AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ

ಹಲವಾರು ಹಳೆಯ ಕಟ್ಟಡಗಳನ್ನ ತೆರವುಗೊಳಿಸಲಾಗಿದೆ. ಮುಖ್ಯದ್ವಾರದ ಬಳಿಯಲ್ಲಿ ರಸ್ತೆ ಅಗಲೀಕರಣ ಮಾಡಲಾಗಿದೆ. ಹಳೆಯ ಪಾದಚಾರಿ ಮಾರ್ಗಗಳನ್ನ ನೆಲಸಮ ಮಾಡಲಾಗಿದೆ. ನವ ಮಂತ್ರಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

ಇಂದಿನಿಂದ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ
ಸುಭುದೇಂದ್ರ ತೀರ್ಥರು
TV9 Web
| Edited By: |

Updated on:Aug 21, 2021 | 1:18 PM

Share

ರಾಯಚೂರು: ಇಂದಿನಿಂದ (ಆಗಸ್ಟ್ 21) ಮಂತ್ರಾಲಯದಲ್ಲಿ (Mantralayam) ರಾಯರ 350ನೇ ಆರಾಧನ ಮಹೋತ್ಸವ ನಡೆಯುತ್ತಿದೆ. ಮಂತ್ರಾಲಯ ಶ್ರೀಮಠದಲ್ಲಿ ರಾಯರ ಆರಾಧನೆ ಸಂಭ್ರಮ ಕಳೆಗಟ್ಟಿದೆ. ಏಳು ದಿನಗಳ ಕಾಲ ನಡೆಯುವ ರಾಯರ ಆರಾಧನೆ ಹಿನ್ನೆಲೆ ನಾಡಿನ ಹೆಸರಾಂತ ವಿದ್ವಾಂಸರಿಂದ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೊಜನೆ ಮಾಡಲಾಗಿದೆ. ಇನ್ನು 350ನೇ ಆರಾಧನೆ ಹಿನ್ನೆಲೆ ಮಂತ್ರಾಲಯದಲ್ಲಿ ಅಭಿವೃದ್ಧಿ ಪರ್ವಕ್ಕೆ ಚಾಲನೆ ನೀಡಲಾಗಿದೆ. ಶ್ರೀಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥರ ನೇತೃತ್ವದಲ್ಲಿ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ.

ಹಲವಾರು ಹಳೆಯ ಕಟ್ಟಡಗಳನ್ನ ತೆರವುಗೊಳಿಸಲಾಗಿದೆ. ಮುಖ್ಯದ್ವಾರದ ಬಳಿಯಲ್ಲಿ ರಸ್ತೆ ಅಗಲೀಕರಣ ಮಾಡಲಾಗಿದೆ. ಹಳೆಯ ಪಾದಚಾರಿ ಮಾರ್ಗಗಳನ್ನ ನೆಲಸಮ ಮಾಡಲಾಗಿದೆ. ನವ ಮಂತ್ರಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

350ನೇ ಆರಾಧನ ಮಹೋತ್ಸವದ ಬಗ್ಗೆ ಸುಭುದೇಂದ್ರ ತೀರ್ಥರು ಕೆಲ ಮಾಹಿತಿಯನ್ನು ನೀಡಿದ್ದಾರೆ. ರಾಯರು ಬೃಂದಾವನ ಸೇರಿ 350 ವರ್ಷವಾಗಿದೆ. ಆಗಸ್ಟ್ 21, 22, 23, 24, 25, 26, 27ರ ವರೆಗೆ ಏಳು ದಿನ ಸಪ್ತ ರಾತ್ರೋತ್ಸವ (Saptha Rathotsava) ನಡೆಯಲಿದೆ. 22, 23, 24ರಂದು ರಾಯರ ಆರಾಧನೆ ಮಹೋತ್ಸವ ಹಿನ್ನೆಲೆ ವಿಶೇಷ ಪೂಜೆ ಮಹಾಭಿಷೇಕ ನಡೆಯಲಿದೆ. ಕೊರೊನಾ ಸಂಕಷ್ಟ ಗಮನದಲ್ಲಿಟುಕೊಂಡು ಅತ್ಯಂತ ಸರಳವಾಗಿ ಆರಾಧನ ಮಹೋತ್ಸವ ರೂಪಿಸಲಾಗಿದೆ ಎಂದು ಸುಭುದೇಂದ್ರ ತೀರ್ಥರು ಆಗಸ್ಟ್ 19ರಂದು ನಡೆದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ವಯೋ ವೃದ್ಧರಿಗೆ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಅಂಬುಲೆನ್ಸ್ ಸೇರಿ ತುರ್ತು ಸೇವೆಯ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರಿಮಳ ಪ್ರಸಾದದ ವ್ಯವಸ್ಥೆ ಸಹ ಮಾಡಲಾಗಿದೆ. ವಯೋ ವೃದ್ಧರಿಗೆ ಶೀಘ್ರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ನಾಡಿನ ಮೂಲೆ ಮೂಲೆಯಿಂದಲೂ ಅಸಂಖ್ಯಾತ ಭಕ್ತರು ಶ್ರಿಮಠಕ್ಕೆ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಕೊವಿಡ್ ನಿಯಮಗಳನ್ನ ತಪ್ಪದೆ ಪಾಲಿಸುತ್ತ ಎಲ್ಲ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಸುಭುದೇಂದ್ರ ತೀರ್ಥರು ಹೇಳಿದ್ದಾರೆ.

ಇದನ್ನೂ ಓದಿ

ಹಂಪಿಯ ವಿರೂಪಾಕ್ಷ ದೇವಸ್ಥಾನಕ್ಕೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಭೇಟಿ; ಇಲ್ಲಿವೆ ಚಿತ್ರಗಳು ಮಂತ್ರಾಲಯದಲ್ಲಿ ಗುರು ರಾಯರ 350ನೇ ಆರಾಧನೆ; ಆ.21ರಿಂದ 27ರ ವರೆಗೆ ಸಪ್ತ ರಾತ್ರೋತ್ಸವ

(Rayara 350th Worshipful Jubilee will be held in Mantralayam from today)

Published On - 1:16 pm, Sat, 21 August 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ