AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

YTPSಗೆ ಕಲ್ಲಿದ್ದಲು ಅಭಾವ: ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಎದುರಾಗೋ ಆತಂಕ!

ರಾಯಚೂರು: ರಾಜ್ಯದ ಅತ್ಯಂತ ಪ್ರಮುಖ ವಿದ್ಯುತ್ ಉತ್ಪಾದನಾ ಯೋಜನೆಗಳಲ್ಲಿ ಯರಮರಸ್ ಕಲ್ಲಿದ್ದಲು ವಿದ್ಯುತ್ ಉತ್ಪಾದನಾ ಘಟಕವೂ ಒಂದು. ಇಂತಾ ವೈಟಿಪಿಎಸ್​ಗೆ ಡಬಲ್ ಶಾಕ್ ಎದುರಾಗಿದ್ದು, ಒಂದ್ಕಡೆ ಕಲ್ಲಿದ್ದಲು ಅಭಾವ ಎದುರಾಗಿದ್ರೆ.. ಮತ್ತೊಂದೆಡೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ವೈಟಿಪಿಎಸ್ ಯೋಜನೆಯೇ ನಿರರ್ಥಕವಾಗೋ ಸಾಧ್ಯತೆಗಳು ಕಂಡು ಬರ್ತಿವೆ. ರಾಜ್ಯದ ಅತ್ಯಂತ ಪ್ರಮುಖ ವಿದ್ಯುತ್ ಉತ್ಪಾದನಾ ಯೋಜನೆಗಳು. ಅದ್ರಲ್ಲೂ ಕಲ್ಲಿದ್ದಲು ಬಳಸಿ ವಿದ್ಯುತ್ ಉತ್ಪಾದನಾ ಕೇಂದ್ರಗಳು ಅಂದ್ರೆ ಜನರ ಕಣ್ಣ ಮುಂದೆ ಬರೋದೇ ಆರ್​ಟಿಪಿಎಸ್ ಮತ್ತು ವೈಟಿಪಿಎಸ್. ಇದ್ರಲ್ಲಿ ಯರಮರಸ್​ನಲ್ಲಿರೋ ವಿದ್ಯುತ್ […]

YTPSಗೆ ಕಲ್ಲಿದ್ದಲು ಅಭಾವ: ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಎದುರಾಗೋ ಆತಂಕ!
ಸಾಧು ಶ್ರೀನಾಥ್​
|

Updated on: Feb 21, 2020 | 4:38 PM

Share

ರಾಯಚೂರು: ರಾಜ್ಯದ ಅತ್ಯಂತ ಪ್ರಮುಖ ವಿದ್ಯುತ್ ಉತ್ಪಾದನಾ ಯೋಜನೆಗಳಲ್ಲಿ ಯರಮರಸ್ ಕಲ್ಲಿದ್ದಲು ವಿದ್ಯುತ್ ಉತ್ಪಾದನಾ ಘಟಕವೂ ಒಂದು. ಇಂತಾ ವೈಟಿಪಿಎಸ್​ಗೆ ಡಬಲ್ ಶಾಕ್ ಎದುರಾಗಿದ್ದು, ಒಂದ್ಕಡೆ ಕಲ್ಲಿದ್ದಲು ಅಭಾವ ಎದುರಾಗಿದ್ರೆ.. ಮತ್ತೊಂದೆಡೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ವೈಟಿಪಿಎಸ್ ಯೋಜನೆಯೇ ನಿರರ್ಥಕವಾಗೋ ಸಾಧ್ಯತೆಗಳು ಕಂಡು ಬರ್ತಿವೆ.

ರಾಜ್ಯದ ಅತ್ಯಂತ ಪ್ರಮುಖ ವಿದ್ಯುತ್ ಉತ್ಪಾದನಾ ಯೋಜನೆಗಳು. ಅದ್ರಲ್ಲೂ ಕಲ್ಲಿದ್ದಲು ಬಳಸಿ ವಿದ್ಯುತ್ ಉತ್ಪಾದನಾ ಕೇಂದ್ರಗಳು ಅಂದ್ರೆ ಜನರ ಕಣ್ಣ ಮುಂದೆ ಬರೋದೇ ಆರ್​ಟಿಪಿಎಸ್ ಮತ್ತು ವೈಟಿಪಿಎಸ್. ಇದ್ರಲ್ಲಿ ಯರಮರಸ್​ನಲ್ಲಿರೋ ವಿದ್ಯುತ್ ಉತ್ಪಾದನಾ ಘಟಕದಲ್ಲಿ 1,600 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಬಹುದು.

ವಿದ್ಯುತ್ ಕ್ಷಾಮ ಎದುರಾಗೋ ಆತಂಕ: ಇಂತಾ ವೈಟಿಪಿಎಸ್​ಗೆ ಶಾಶ್ವತ ಕಲ್ಲಿದ್ದಲು ಪೂರೈಸಲು, ತೆಲಂಗಾಣದ ಸಿಂಗರೇಣಿ ಕಲ್ಲಿದ್ದಲು ಗಣಿ ಕಂಪನಿ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ವೈಟಿಪಿಎಸ್​ಗೆ ವರ್ಷಕ್ಕೆ 58 ಲಕ್ಷ ಟನ್ ಕಲ್ಲಿದ್ದಲು ಬೇಕಿದೆ. ಆದ್ರೆ, ಅಷ್ಟು ಕಲ್ಲಿದ್ದಲು ಪೂರೈಕೆ ಆಗ್ತಿಲ್ಲ. ಇದ್ರಿಂದಾಗಿ ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಎದುರಾಗೋ ಆತಂಕ ಸೃಷ್ಟಿಯಾಗಿದೆ.

ಕಲ್ಲಿದ್ದಲು ಖರೀದಿಯಲ್ಲಿ ಅವ್ಯವಹಾರ ಆರೋಪ: ಇದರ ಜೊತೆಗೆ ಕಲ್ಲಿದ್ದಲು ಖರೀದಿ ಮತ್ತು ಸಾಗಾಣಿಕೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಅನ್ನೋ ಆರೋಪ ಕೇಳಿ ಬಂದಿದೆ. ವೈಟಿಪಿಎಸ್ ಘಟಕಕ್ಕೆ ಕಲ್ಲಿದ್ದಲು ಪೂರೈಸೋ ಸಿಂಗರೇಣಿ ಕಲ್ಲಿದ್ದಲು ಗಣಿಗೆ ಕಳೆದ ವರ್ಷ ಒಪ್ಪಂದದ ದರ ಮೀರಿ 15 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಪಾವತಿಸಲಾಗಿದೆ ಅನ್ನೋ ಆರೋಪವೂ ಇದೆ. ಇನ್ನು ಆರ್​ ಟಿಪಿಎಸ್​ನಿಂದ ಕಲ್ಲಿದ್ದಲು ಸಾಗಾಣಿಕೆಗೆ 25 ಕೋಟಿ ಹಣ ಖರ್ಚು ಮಾಡಲಾಗಿದೆ.

2015 ರಲ್ಲೇ ವೈಟಿಪಿಎಸ್ ಘಟಕಕ್ಕೆ ಕಲ್ಲಿದ್ದಲು ಸಾಗಿಸುವ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿತ್ತು. ಎರಡು ಏಜೆನ್ಸಿಗಳಿಗೆ ರೈಲ್ವೆ ಟ್ರಾಕ್ ನಿರ್ಮಾಣ ಕಾಮಗಾರಿಯನ್ನ 1 ವರ್ಷದೊಳಗೆ ಪೂರ್ಣಗೊಳಿಸಲು ಷರತ್ತು ವಿಧಿಸಲಾಗಿತ್ತು. ಇದುವರೆಗೆ ಈ ಕಾಮಗಾರಿ ಇನ್ನೂ ಮುಗಿದಿಲ್ಲ. ಈ ಬಗ್ಗೆ ಅಧಿಕಾರಿಗಳನ್ನ ಕೇಳಿದ್ರೆ, ಏನೇನೋ ಹೇಳಿ ಜಾರಿಕೊಳ್ತಿದ್ದಾರೆ.

ಒಟ್ನಲ್ಲಿ ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳ ಬೇಜವಾಬ್ದಾರಿಯಿಂದ ವೈಟಿಪಿಎಸ್ ಘಟಕಕ್ಕೆ ಕಲ್ಲಿದ್ದಲು ಸಾಗಿಸುವ ರೈಲ್ವೆ ಮಾರ್ಗದ ನಿರ್ಮಾಣ ಕಾಮಗಾರಿ ಇದುವರೆಗೆ ಪೂರ್ಣಗೊಂಡಿಲ್ಲ. ಇನ್ನಾದ್ರೂ ಸರ್ಕಾರ ಎಚ್ಚೆತ್ತು ರೈಲ್ವೆ ಟ್ರಾಕ್ ಕಾಮಗಾರಿ ಪೂರ್ಣಗೊಳಿಸುವತ್ತ ಗಮನ ಹರಿಸಿದ್ರೆ, ವೈಟಿಪಿಎಸ್​ನಲ್ಲಿ ನಿಗದಿತ ಪ್ರಮಾಣ ಉತ್ಪಾದನೆ ಸಾಧ್ಯವಾಗಬಹುದು ಅಂತಾ ತಜ್ಞರು ಹೇಳ್ತಿದ್ದಾರೆ.

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ