AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಒಣಗಿದ ಬೆಳೆಗೆ ಜೀವ ಕೊಟ್ಟ ಅಕಾಲಿಕ ಮಳೆ, ಮೋಡ ಬಿತ್ತನೆ ಪ್ರಸ್ತಾವನೆ ಇಲ್ಲ ಎಂದ ಕೃಷಿ ಸಚಿವ

ಇಡೀ ರಾಜ್ಯಾದ್ಯಂತ ಬರಗಾಲದ ಛಾಯೆ ಇದೆ. ಇಡೀ ರಾಜ್ಯದ ರೈತರು ಈ ಬಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾನಿಯಾಗಿದ್ದು ಬರಗಾಲದ ಪರಿಹಾರಕ್ಕೆ ರೈತರು ಅರ್ಜಿ ಸಲ್ಲಿಸುತ್ತಿದ್ದಾರೆ. ಆದ್ರೆ ಮಳೆ ಅಭಾವ ಇರೋದ್ರಿಂದ ಮೋಡ ಬಿತ್ತನೆ ಮಾಡ್ಬೇಕಿತ್ತು ಅನ್ನೋ ಚರ್ಚೆ ನಡೀತಿದೆ.

ರಾಯಚೂರು: ಒಣಗಿದ ಬೆಳೆಗೆ ಜೀವ ಕೊಟ್ಟ ಅಕಾಲಿಕ ಮಳೆ, ಮೋಡ ಬಿತ್ತನೆ ಪ್ರಸ್ತಾವನೆ ಇಲ್ಲ ಎಂದ ಕೃಷಿ ಸಚಿವ
ಒಣಗಿದ ಬೆಳೆ
ಭೀಮೇಶ್​​ ಪೂಜಾರ್
| Edited By: |

Updated on: Nov 09, 2023 | 9:33 PM

Share

ರಾಯಚೂರು, ನವೆಂಬರ್ 9: ಬಿಸಿಲುನಾಡು ರಾಯಚೂರಿನಲ್ಲಿ (Raichur) ತೀವ್ರ ಬರಗಾಲಕ್ಕೆ ರೈತರು ಕಂಗಾಲಾಗಿದ್ದಾರೆ. ಈ ಮಧ್ಯೆ, ನೀರಿಲ್ಲದೇ ಒಣಗುತ್ತಿದ್ದ ಬೆಳೆಗಳಿಗೆ ಅಕಾಲಿಕ (Raichur Rains) ಮಳೆ ಜೀವ ಕಳೆ ತುಂಬಿದೆ. ಇತ್ತ ಮೊಡ ಬಿತ್ತನೆ ಪ್ರಸ್ತಾಪ ಸರ್ಕಾರದ ಎದುರು ಇಲ್ಲ ಅಂತ ಕೃಷಿ ಸಚಿವರು ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ನೀರಿಲ್ಲದೇ ಬೆಳೆಗಳು ಒಣಗುತ್ತಿವೆ. ಲಕ್ಷಾಂತರ ರೂ. ಸಾಲ ಸೋಲ ಮಾಡಿ ಬಿತ್ತಿದ್ದ ಬೆಳೆ ರೈತರ ಕಣ್ಣೇದುರೇ ಹಾಳಾಗುತ್ತಿತ್ತು. ಹೀಗಾಗಿ ರೈತರು ಈ ಬಾರಿ ಸಾಲದ ಸುಳಿಗೆ ಸಿಲುಕುವ ಭಯದಲ್ಲಿದ್ದಾರೆ. ಬಿತ್ತಿ ಬೆಳೆದ ಬೆಳೆಗೆ ರೈತರು ಕೆರೆ, ಬಾವಿಗಳಿಂದಲೂ ನೀರು ತಂದು ನೀರುಣಿಸೊ ಯತ್ನ ಕೂಡ ಮಾಡಿದ್ದಾರೆ. ಈ ಮಧ್ಯೆ ಕಳೆದ ಎರಡು ದಿನಗಳಿಂದ ಸುರಿದ ಅಕಾಲಿಕ ಮಳೆಯಿಂದ ರೈತರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಆದ್ರೆ ಬಹುತೇಕ ಕಡೆ ಬೆಳೆ ಇನ್ನೂ ಒಣಗುತ್ತಲೇ ಇದೆ. ಇತ್ತ ಮೊದ ಮೊದಲು ಕಾಳುವೆಗೆ ನೀರು ಹರಿಸದೇ ಇದ್ದದ್ದರಿಂದ ಬೆಳೆ ಹಾಳಾಗೋಕೆ ಪ್ರಮುಖ ಕಾರಣವೂ ಹೌದು. ಹೀಗಾಗಿ ರೈತರು ಆತ್ಮಹತ್ಯೆಯೊಂದೇ ದಾರಿ ಅಂತ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇಡೀ ರಾಜ್ಯಾದ್ಯಂತ ಬರಗಾಲದ ಛಾಯೆ ಇದೆ. ಇಡೀ ರಾಜ್ಯದ ರೈತರು ಈ ಬಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾನಿಯಾಗಿದ್ದು ಬರಗಾಲದ ಪರಿಹಾರಕ್ಕೆ ರೈತರು ಅರ್ಜಿ ಸಲ್ಲಿಸುತ್ತಿದ್ದಾರೆ. ಆದ್ರೆ ಮಳೆ ಅಭಾವ ಇರೋದ್ರಿಂದ ಮೋಡ ಬಿತ್ತನೆ ಮಾಡ್ಬೇಕಿತ್ತು ಅನ್ನೋ ಚರ್ಚೆ ನಡೀತಿದೆ. ಮೋಡ ಬಿತ್ತನೆ ಮಾಡಿದ್ರೆ ಮಳೆಯಾಗ್ತಿತ್ತೆನೋ, ಅದರಿಂದ ಒಣಗುತ್ತಿರೊ ಬೆಳೆಗೆ ಅನಕೂಲವಾಗ್ತಿತ್ತು ಅನ್ನೋ ವಾದವೂ ಇದೆ. ಆದ್ರೆ ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಮೋಡ ಬಿತ್ತನೆ ಸಂಬಂಧ ಸರ್ಕಾರದ ಎದುರು ಯಾವುದೇ ಪ್ರಸ್ತಾವಣೆ ಇಲ್ಲ. ಯಾಕಂದ್ರೆ ಈ ಹಿಂದೆ ಮಾಡಲಾಗಿದ್ದ ಮೋಡ ಬಿತ್ತನೆ ಸಕ್ಸಸ್ ಆಗಿಲ್ಲ. ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ,ರಾಯಚೂರಿನಲ್ಲಿ ರವಿ ಬೋಸರಾಜ್ ಹಾಗೂ ಹಾವೇರಿಯಲ್ಲಿ ಕೋಳಿವಾಡ್ ಮಾಡಿದ್ದಾರೆ. ಸದ್ಯ ಬೆಳೆ ಕಟಾವಿನ ಹಂತಕ್ಕೆ ಬಂದಿರೋದ್ರಿಂದ ಮೋಡ ಬಿತ್ತನೆ ಪ್ರಸ್ತಾವನೆ ಇಲ್ಲ ಅಂತ ರಾಯಚೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಆರಂಭವಾಗಲಿದೆ ಕೃಷಿ ಭಾಗ್ಯ ಯೋಜನೆ: ಸಚಿವ ಸಂಪುಟ ಮಹತ್ವದ ನಿರ್ಧಾರ

ಇತ್ತ ಅಕಾಲಿಕ ಮಳೆಯಿಂದ ಬೆಳೆಗೆ ನೀರು ಸಿಕ್ಕಂತಾಗಿದ್ರೆ ರಾಯಚೂರಿನ ಕೆಲವೆಡೆ ಹೆಚ್ಚಿನ ಮಳೆಯಿಂದ ಬೆಳೆಗಳು ಹಾಳಾಗಿರೊ ಘಟನೆಯೂ ನಡೆದಿದೆ. ಮೆಣಸಿನಕಾಯಿ, ಭತ್ತ ಹಾಗೂ ಕಡಲೆ ಬೆಳೆಗಳು ಹಾಳಾಗಿವೆ. ಅದೆನೇ ಇರ್ಲಿ ರೈತರ ಪರಿಸ್ಥಿತಿ ಮಾತ್ರ ಈ ಬಾರೀ ದೇವರೇ ಬಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ