AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಇಂಜಿನಿಯರ್; ಫೋಟೋ, ವೀಡಿಯೋ ಸಮೇತ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ!

ರಾಯಚೂರು ಜಿಲ್ಲೆಯಲ್ಲಿ ಮದುವೆಯಾಗುವುದಾಗಿ ನಂಬಿಸಿ ಪ್ರೀತಿಸಿ, 7-8 ವರ್ಷಗಳ ಕಾಲ ಲೈಂಗಿಕ ಸಂಪರ್ಕ ಮಾಡಿ ವಂಚಿಸಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ಧ ಅತಿಥಿ ಶಿಕ್ಷಕಿಯೊಬ್ಬರು ದೂರು ದಾಖಲಿಸಿದ್ದಾರೆ. ರಾಯಚೂರು ಮಹಿಳಾ ಠಾಣೆಯಲ್ಲಿ FIR ದಾಖಲಾಗಿದ್ದು, ಫೋಟೋ, ಆಡಿಯೋ ಸಾಕ್ಷ್ಯಗಳನ್ನು ಸಲ್ಲಿಸಲಾಗಿದೆ. ಎಸ್ಪಿ ಅರುಣಾಂಗ್ಷು ಗಿರಿ ಅವರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆದಿದೆ.

ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಇಂಜಿನಿಯರ್; ಫೋಟೋ, ವೀಡಿಯೋ ಸಮೇತ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ!
8 ವರ್ಷ ಲೈಂಗಿಕ ದೌರ್ಜನ್ಯ ಎಸಗಿ 'ಜಾತಿ' ನೆಪವೊಡ್ಡಿ ಕೈಕೊಟ್ಟ ಇಂಜಿನಿಯರ್!
ಭೀಮೇಶ್​​ ಪೂಜಾರ್
| Edited By: |

Updated on: Apr 11, 2026 | 10:36 AM

Share

ರಾಯಚೂರು, ಏಪ್ರಿಲ್ 11: ಪ್ರೀತಿ, ಮದುವೆ ಹೆಸರಿನಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿರುವ ಘಟನೆ ರಾಯಚೂರು (Raichuru) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದೇವದುರ್ಗ ಮೂಲದ ಮಲ್ಲಿಕಾರ್ಜುನ್ ಎಂಬ ಇಂಜಿನಿಯರ್ ವಿರುದ್ಧ ಮದುವೆಯಾಗುತ್ತೇನೆ ಎಂದು ನಂಬಿಸಿ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಅತಿಥಿ ಶಿಕ್ಷಕಿ ಗಂಭೀರ ಆರೋಪ ಮಾಡಿದ್ದಾರೆ.

ಬಲವಂತವಾಗಿ ಲೈಂಗಿಕ ಸಂಪರ್ಕ!

ಕಾಲೇಜು ದಿನಗಳಿಂದಲೇ ಜೊತೆಯಲ್ಲಿದ್ದ ಮಲ್ಲಿಕಾರ್ಜುನ್ ಮತ್ತು ಮಹಿಳೆ, ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಹೀಗೆ ಸುಮಾರು 7-8 ವರ್ಷಗಳ ಕಾಲ ಪ್ರೇಮ ಸಂಬಂಧದಲ್ಲಿದ್ದು, ಮಂತ್ರಾಲಯ, ಆಲಮಟ್ಟಿ ಡ್ಯಾಂ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಓಡಾಡಿದ್ದರು ಎನ್ನಲಾಗಿದೆ. ಅಷ್ಟೆ ಅಲ್ಲದೆ ಮಹಿಳೆಗೆ ತಾನು ನಿನ್ನನ್ನೇ ಮದುವೆಯಾಗುತ್ತೇನೆಂದು ನಂಬಿಸಿದ್ದ ಮಲ್ಲಿಕಾರ್ಜುನ್, ಹಲವು ಬಾರಿ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿದ ಆರೋಪವನ್ನೂ ಶಿಕ್ಷಕಿ ಮಾಡಿದ್ದಾರೆ.

ಫೋಟೋ ವೀಡಿಯೋ ಸಮೇತ ದೂರು ದಾಖಲು

ಇಷ್ಟೆಲ್ಲ ಆದ ಬಳಿಕ ಈಗ ಇಬ್ಬರೂ ಬೇರೆ ಬೇರೆ ಜಾತಿಯವರೆಂದು ಸಬೂಬು ಹೇಳಿದ ಇಂಜಿನಿಯರ್, ಇನ್ನೂ ಹತ್ತು ಹಲವು ಕುಂಟು ನೆಪಗಳನ್ನು ಹೇಳಿ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ನ್ಯಾಯಕ್ಕಾಗಿ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಫೋಟೋ, ಆಡಿಯೋ, ವಿಡಿಯೋ ಹಾಗೂ ಮೆಸೇಜ್‌ಗಳೊಂದಿಗೆ ದೂರು ಸಲ್ಲಿಸಿದ್ದಾರೆ. ಸದ್ಯ ರಾಯಚೂರು ಮಹಿಳಾ ಠಾಣೆಯಲ್ಲಿ ಮಲ್ಲಿಕಾರ್ಜುನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

ಈ ಕುರಿತು ರಾಯಚೂರು ಎಸ್ ಪಿ ಅರುಣಾಂಗ್ಷು ಗಿರಿ ಪ್ರತಿಕ್ರಿಯಿಸಿ, ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಯುತ್ತಿದೆ. 7-8 ವರ್ಷಗಳ ಸಂಬಂಧದ ಬಗ್ಗೆ ವಿವರಗಳ ಪರಿಶೀಲನೆ ನಡೆಯುತ್ತಿದ್ದು, ಸತ್ಯಾಸತ್ಯತೆ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us