AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಪೆನ್ನು ಕದ್ದ ವಿದ್ಯಾರ್ಥಿಯನ್ನ ಹೊಡೆದು ಕತ್ತಲ ಕೋಣೆಗೆ ಹಾಕಿದ ರಾಮಕೃಷ್ಣ ಆಶ್ರಮ ಗುರೂಜಿ

ವಿದ್ಯಾರ್ಥಿಯೋರ್ವ ಪೆನ್ನು ಕದ್ದ ಎಂಬ ಕಾರಣಕ್ಕೆ ರಾಯಚೂರು ರಾಮ ಕೃಷ್ಣ ಆಶ್ರಮದಲ್ಲಿ ಗುರೂಜಿ ವಿದ್ಯಾರ್ಥಿಯ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದು ಮೂರು ದಿನಗಳ ಕಾಲ ಕತ್ತಲ ಕೋಣೆಯಲ್ಲಿ ಕೂಡು ಹಾಕಿ ದರ್ಪ ಮೆರೆದಿದ್ದಾರೆ. ಬಾಲಕನ ತಾಯಿ ಆಶ್ರಮಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಯಚೂರು: ಪೆನ್ನು ಕದ್ದ ವಿದ್ಯಾರ್ಥಿಯನ್ನ ಹೊಡೆದು ಕತ್ತಲ ಕೋಣೆಗೆ ಹಾಕಿದ ರಾಮಕೃಷ್ಣ ಆಶ್ರಮ ಗುರೂಜಿ
ಪೆನ್ನು ಕದ್ದ ವಿದ್ಯಾರ್ಥಿಯನ್ನ ಹೊಡೆದು ಕತ್ತಲ ಕೋಣೆಗೆ ಹಾಕಿದ ಗುರೂಜಿ
ಭೀಮೇಶ್​​ ಪೂಜಾರ್
| Edited By: |

Updated on: Aug 03, 2024 | 12:20 PM

Share

ರಾಯಚೂರು, ಆಗಸ್ಟ್.03: ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ (Ramakrishna Ashram) ಅಮಾನವೀಯ ಘಟನೆಯೊಂದು ನಡೆದಿದೆ. ವಿದ್ಯಾರ್ಥಿಯೋರ್ವ ಪೆನ್ನು ಕದ್ದಿದ್ದಾನೆ ಎಂಬ ಕಾರಣಕ್ಕೆ ಆಶ್ರಮದ ಗುರೂಜಿ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ್ದಾರೆ (Assault Case) ಎಂಬ ಆರೋಪ ಕೇಳಿ ಬಂದಿದೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಯನ್ನು ಮೂರು ದಿನಗಳ ಕಾಲ ಕತ್ತಲೆ ಕೋಣೆಯಲ್ಲಿ ಕೂಡಿಟ್ಟಿದ್ದಾರೆ. ವಿದ್ಯಾರ್ಥಿಯ ಕಣ್ಣುಗಳು ಬಾವು ಬರುವಂತೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿ ಶ್ರವಣ್ ಕುಮಾರ್ ಹಲ್ಲೆಗೊಳಗಾದ ಬಾಲಕ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಶ್ರವಣ್ ಕುಮಾರ್ ಕುಟುಂಬದಲ್ಲಿ ಕಡು ಬಡತನ ಹಿನ್ನೆಲೆ ಆಶ್ರಮದಲ್ಲಿದ್ದ. ತನ್ನ ಸಹಪಾಠಿಗಳ ಜೊತೆ ಆಟವಾಡುತ್ತಾ ಒಮ್ಮೆ ಪೆನ್ನು ಕದ್ದಿದ್ದ. ಈ ವಿಚಾರ ಸಂಬಂಧ ಶ್ರವಣಕುಮಾರ್ ಸಹಪಾಠಿಗಳು ಆತನ ವಿರುದ್ಧ ದೂರೂ ನೀಡಿದ್ದರು. ದೂರಿನ್ವಯ ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ ಎಂಬುವವರು ಶ್ರವಣ್ ಕುಮಾರ್​ನನ್ನು ಕರೆದು ಮನಬಂದಂತೆ ಥಳಿಸಿದ್ದಾರೆ. ಜೊತೆಗೆ ಮೂರು ದಿನಗಳ ಕಾಲ ಕತ್ತಲೇ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ.

ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ಆಕಸ್ಮಿಕವಾಗಿ ಶ್ರವಣ್ ಕುಮಾರ್ ತಾಯಿ ಭೇಟಿ ನೀಡಿದಾಗ ವಿಷಯ ಬಹಿರಂಗವಾಗಿದೆ. ಸದ್ಯ ಶ್ರವಣಕುಮಾರ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೈಕೈ ತುಂಬಾ ಗಾಯಗಳಾಗಿದ್ದು, ಕಣ್ಣು ಪೂರ್ತಿ ಬಾವು ಬಂದಿದೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಗನ ಸ್ಥಿತಿಗೆ ಪೋಷಕರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಫೋನ್​​​ ಪಕ್ಕಕ್ಕಿಡು ಎಂದು ಗದರಿಸಿದ ಹೆತ್ತವರ ವಿರುದ್ದ ಎಫ್ಐಆರ್ ದಾಖಲಿಸಿದ ಮಕ್ಕಳು

ರೋಗಿ ನೆಪದಲ್ಲಿ ಬಂದು ವೈದ್ಯಯ ಚಿನ್ನದ ಸರ ಎಗರಿಸಿದ್ರು!

ರೋಗಿ ನೆಪದಲ್ಲಿ ಆಸ್ಪತ್ರೆಗೆ ಬಂದ ಕಳ್ಳ, ವೈದ್ಯೆಯ ಚಿನ್ನದ ಮಾಂಗಲ್ಯ ಸರ ಎಗರಿಸಿದ್ದಾನೆ. ವಿಜಯಪುರ ಜಿಲ್ಲೆಯ ಕಾಳಿಕಾನಗರದ ಪಾಟೀಲ್ ಕ್ಲಿನಿಕ್​ನಲ್ಲಿ ಕಳೆದ ಜುಲೈ 30ರಂದು ಘಟನೆ ನಡೆದಿದ್ದು, ಪಾಟೀಲ್ ಕ್ಲಿನಿಕ್ ವೈದ್ಯೆ ಡಾ.ಸರೋಜಿನಿ ಪಾಟೀಲ್ ಎಂಬುವರ 11 ಗ್ರಾಂ ಚಿನ್ನದ ಸರ ಕಸಿದು ಖದೀಮರು ಎಸ್ಕೇಪ್ ಆಗಿದ್ದಾರೆ. ಹಲ್ಲು ನೋವು ಎಂದು ಇಂಗ್ಲಿಷ್​​ನಲ್ಲಿ ಮಾತನಾಡಿ ವೈದ್ಯೆಯ ಚಿನ್ನದ ಸರ ಕಸಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?