AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯನ್ನು ಪತ್ನಿ ಕೃಷ್ಣಾ ನದಿಗೆ ತಳ್ಳಿದ ಪ್ರಕರಣ: ಪೋಕ್ಸೋ ಕಾಯ್ದೆಯಡಿ ಪತಿ ತಾತಪ್ಪ ಅರೆಸ್ಟ್

ರಾಯಚೂರಿನಲ್ಲಿ ಪತಿಯನ್ನು ಪತ್ನಿ ಕೃಷ್ಣಾ ನದಿಗೆ ತಳ್ಳಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪೋಕ್ಸೋ ಕಾಯ್ದೆಯಡಿ ಪತಿಯನ್ನು ಬಂಧಿಸಲಾಗಿದೆ. ತಾತಪ್ಪ ವಿರುದ್ಧ ಬಾಲ್ಯ ವಿವಾಹ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತಿ ತಾತಪ್ಪ 16 ವರ್ಷದ ಅಪ್ರಾಪ್ತೆಯನ್ನು ಮದುವೆಯಾಗಿದ್ದನು.

ಪತಿಯನ್ನು ಪತ್ನಿ ಕೃಷ್ಣಾ ನದಿಗೆ ತಳ್ಳಿದ ಪ್ರಕರಣ: ಪೋಕ್ಸೋ ಕಾಯ್ದೆಯಡಿ ಪತಿ ತಾತಪ್ಪ ಅರೆಸ್ಟ್
ಆರೋಪಿ ತಾತಪ್ಪ
ಭೀಮೇಶ್​​ ಪೂಜಾರ್
| Edited By: |

Updated on: Aug 03, 2025 | 9:09 PM

Share

ರಾಯಚೂರು, ಆಗಸ್ಟ್​ 03: ಪತಿಯನ್ನು ಪತ್ನಿ ಕೃಷ್ಣಾ ನದಿಗೆ ತಳ್ಳಿದ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಪೋಕ್ಸೋ ಕಾಯ್ದೆಯಡಿ (Pocso Case) ಪತಿ ತಾತಪ್ಪನನ್ನು ರಾಯಚೂರು (Raichur) ಮಹಿಳಾ ಪೊಲೀಸರು ಬಂಧಿಸಿದ್ದಾರೆ. ತಾತಪ್ಪ ವಿರುದ್ಧ ಬಾಲ್ಯ ವಿವಾಹ (Child Marriage) ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತಿ ತಾತಪ್ಪ 16 ವರ್ಷದ ಅಪ್ರಾಪ್ತೆಯನ್ನು ಮದುವೆಯಾಗಿದ್ದನು. ಕೌಟುಂಬಿಕ ಕಲಹ ಹಿನ್ನೆಲೆ ಪತಿ ತಾತಪ್ಪನನ್ನು ಪತ್ನಿ ಕೊಲೆ ಮಾಡಲು ಯತ್ನಿಸಿದ್ದಳು ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ವೇಳೆ ಬಾಲ್ಯ ವಿವಾಹವಾಗಿದ್ದು ಬಹಿರಂಗವಾಗಿದೆ. ಈ ಸಂಬಂಧ ತಾತಪ್ಪನನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?

ಇತ್ತೀಚೆಗೆ ರಾಯಚೂರು ತಾಲ್ಲೂಕಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿಂದ ಪತಿ ತಾತಪ್ಪನನ್ನ ತಳ್ಳಿ ಪತ್ನಿ ಕೊಲೆಗೆ ಯತ್ನಿಸಿದ್ದಳು ಎನ್ನುವ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆಗೆ ನಡೆಸಿದ ಪೊಲೀಸರಿಗೆ ತಾತಪ್ಪನ ಪತ್ನಿ ಅಪ್ರಾಪ್ತೆ ಎನ್ನುವ ವಿಷಯ ಗೊತ್ತಾಗಿತ್ತು. ಈ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗದ ಸೂಚನೆ ಮೆರೆಗೆ ರಾಯಚೂರಿನ ಮಹಿಳಾ ಠಾಣೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ರಡಿ ಕೇಸ್ ದಾಖಲಾಗಿತ್ತು. ಆದರೆಮ ಪೋಕ್ಸೋ ಕಾಯ್ದೆ-2012 ದಾಖಲಾಗದ ಹಿನ್ನೆಲೆ ರಾಯಚೂರು ಮಹಿಳಾ ಠಾಣೆ ಪೊಲೀಸರು ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಗರಂ ಆಗಿತ್ತು. ಈ ಬಗ್ಗೆ ಖುದ್ದು ಐಜಿಗೆ ಮಕ್ಕಳ ಆಯೋಗ ದೂರು ನೀಡಿದ್ದರು.

ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ದೂರು ನೀಡುತ್ತಿದ್ದಂತೆ ಬಾಲ್ಯವಿವಾಹ ನಿಷೇಧ ಕಾಯಿದೆ ಅಡಿ ಪ್ರಕರಣದಲ್ಲಿ ಸಿಲುಕಿದ್ದ ಪತಿ ತಾತಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಪೋಕ್ಸೋ ಕಾಯಿದೆ ಅಡಿ ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ಪತಿ ತಾತಪ್ಪನಿಗೆ ಸಂಕಷ್ಟ..!

ತಾತಪ್ಪನ ಪತ್ನಿ ಬಾಲ್ಯ ವಿವಾಹದ ಬಗ್ಗೆ ಇಂಚಿಂಚು ಮಾಹಿತಿಯನ್ನ ಹೇಳಿದ್ದರು. ಪೊಲೀಸರ ಎದುರು ಅಳಲನ್ನ ತೋಡಿಕೊಂಡಿದ್ದರು. ಬಾಲ್ಯ ವಿವಾಹದ ಬಳಿಕ ತನ್ನ ಸಾಂಸಾರಿಕ ಜೀವನದ ಬಗ್ಗೆ ಹೇಳಿಕೆ ದಾಖಲಿಸಿದ್ದರು. “ಅಪ್ರಾಪ್ತೆ ಅಂತ ಗೊತ್ತಿದ್ದರೂ ಉಳಿದ ಆರೋಪಿಗಳು ಎ-1 ಆರೋಪಿ ತಾತಪ್ಪನ ಜೊತೆ ಮದುವೆ ಮಾಡಿಸಿದ್ದರು. ಬಳಿಕ ಮದುವೆಯಾದ 11ನೇ ದಿನಕ್ಕೆ ಫಸ್ಟ್ ನೈಟ್ ಕೂಡ ಮಾಡಿಸಿರುವುದಾಗಿ ಅಪ್ರಾಪ್ತೆ ಹೇಳಿಕೆ ದಾಖಲಿಸಿದ್ದಳು”.

ಇದನ್ನೂ ಓದಿ: ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ಪತಿ ವಿರುದ್ಧ ಪೋಕ್ಸೋ ಕೇಸ್: ಜೈಲೂಟ ಫಿಕ್ಸ್!

ಈ ಹೇಳಿಕೆ ಆಧಾರದಲ್ಲಿ ರಾಯಚೂರು ಮಹಿಳಾ ಠಾಣೆ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬಾಲ್ಯ ವಿವಾಹ ನಿಷೇಧ ಕಾಯ್ದೆ ಜೊತೆಗೆ ಪೋಕ್ಸೋ ಕಾಯ್ದೆ-2012ರ ಅಡಿ ಪತಿ ತಾತಪ್ಪ ಸೇರಿ ಆತನ ಕುಟುಂಬದ 10 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್