AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯನ್ನು ಪತ್ನಿ ಕೃಷ್ಣಾ ನದಿಗೆ ತಳ್ಳಿದ ಪ್ರಕರಣ: ಪೋಕ್ಸೋ ಕಾಯ್ದೆಯಡಿ ಪತಿ ತಾತಪ್ಪ ಅರೆಸ್ಟ್

ರಾಯಚೂರಿನಲ್ಲಿ ಪತಿಯನ್ನು ಪತ್ನಿ ಕೃಷ್ಣಾ ನದಿಗೆ ತಳ್ಳಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪೋಕ್ಸೋ ಕಾಯ್ದೆಯಡಿ ಪತಿಯನ್ನು ಬಂಧಿಸಲಾಗಿದೆ. ತಾತಪ್ಪ ವಿರುದ್ಧ ಬಾಲ್ಯ ವಿವಾಹ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತಿ ತಾತಪ್ಪ 16 ವರ್ಷದ ಅಪ್ರಾಪ್ತೆಯನ್ನು ಮದುವೆಯಾಗಿದ್ದನು.

ಪತಿಯನ್ನು ಪತ್ನಿ ಕೃಷ್ಣಾ ನದಿಗೆ ತಳ್ಳಿದ ಪ್ರಕರಣ: ಪೋಕ್ಸೋ ಕಾಯ್ದೆಯಡಿ ಪತಿ ತಾತಪ್ಪ ಅರೆಸ್ಟ್
ಆರೋಪಿ ತಾತಪ್ಪ
ಭೀಮೇಶ್​​ ಪೂಜಾರ್
| Edited By: ವಿವೇಕ ಬಿರಾದಾರ|

Updated on: Aug 03, 2025 | 9:09 PM

Share

ರಾಯಚೂರು, ಆಗಸ್ಟ್​ 03: ಪತಿಯನ್ನು ಪತ್ನಿ ಕೃಷ್ಣಾ ನದಿಗೆ ತಳ್ಳಿದ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಪೋಕ್ಸೋ ಕಾಯ್ದೆಯಡಿ (Pocso Case) ಪತಿ ತಾತಪ್ಪನನ್ನು ರಾಯಚೂರು (Raichur) ಮಹಿಳಾ ಪೊಲೀಸರು ಬಂಧಿಸಿದ್ದಾರೆ. ತಾತಪ್ಪ ವಿರುದ್ಧ ಬಾಲ್ಯ ವಿವಾಹ (Child Marriage) ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತಿ ತಾತಪ್ಪ 16 ವರ್ಷದ ಅಪ್ರಾಪ್ತೆಯನ್ನು ಮದುವೆಯಾಗಿದ್ದನು. ಕೌಟುಂಬಿಕ ಕಲಹ ಹಿನ್ನೆಲೆ ಪತಿ ತಾತಪ್ಪನನ್ನು ಪತ್ನಿ ಕೊಲೆ ಮಾಡಲು ಯತ್ನಿಸಿದ್ದಳು ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ವೇಳೆ ಬಾಲ್ಯ ವಿವಾಹವಾಗಿದ್ದು ಬಹಿರಂಗವಾಗಿದೆ. ಈ ಸಂಬಂಧ ತಾತಪ್ಪನನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?

ಇತ್ತೀಚೆಗೆ ರಾಯಚೂರು ತಾಲ್ಲೂಕಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿಂದ ಪತಿ ತಾತಪ್ಪನನ್ನ ತಳ್ಳಿ ಪತ್ನಿ ಕೊಲೆಗೆ ಯತ್ನಿಸಿದ್ದಳು ಎನ್ನುವ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆಗೆ ನಡೆಸಿದ ಪೊಲೀಸರಿಗೆ ತಾತಪ್ಪನ ಪತ್ನಿ ಅಪ್ರಾಪ್ತೆ ಎನ್ನುವ ವಿಷಯ ಗೊತ್ತಾಗಿತ್ತು. ಈ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗದ ಸೂಚನೆ ಮೆರೆಗೆ ರಾಯಚೂರಿನ ಮಹಿಳಾ ಠಾಣೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ರಡಿ ಕೇಸ್ ದಾಖಲಾಗಿತ್ತು. ಆದರೆಮ ಪೋಕ್ಸೋ ಕಾಯ್ದೆ-2012 ದಾಖಲಾಗದ ಹಿನ್ನೆಲೆ ರಾಯಚೂರು ಮಹಿಳಾ ಠಾಣೆ ಪೊಲೀಸರು ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಗರಂ ಆಗಿತ್ತು. ಈ ಬಗ್ಗೆ ಖುದ್ದು ಐಜಿಗೆ ಮಕ್ಕಳ ಆಯೋಗ ದೂರು ನೀಡಿದ್ದರು.

ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ದೂರು ನೀಡುತ್ತಿದ್ದಂತೆ ಬಾಲ್ಯವಿವಾಹ ನಿಷೇಧ ಕಾಯಿದೆ ಅಡಿ ಪ್ರಕರಣದಲ್ಲಿ ಸಿಲುಕಿದ್ದ ಪತಿ ತಾತಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಪೋಕ್ಸೋ ಕಾಯಿದೆ ಅಡಿ ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ಪತಿ ತಾತಪ್ಪನಿಗೆ ಸಂಕಷ್ಟ..!

ತಾತಪ್ಪನ ಪತ್ನಿ ಬಾಲ್ಯ ವಿವಾಹದ ಬಗ್ಗೆ ಇಂಚಿಂಚು ಮಾಹಿತಿಯನ್ನ ಹೇಳಿದ್ದರು. ಪೊಲೀಸರ ಎದುರು ಅಳಲನ್ನ ತೋಡಿಕೊಂಡಿದ್ದರು. ಬಾಲ್ಯ ವಿವಾಹದ ಬಳಿಕ ತನ್ನ ಸಾಂಸಾರಿಕ ಜೀವನದ ಬಗ್ಗೆ ಹೇಳಿಕೆ ದಾಖಲಿಸಿದ್ದರು. “ಅಪ್ರಾಪ್ತೆ ಅಂತ ಗೊತ್ತಿದ್ದರೂ ಉಳಿದ ಆರೋಪಿಗಳು ಎ-1 ಆರೋಪಿ ತಾತಪ್ಪನ ಜೊತೆ ಮದುವೆ ಮಾಡಿಸಿದ್ದರು. ಬಳಿಕ ಮದುವೆಯಾದ 11ನೇ ದಿನಕ್ಕೆ ಫಸ್ಟ್ ನೈಟ್ ಕೂಡ ಮಾಡಿಸಿರುವುದಾಗಿ ಅಪ್ರಾಪ್ತೆ ಹೇಳಿಕೆ ದಾಖಲಿಸಿದ್ದಳು”.

ಇದನ್ನೂ ಓದಿ: ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ಪತಿ ವಿರುದ್ಧ ಪೋಕ್ಸೋ ಕೇಸ್: ಜೈಲೂಟ ಫಿಕ್ಸ್!

ಈ ಹೇಳಿಕೆ ಆಧಾರದಲ್ಲಿ ರಾಯಚೂರು ಮಹಿಳಾ ಠಾಣೆ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬಾಲ್ಯ ವಿವಾಹ ನಿಷೇಧ ಕಾಯ್ದೆ ಜೊತೆಗೆ ಪೋಕ್ಸೋ ಕಾಯ್ದೆ-2012ರ ಅಡಿ ಪತಿ ತಾತಪ್ಪ ಸೇರಿ ಆತನ ಕುಟುಂಬದ 10 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್