AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಪೆನ್ನು ಕದ್ದ ವಿದ್ಯಾರ್ಥಿಯನ್ನ ಹೊಡೆದು ಕತ್ತಲ ಕೋಣೆಗೆ ಹಾಕಿದ ರಾಮಕೃಷ್ಣ ಆಶ್ರಮ ಗುರೂಜಿ

ವಿದ್ಯಾರ್ಥಿಯೋರ್ವ ಪೆನ್ನು ಕದ್ದ ಎಂಬ ಕಾರಣಕ್ಕೆ ರಾಯಚೂರು ರಾಮ ಕೃಷ್ಣ ಆಶ್ರಮದಲ್ಲಿ ಗುರೂಜಿ ವಿದ್ಯಾರ್ಥಿಯ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದು ಮೂರು ದಿನಗಳ ಕಾಲ ಕತ್ತಲ ಕೋಣೆಯಲ್ಲಿ ಕೂಡು ಹಾಕಿ ದರ್ಪ ಮೆರೆದಿದ್ದಾರೆ. ಬಾಲಕನ ತಾಯಿ ಆಶ್ರಮಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಯಚೂರು: ಪೆನ್ನು ಕದ್ದ ವಿದ್ಯಾರ್ಥಿಯನ್ನ ಹೊಡೆದು ಕತ್ತಲ ಕೋಣೆಗೆ ಹಾಕಿದ ರಾಮಕೃಷ್ಣ ಆಶ್ರಮ ಗುರೂಜಿ
ಪೆನ್ನು ಕದ್ದ ವಿದ್ಯಾರ್ಥಿಯನ್ನ ಹೊಡೆದು ಕತ್ತಲ ಕೋಣೆಗೆ ಹಾಕಿದ ಗುರೂಜಿ
ಭೀಮೇಶ್​​ ಪೂಜಾರ್
| Edited By: |

Updated on: Aug 03, 2024 | 12:20 PM

Share

ರಾಯಚೂರು, ಆಗಸ್ಟ್.03: ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ (Ramakrishna Ashram) ಅಮಾನವೀಯ ಘಟನೆಯೊಂದು ನಡೆದಿದೆ. ವಿದ್ಯಾರ್ಥಿಯೋರ್ವ ಪೆನ್ನು ಕದ್ದಿದ್ದಾನೆ ಎಂಬ ಕಾರಣಕ್ಕೆ ಆಶ್ರಮದ ಗುರೂಜಿ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ್ದಾರೆ (Assault Case) ಎಂಬ ಆರೋಪ ಕೇಳಿ ಬಂದಿದೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಯನ್ನು ಮೂರು ದಿನಗಳ ಕಾಲ ಕತ್ತಲೆ ಕೋಣೆಯಲ್ಲಿ ಕೂಡಿಟ್ಟಿದ್ದಾರೆ. ವಿದ್ಯಾರ್ಥಿಯ ಕಣ್ಣುಗಳು ಬಾವು ಬರುವಂತೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿ ಶ್ರವಣ್ ಕುಮಾರ್ ಹಲ್ಲೆಗೊಳಗಾದ ಬಾಲಕ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಶ್ರವಣ್ ಕುಮಾರ್ ಕುಟುಂಬದಲ್ಲಿ ಕಡು ಬಡತನ ಹಿನ್ನೆಲೆ ಆಶ್ರಮದಲ್ಲಿದ್ದ. ತನ್ನ ಸಹಪಾಠಿಗಳ ಜೊತೆ ಆಟವಾಡುತ್ತಾ ಒಮ್ಮೆ ಪೆನ್ನು ಕದ್ದಿದ್ದ. ಈ ವಿಚಾರ ಸಂಬಂಧ ಶ್ರವಣಕುಮಾರ್ ಸಹಪಾಠಿಗಳು ಆತನ ವಿರುದ್ಧ ದೂರೂ ನೀಡಿದ್ದರು. ದೂರಿನ್ವಯ ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ ಎಂಬುವವರು ಶ್ರವಣ್ ಕುಮಾರ್​ನನ್ನು ಕರೆದು ಮನಬಂದಂತೆ ಥಳಿಸಿದ್ದಾರೆ. ಜೊತೆಗೆ ಮೂರು ದಿನಗಳ ಕಾಲ ಕತ್ತಲೇ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ.

ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ಆಕಸ್ಮಿಕವಾಗಿ ಶ್ರವಣ್ ಕುಮಾರ್ ತಾಯಿ ಭೇಟಿ ನೀಡಿದಾಗ ವಿಷಯ ಬಹಿರಂಗವಾಗಿದೆ. ಸದ್ಯ ಶ್ರವಣಕುಮಾರ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೈಕೈ ತುಂಬಾ ಗಾಯಗಳಾಗಿದ್ದು, ಕಣ್ಣು ಪೂರ್ತಿ ಬಾವು ಬಂದಿದೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಗನ ಸ್ಥಿತಿಗೆ ಪೋಷಕರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಫೋನ್​​​ ಪಕ್ಕಕ್ಕಿಡು ಎಂದು ಗದರಿಸಿದ ಹೆತ್ತವರ ವಿರುದ್ದ ಎಫ್ಐಆರ್ ದಾಖಲಿಸಿದ ಮಕ್ಕಳು

ರೋಗಿ ನೆಪದಲ್ಲಿ ಬಂದು ವೈದ್ಯಯ ಚಿನ್ನದ ಸರ ಎಗರಿಸಿದ್ರು!

ರೋಗಿ ನೆಪದಲ್ಲಿ ಆಸ್ಪತ್ರೆಗೆ ಬಂದ ಕಳ್ಳ, ವೈದ್ಯೆಯ ಚಿನ್ನದ ಮಾಂಗಲ್ಯ ಸರ ಎಗರಿಸಿದ್ದಾನೆ. ವಿಜಯಪುರ ಜಿಲ್ಲೆಯ ಕಾಳಿಕಾನಗರದ ಪಾಟೀಲ್ ಕ್ಲಿನಿಕ್​ನಲ್ಲಿ ಕಳೆದ ಜುಲೈ 30ರಂದು ಘಟನೆ ನಡೆದಿದ್ದು, ಪಾಟೀಲ್ ಕ್ಲಿನಿಕ್ ವೈದ್ಯೆ ಡಾ.ಸರೋಜಿನಿ ಪಾಟೀಲ್ ಎಂಬುವರ 11 ಗ್ರಾಂ ಚಿನ್ನದ ಸರ ಕಸಿದು ಖದೀಮರು ಎಸ್ಕೇಪ್ ಆಗಿದ್ದಾರೆ. ಹಲ್ಲು ನೋವು ಎಂದು ಇಂಗ್ಲಿಷ್​​ನಲ್ಲಿ ಮಾತನಾಡಿ ವೈದ್ಯೆಯ ಚಿನ್ನದ ಸರ ಕಸಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ