AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಡಾದ ಕೃಷ್ಣ; ಹನಿ ನೀರಿಗಾಗಿ ರಾಯಚೂರು ಗ್ರಾಮಗಳಲ್ಲಿ ಕಣ್ಣೀರು, ಸರ್ಕಾರದ ವಿರುದ್ಧ ವಾಗ್ದಾಳಿ

ಕೃಷ್ಣಾ ನದಿ ತೀರದ ಡಿ.ರಾಂಪುರ, ಕುರುವಕಲ, ಕುರುವಕುರ್ದ ಸೇರಿ ಏಳೆಂಟು ಗ್ರಾಮಗಳಲ್ಲಿ ಹನಿ ನೀರಿಗಾಗಿಯೂ ಹಾಹಾಕಾರ ಎದ್ದಿದೆ. ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದಾರೆ. ವೃದ್ಧೆಯೊಬ್ಬರು ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಸರ್ಕಾರ ಎಲ್ಲಿ ಹೋಗಿದೆ? 8 ದಿನಗಳಿಂದ ನೀರು ಬಂದಿಲ್ಲ. ನಾವು ಸ್ನಾನ ಮಾಡಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಬರಡಾದ ಕೃಷ್ಣ; ಹನಿ ನೀರಿಗಾಗಿ ರಾಯಚೂರು ಗ್ರಾಮಗಳಲ್ಲಿ ಕಣ್ಣೀರು, ಸರ್ಕಾರದ ವಿರುದ್ಧ ವಾಗ್ದಾಳಿ
ಬರಡಾದ ಕೃಷ್ಣ; ಹನಿ ನೀರಿಗಾಗಿ ರಾಯಚೂರು ಗ್ರಾಮಗಳಲ್ಲಿ ಕಣ್ಣೀರು
ಭೀಮೇಶ್​​ ಪೂಜಾರ್
| Edited By: ಆಯೇಷಾ ಬಾನು|

Updated on: Feb 18, 2024 | 8:37 AM

Share

ರಾಯಚೂರು, ಫೆ.18: ರಾಯಚೂರು (Raichur) ಜಿಲ್ಲೆಯ ಎಡ ಮತ್ತು ಬಲಭಾಗದಲ್ಲಿ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳು ಹರಿಯುತ್ತಿದ್ದರೂ, ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ (Drinking Water Crisis). ನೀರಿಲ್ಲದೇ ಆ ಗ್ರಾಮದಲ್ಲಿ ಕಳೆದೊಂದು ವಾರದಿಂದ‌‌ ಶೇಕಡಾ 60% ರಷ್ಟು ಜನ ಸ್ನಾನವನ್ನೇ ಮಾಡಿಲ್ಲ. ಹೇಗಾದರೂ ಮಾಡಿ ಕುಡಿಯುವುದಕ್ಕಾದರೂ ನೀರಿನ ವ್ಯವಸ್ಥೆ ಮಾಡಿಸಿ ಎಂದು ಗ್ರಾಮಸ್ಥರು ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದಾರೆ.

ತೆಲಂಗಾಣ ಗಡಿಯ ರಾಯಚೂರು ತಾಲೂಕಿನ ಡಿ.ರಾಂಪುರ‌‌ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಕೃಷ್ಣಾ ನದಿ ತೀರದ ಡಿ.ರಾಂಪುರ, ಕುರುವಕಲ, ಕುರುವಕುರ್ದ ಸೇರಿ ಏಳೆಂಟು ಗ್ರಾಮಗಳಲ್ಲಿ ಹನಿ ನೀರಿಗಾಗಿಯೂ ಜನರು ಪರದಾಡುವಂತಹ ಪರಿಸ್ಥಿತಿ ಇದೆ. ಕೃಷ್ಣಾ ನದಿ ಮೇಲೆ ಅವಲಂಬಿತವಾಗಿದ್ದ ಗ್ರಾಮಗಳಲ್ಲಿ ಕಳೆದ 10ಕ್ಕೂ ಹೆಚ್ಚು ದಿನಗಳಿಂದ ನೀರಿಗಾಗಿ ಪರಿತಪಿಸುವಂತಹ ಸ್ಥಿತಿ ಇದೆ. ಭೀಕರ ಬರಗಾಲಕ್ಕೆ ಕೃಷ್ಣಾ ನದಿ ಒಣಗಿ ಹೋಗಿದೆ. ಈ ಹಿನ್ನೆಲೆ ಬೇಸಿಗೆ ಪ್ರಾರಂಭದಲ್ಲೇ ಈ ಭಾಗದ ಜನರಿಗೆ ನೀರಿನ ಸಮಸ್ಯೆ ಶುರುವಾಗಿದೆ. ಮೂರ್ನಾಲ್ಕು‌ ಕಿಮಿ ದೂರ ಸಾಗಿ ಜಮೀನುಗಳಲ್ಲಿನ ಬೋರ್ ವೆಲ್ ನೀರನ್ನ ತಂದು ಜನ ಜೀವನ ಸಾಗಿಸಬೇಕಿದೆ. ಇತ್ತ ನಿತ್ಯ ನೂರಾರು ಗ್ರಾಮಸ್ಥರು ನೀರಿಗೆ ದುಂಬಾಲು ಬೀಳುತ್ತಿರುವ ಹಿನ್ನೆಲೆ ಬೆಳೆಗೆ ನೀರು ಸಾಕಾಗಲ್ಲ ಅಂತ ಜಮೀನಿನ ಮಾಲೀಕರು ಕೂಡ ನಿತ್ಯ ನೀರು ಒದಗಿಸಲು ಹಿಂದೇಟು ಹಾಕುತ್ತಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಬಿಂದಿಗೆ ನೀರಿಗಾಗಿ ಜನರ ಪರದಾಟ; ಶಾಲೆ ಬಿಟ್ಟು ನೀರು ತುಂಬಿಸೋದನ್ನೇ ಕೆಲಸ ಮಾಡಿಕೊಂಡಿರುವ ಶಾಲಾ ಮಕ್ಕಳು

ಸರ್ಕಾರದ ವಿರುದ್ಧ ವೃದ್ಧೆ ಕಿಡಿ

ಇನ್ನು ವೃದ್ಧೆಯೊಬ್ಬರು ತೆಲುಗಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಎಂಟು ದಿನ ಆಯ್ತು ನೀರಿಲ್ಲ. ಸ್ನಾನ ಮಾಡಲು ನೀರಿಲ್ಲ, ಕುಡಿಯಲು ನೀರಿಲ್ಲ. ಹೊಲದವರು ನೀರು ಬಿಡ್ತಿಲ್ಲ. ಬೋರ್ ವೆಲ್ ನೀರನ್ನ ತಂದು ಸ್ನಾನ ಮಾಡಿದ್ರೆ, ಮೈ ಎಲ್ಲಾ ತುರಿಕೆ ಬರ್ತಿದೆ. ಸರ್ಕಾರ ಎಲ್ಲಿ ಹೋಗಿದೆ? ಅಲ್ಲಿ ಓಟು ಹಾಕಿ ಇಲ್ಲಿ ಹೋಗಿ ಅಂತಾರೆ. ಇಲ್ಲಿ ನೀರಿಲ್ಲದೇ ಸತ್ತು ಹೋಗೊ ಸ್ಥಿತಿ ಬಂದಿದೆ ಅಂತ ವೃದ್ಧೆ ನರಸಮ್ಮ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ