AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ

ಹಲವಾರು ಹಳೆಯ ಕಟ್ಟಡಗಳನ್ನ ತೆರವುಗೊಳಿಸಲಾಗಿದೆ. ಮುಖ್ಯದ್ವಾರದ ಬಳಿಯಲ್ಲಿ ರಸ್ತೆ ಅಗಲೀಕರಣ ಮಾಡಲಾಗಿದೆ. ಹಳೆಯ ಪಾದಚಾರಿ ಮಾರ್ಗಗಳನ್ನ ನೆಲಸಮ ಮಾಡಲಾಗಿದೆ. ನವ ಮಂತ್ರಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

ಇಂದಿನಿಂದ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ
ಸುಭುದೇಂದ್ರ ತೀರ್ಥರು
TV9 Web
| Updated By: sandhya thejappa|

Updated on:Aug 21, 2021 | 1:18 PM

Share

ರಾಯಚೂರು: ಇಂದಿನಿಂದ (ಆಗಸ್ಟ್ 21) ಮಂತ್ರಾಲಯದಲ್ಲಿ (Mantralayam) ರಾಯರ 350ನೇ ಆರಾಧನ ಮಹೋತ್ಸವ ನಡೆಯುತ್ತಿದೆ. ಮಂತ್ರಾಲಯ ಶ್ರೀಮಠದಲ್ಲಿ ರಾಯರ ಆರಾಧನೆ ಸಂಭ್ರಮ ಕಳೆಗಟ್ಟಿದೆ. ಏಳು ದಿನಗಳ ಕಾಲ ನಡೆಯುವ ರಾಯರ ಆರಾಧನೆ ಹಿನ್ನೆಲೆ ನಾಡಿನ ಹೆಸರಾಂತ ವಿದ್ವಾಂಸರಿಂದ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೊಜನೆ ಮಾಡಲಾಗಿದೆ. ಇನ್ನು 350ನೇ ಆರಾಧನೆ ಹಿನ್ನೆಲೆ ಮಂತ್ರಾಲಯದಲ್ಲಿ ಅಭಿವೃದ್ಧಿ ಪರ್ವಕ್ಕೆ ಚಾಲನೆ ನೀಡಲಾಗಿದೆ. ಶ್ರೀಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥರ ನೇತೃತ್ವದಲ್ಲಿ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ.

ಹಲವಾರು ಹಳೆಯ ಕಟ್ಟಡಗಳನ್ನ ತೆರವುಗೊಳಿಸಲಾಗಿದೆ. ಮುಖ್ಯದ್ವಾರದ ಬಳಿಯಲ್ಲಿ ರಸ್ತೆ ಅಗಲೀಕರಣ ಮಾಡಲಾಗಿದೆ. ಹಳೆಯ ಪಾದಚಾರಿ ಮಾರ್ಗಗಳನ್ನ ನೆಲಸಮ ಮಾಡಲಾಗಿದೆ. ನವ ಮಂತ್ರಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

350ನೇ ಆರಾಧನ ಮಹೋತ್ಸವದ ಬಗ್ಗೆ ಸುಭುದೇಂದ್ರ ತೀರ್ಥರು ಕೆಲ ಮಾಹಿತಿಯನ್ನು ನೀಡಿದ್ದಾರೆ. ರಾಯರು ಬೃಂದಾವನ ಸೇರಿ 350 ವರ್ಷವಾಗಿದೆ. ಆಗಸ್ಟ್ 21, 22, 23, 24, 25, 26, 27ರ ವರೆಗೆ ಏಳು ದಿನ ಸಪ್ತ ರಾತ್ರೋತ್ಸವ (Saptha Rathotsava) ನಡೆಯಲಿದೆ. 22, 23, 24ರಂದು ರಾಯರ ಆರಾಧನೆ ಮಹೋತ್ಸವ ಹಿನ್ನೆಲೆ ವಿಶೇಷ ಪೂಜೆ ಮಹಾಭಿಷೇಕ ನಡೆಯಲಿದೆ. ಕೊರೊನಾ ಸಂಕಷ್ಟ ಗಮನದಲ್ಲಿಟುಕೊಂಡು ಅತ್ಯಂತ ಸರಳವಾಗಿ ಆರಾಧನ ಮಹೋತ್ಸವ ರೂಪಿಸಲಾಗಿದೆ ಎಂದು ಸುಭುದೇಂದ್ರ ತೀರ್ಥರು ಆಗಸ್ಟ್ 19ರಂದು ನಡೆದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ವಯೋ ವೃದ್ಧರಿಗೆ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಅಂಬುಲೆನ್ಸ್ ಸೇರಿ ತುರ್ತು ಸೇವೆಯ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರಿಮಳ ಪ್ರಸಾದದ ವ್ಯವಸ್ಥೆ ಸಹ ಮಾಡಲಾಗಿದೆ. ವಯೋ ವೃದ್ಧರಿಗೆ ಶೀಘ್ರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ನಾಡಿನ ಮೂಲೆ ಮೂಲೆಯಿಂದಲೂ ಅಸಂಖ್ಯಾತ ಭಕ್ತರು ಶ್ರಿಮಠಕ್ಕೆ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಕೊವಿಡ್ ನಿಯಮಗಳನ್ನ ತಪ್ಪದೆ ಪಾಲಿಸುತ್ತ ಎಲ್ಲ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಸುಭುದೇಂದ್ರ ತೀರ್ಥರು ಹೇಳಿದ್ದಾರೆ.

ಇದನ್ನೂ ಓದಿ

ಹಂಪಿಯ ವಿರೂಪಾಕ್ಷ ದೇವಸ್ಥಾನಕ್ಕೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಭೇಟಿ; ಇಲ್ಲಿವೆ ಚಿತ್ರಗಳು ಮಂತ್ರಾಲಯದಲ್ಲಿ ಗುರು ರಾಯರ 350ನೇ ಆರಾಧನೆ; ಆ.21ರಿಂದ 27ರ ವರೆಗೆ ಸಪ್ತ ರಾತ್ರೋತ್ಸವ

(Rayara 350th Worshipful Jubilee will be held in Mantralayam from today)

Published On - 1:16 pm, Sat, 21 August 21

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?