AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯನ್ನು ಪತ್ನಿ ಕೃಷ್ಣಾ ನದಿಗೆ ತಳ್ಳಿದ ಪ್ರಕರಣ: ಪೋಕ್ಸೋ ಕಾಯ್ದೆಯಡಿ ಪತಿ ತಾತಪ್ಪ ಅರೆಸ್ಟ್

ರಾಯಚೂರಿನಲ್ಲಿ ಪತಿಯನ್ನು ಪತ್ನಿ ಕೃಷ್ಣಾ ನದಿಗೆ ತಳ್ಳಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪೋಕ್ಸೋ ಕಾಯ್ದೆಯಡಿ ಪತಿಯನ್ನು ಬಂಧಿಸಲಾಗಿದೆ. ತಾತಪ್ಪ ವಿರುದ್ಧ ಬಾಲ್ಯ ವಿವಾಹ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತಿ ತಾತಪ್ಪ 16 ವರ್ಷದ ಅಪ್ರಾಪ್ತೆಯನ್ನು ಮದುವೆಯಾಗಿದ್ದನು.

ಪತಿಯನ್ನು ಪತ್ನಿ ಕೃಷ್ಣಾ ನದಿಗೆ ತಳ್ಳಿದ ಪ್ರಕರಣ: ಪೋಕ್ಸೋ ಕಾಯ್ದೆಯಡಿ ಪತಿ ತಾತಪ್ಪ ಅರೆಸ್ಟ್
ಆರೋಪಿ ತಾತಪ್ಪ
ಭೀಮೇಶ್​​ ಪೂಜಾರ್
| Edited By: |

Updated on: Aug 03, 2025 | 9:09 PM

Share

ರಾಯಚೂರು, ಆಗಸ್ಟ್​ 03: ಪತಿಯನ್ನು ಪತ್ನಿ ಕೃಷ್ಣಾ ನದಿಗೆ ತಳ್ಳಿದ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಪೋಕ್ಸೋ ಕಾಯ್ದೆಯಡಿ (Pocso Case) ಪತಿ ತಾತಪ್ಪನನ್ನು ರಾಯಚೂರು (Raichur) ಮಹಿಳಾ ಪೊಲೀಸರು ಬಂಧಿಸಿದ್ದಾರೆ. ತಾತಪ್ಪ ವಿರುದ್ಧ ಬಾಲ್ಯ ವಿವಾಹ (Child Marriage) ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತಿ ತಾತಪ್ಪ 16 ವರ್ಷದ ಅಪ್ರಾಪ್ತೆಯನ್ನು ಮದುವೆಯಾಗಿದ್ದನು. ಕೌಟುಂಬಿಕ ಕಲಹ ಹಿನ್ನೆಲೆ ಪತಿ ತಾತಪ್ಪನನ್ನು ಪತ್ನಿ ಕೊಲೆ ಮಾಡಲು ಯತ್ನಿಸಿದ್ದಳು ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ವೇಳೆ ಬಾಲ್ಯ ವಿವಾಹವಾಗಿದ್ದು ಬಹಿರಂಗವಾಗಿದೆ. ಈ ಸಂಬಂಧ ತಾತಪ್ಪನನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?

ಇತ್ತೀಚೆಗೆ ರಾಯಚೂರು ತಾಲ್ಲೂಕಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿಂದ ಪತಿ ತಾತಪ್ಪನನ್ನ ತಳ್ಳಿ ಪತ್ನಿ ಕೊಲೆಗೆ ಯತ್ನಿಸಿದ್ದಳು ಎನ್ನುವ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆಗೆ ನಡೆಸಿದ ಪೊಲೀಸರಿಗೆ ತಾತಪ್ಪನ ಪತ್ನಿ ಅಪ್ರಾಪ್ತೆ ಎನ್ನುವ ವಿಷಯ ಗೊತ್ತಾಗಿತ್ತು. ಈ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗದ ಸೂಚನೆ ಮೆರೆಗೆ ರಾಯಚೂರಿನ ಮಹಿಳಾ ಠಾಣೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ರಡಿ ಕೇಸ್ ದಾಖಲಾಗಿತ್ತು. ಆದರೆಮ ಪೋಕ್ಸೋ ಕಾಯ್ದೆ-2012 ದಾಖಲಾಗದ ಹಿನ್ನೆಲೆ ರಾಯಚೂರು ಮಹಿಳಾ ಠಾಣೆ ಪೊಲೀಸರು ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಗರಂ ಆಗಿತ್ತು. ಈ ಬಗ್ಗೆ ಖುದ್ದು ಐಜಿಗೆ ಮಕ್ಕಳ ಆಯೋಗ ದೂರು ನೀಡಿದ್ದರು.

ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ದೂರು ನೀಡುತ್ತಿದ್ದಂತೆ ಬಾಲ್ಯವಿವಾಹ ನಿಷೇಧ ಕಾಯಿದೆ ಅಡಿ ಪ್ರಕರಣದಲ್ಲಿ ಸಿಲುಕಿದ್ದ ಪತಿ ತಾತಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಪೋಕ್ಸೋ ಕಾಯಿದೆ ಅಡಿ ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ಪತಿ ತಾತಪ್ಪನಿಗೆ ಸಂಕಷ್ಟ..!

ತಾತಪ್ಪನ ಪತ್ನಿ ಬಾಲ್ಯ ವಿವಾಹದ ಬಗ್ಗೆ ಇಂಚಿಂಚು ಮಾಹಿತಿಯನ್ನ ಹೇಳಿದ್ದರು. ಪೊಲೀಸರ ಎದುರು ಅಳಲನ್ನ ತೋಡಿಕೊಂಡಿದ್ದರು. ಬಾಲ್ಯ ವಿವಾಹದ ಬಳಿಕ ತನ್ನ ಸಾಂಸಾರಿಕ ಜೀವನದ ಬಗ್ಗೆ ಹೇಳಿಕೆ ದಾಖಲಿಸಿದ್ದರು. “ಅಪ್ರಾಪ್ತೆ ಅಂತ ಗೊತ್ತಿದ್ದರೂ ಉಳಿದ ಆರೋಪಿಗಳು ಎ-1 ಆರೋಪಿ ತಾತಪ್ಪನ ಜೊತೆ ಮದುವೆ ಮಾಡಿಸಿದ್ದರು. ಬಳಿಕ ಮದುವೆಯಾದ 11ನೇ ದಿನಕ್ಕೆ ಫಸ್ಟ್ ನೈಟ್ ಕೂಡ ಮಾಡಿಸಿರುವುದಾಗಿ ಅಪ್ರಾಪ್ತೆ ಹೇಳಿಕೆ ದಾಖಲಿಸಿದ್ದಳು”.

ಇದನ್ನೂ ಓದಿ: ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ಪತಿ ವಿರುದ್ಧ ಪೋಕ್ಸೋ ಕೇಸ್: ಜೈಲೂಟ ಫಿಕ್ಸ್!

ಈ ಹೇಳಿಕೆ ಆಧಾರದಲ್ಲಿ ರಾಯಚೂರು ಮಹಿಳಾ ಠಾಣೆ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬಾಲ್ಯ ವಿವಾಹ ನಿಷೇಧ ಕಾಯ್ದೆ ಜೊತೆಗೆ ಪೋಕ್ಸೋ ಕಾಯ್ದೆ-2012ರ ಅಡಿ ಪತಿ ತಾತಪ್ಪ ಸೇರಿ ಆತನ ಕುಟುಂಬದ 10 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?