಮೆಣಸಿನಕಾಯಿ, ಭತ್ತ ಹಾಗೂ ಕಡಲೆ ಬೆಳೆಗಳು ಹಾಳಾಗಿವೆ. ಅದೆನೇ ಇರ್ಲಿ ರೈತರ ಪರಿಸ್ಥಿತಿ ಮಾತ್ರ ಈ ಬಾರೀ ದೇವರೇ ಬಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?