AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯದಲ್ಲಿ ಮಧ್ಯರಾಧನೆ: ತಿರುಪತಿ ತಿರುಮಲದಿಂದ ಬಂದ ಶೇಷವಸ್ತ್ರ ರಾಯರ ಬೃಂದಾವನಕ್ಕೆ ಸಮರ್ಪಣೆ

ರಾಯರ ಮಧ್ಯರಾಧನೆ ಹಿನ್ನೆಲೆಯಲ್ಲಿ ರಾಯರ ಮೂಲ ಬೃಂದಾವನಕ್ಕೆ ತಿರುಪತಿ ತಿರುಮಲದಿಂದ ಶೇಷವಸ್ತ್ರ ಸಮರ್ಪಣೆ ಮಾಡಲಾಗಿದೆ. ಮಹಾದ್ವಾರದಿಂದ ಅದ್ದೂರಿ ಮೆರವಣಿಗೆ ಮೂಲಕ ಶೇಷವಸ್ತ್ರವನ್ನು ಮಂತ್ರಾಲಯ ಶ್ರೀಗಳು ಬರಮಾಡಿಕೊಂಡಿದ್ದಾರೆ.

ಮಂತ್ರಾಲಯದಲ್ಲಿ ಮಧ್ಯರಾಧನೆ: ತಿರುಪತಿ ತಿರುಮಲದಿಂದ ಬಂದ ಶೇಷವಸ್ತ್ರ ರಾಯರ ಬೃಂದಾವನಕ್ಕೆ ಸಮರ್ಪಣೆ
ರಾಯರ 350ನೇ ಆರಾಧನಾ ಮಹೋತ್ಸವ
TV9 Web
| Edited By: |

Updated on:Aug 24, 2021 | 10:10 AM

Share

ರಾಯಚೂರು: ರಾಘವೇಂದ್ರ ಮಹಾಸ್ವಾಮಿಗಳು ನೆಲೆಸಿರುವ ತುಂಗಾತೀರ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದೆ.ಇಂದು ರಾಯರು ಬೃಂದಾವನ ಪ್ರವೇಶಿಸಿದ ಪವಿತ್ರ ದಿನ. ಹೀಗಾಗಿ ರಾಯರ ಮಧ್ಯರಾಧನೆಯನ್ನು ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ರಾಯರ ಮೂಲ ಬೃಂದಾವನಕ್ಕೆ ತಿರುಪತಿ ತಿರುಮಲದಿಂದ ಶೇಷವಸ್ತ್ರ ಸಮರ್ಪಣೆ ಮಾಡಲಾಗಿದೆ. ಮಹಾದ್ವಾರದಿಂದ ಅದ್ದೂರಿ ಮೆರವಣಿಗೆ ಮೂಲಕ ಶೇಷವಸ್ತ್ರವನ್ನು ಮಂತ್ರಾಲಯ ಶ್ರೀಗಳು ಬರಮಾಡಿಕೊಂಡಿದ್ದಾರೆ. ಮಂತ್ರಾಲಯ ಶ್ರೀಗಳು ರಾಯರ ಬೃಂದಾವನಕ್ಕೆ ಇಂದು ಮಹಾ ಮಂಗಳಾರತಿ ನೆರವೆರಿಸಿದ್ದಾರೆ.

ಕಲಿಯುಗದ ಕಲ್ಪವೃಕ್ಷ ಕಾಮಧೇನು ಗುರು ರಾಘವೇಂದ್ರ ಮಹಾಸ್ವಾಮಿಗಳು ನೆಲೆಸಿರುವ ತುಂಗಾತೀರದ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನೆ ಮಹೋತ್ಸವದ ನಡೆಯುತ್ತಿದೆ. ಆಗಸ್ಟ್ 21 ರಿಂದ ಆರಂಭವಾದ ರಾಯರ ಆರಾಧನೆ ಮಹೋತ್ಸವ ಆಗಸ್ಟ್ 27ರವರೆಗೂ ನಡೆಯಲಿದೆ. ಸೋಮವಾರ ರಾಯರ ಪೂರ್ವಾರಾಧನೆ ಹಿನ್ನೆಲೆ ಮೂಲಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ ಮತ್ತು ಮಹಾ ಮಂಗಳಾರತಿ ನೆರವೇರಿಸಲಾಯಿತು. ಇಡೀ ಮಂತ್ರಾಲಯ ಕ್ಷೇತ್ರದಲ್ಲಿ ಆರಾಧನೆ ಸಂಭ್ರಮಾಚರಣೆ ನಡೆಯಿತು. ತುಂಗಾ ತೀರದಲ್ಲಿ ಅಸಂಖ್ಯಾತ ಭಕ್ತರು ಮಿಂದೆದ್ದು ರಾಯರ ದರ್ಶನ ಪಡೆಯುವ ಮೂಲಕ ಪುನೀತರಾಗುತ್ತಿದ್ದಾರೆ.

ವಿಶೇಷವಾಗಿ ರಾಯರ ಆರಾಧನೆ ವೇಳೆಯಲ್ಲಿ ಮಂತ್ರಾಲಯಕ್ಕೆ ಬಂದು ರಾಯರು ನೆಲೆಸಿರುವ ಮೂಲ ಬೃಂದಾವನದ ದರ್ಶನ ಪಡೆದರೆ ಎಲ್ಲವೂ ಒಳಿತಾಗುತ್ತದೆ ಎನ್ನುವುದು ಭಕ್ತರ ವಾಡಿಕೆ. ಹೀಗಾಗಿ ನಾಡಿನ ಮೂಲೆ ಮೂಲೆಯಿಂದಲು ಅಸಂಖ್ಯಾತ ಭಕ್ತ ಸಮೂಹವೇ ಮಂತ್ರಾಲಯಕ್ಕೆ ಹರಿದು ಬರುತ್ತಿದೆ ಎಂದು ಮಂತ್ರಾಲಯ ಸಾಂಸ್ಕೃತಿಕ ಪೀಠದ ಅಧ್ಯಾಪಕರಾದ ವಾದಿರಾಜಚಾರ್ಯರು ಹೇಳಿದ್ದಾರೆ.

ನಿನ್ನೆ (ಆಗಸ್ಟ್ 23, ಸೋಮವಾರ) ರಾಯರ ಪೂರ್ವಾರಾಧನೆ ಹಿನ್ನೆಲೆಯಲ್ಲಿ ಮೂಲ ಬೃಂದಾವನದ ಸುತ್ತಲೂ ಪ್ರಾಕಾರದಲ್ಲಿ ಪಲ್ಲಕ್ಕಿ ಮೆರವಣಿಯನ್ನು ಅತ್ಯಂತ ಸಂಭ್ರಮ ಸಡಗರದಿಂದ ನಡೆಸಲಾಯಿತು. ಪ್ರಹ್ಲಾದ ರಾಜರ ಪೂಜೆ ವಿಜೃಂಬಣೆಯಿಂದ ನೆರವೇರಿಸಲಾಯಿತು. ತುಂಗಾ ನದಿಯಿಂದ ತಂದ ಪವಿತ್ರ ಶುದ್ಧ ನೀರಿನಿಂದ ಪಂಚಾಮೃತ ಅಭಿಷೇಕ ನಡೆಸಲಾಯಿತು.

ಮಂತ್ರಾಲಯಕ್ಕೆ ಆಗಮಿಸಿದ್ದ ಸರ್ವ ಭಕ್ತರಿಗೂ ತೀರ್ಥ ಪ್ರಸಾದ ನೀಡಲಾಯಿತು. ಇನ್ನು ಮಂತ್ರಾಲಯ ಶ್ರೀಗಳ ನೇತೃತ್ವದಲ್ಲಿ ನಡೆದ ರಾಯರ ಪವಿತ್ರ ಗ್ರಂಥವನ್ನಿಟ್ಟು ನಡೆಸಿದ ಪಲ್ಲಕ್ಕಿ ಮೆರವಣಿಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡು ಪುನೀತರಾದರು. ಇನ್ನು ರಾಯರ ಪೂರ್ವಾರಾಧನೆಯ ಶುಭ ಸಂದರ್ಭದಲ್ಲಿ ಪ್ರತಿ ವರ್ಷವೂ ಮಂತ್ರಾಲಯ ಶ್ರೀಮಠದಿಂದ ಸಿಬ್ಬಂದಿಗೆ ಬಟ್ಟೆ ಬರೆ ಉಡುಗೊರೆ ನೀಡುವುದು ವಾಡಿಕೆ. ಹೀಗಾಗಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರತೀರ್ಥ ಮಹಾಸ್ವಾಮಿಗಳು ಶ್ರೀಮಠದಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿಗಳಿಗೆ ವಸ್ತ್ರಗಳನ್ನು ನೀಡಿ ಆರ್ಶಿವದಿಸಿದರು.

ವರದಿ: ಸಿದ್ದು ಬಿರಾದಾರ್

ಇದನ್ನೂ ಓದಿ: ಇಂದಿನಿಂದ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ

ಮಂತ್ರಾಲಯದಲ್ಲಿ ಗುರು ರಾಯರ 350ನೇ ಆರಾಧನೆ; ಆ.21ರಿಂದ 27ರ ವರೆಗೆ ಸಪ್ತ ರಾತ್ರೋತ್ಸವ

Published On - 9:28 am, Tue, 24 August 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ