AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವುಗಳಿಗೆ ಬಿಡುಗಡೆಯ ಭಾಗ್ಯ: ರಾಯಚೂರಿನಲ್ಲಿ ಹಾವಿನ ಉದ್ಯಾನವನ ನಡೆಸುವ ಆಸೆ ಹರಿಯಬಿಟ್ಟ ಉರಗತಜ್ಞ ಅಫ್ಸರ್ ಹುಸೇನ್

ಕಳೆದ 31 ವರ್ಷಗಳಿಂದ ಇಂತಹ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು ಉರಗ ತಜ್ಞ ಅಫ್ಸರ್ ಹುಸೇನ್ ರಕ್ಷಿಸಿದ ಹಾವುಗಳನ್ನು ಕಾಡಿಗೆ ಬಿಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.

ಹಾವುಗಳಿಗೆ ಬಿಡುಗಡೆಯ ಭಾಗ್ಯ: ರಾಯಚೂರಿನಲ್ಲಿ ಹಾವಿನ ಉದ್ಯಾನವನ ನಡೆಸುವ ಆಸೆ ಹರಿಯಬಿಟ್ಟ ಉರಗತಜ್ಞ ಅಫ್ಸರ್ ಹುಸೇನ್
ಹಾವು ಬಿಡುಗಡೆ ಕಾರ್ಯಕ್ರಮ; ರಾಯಚೂರಿನಲ್ಲಿ ಹಾವಿನ ಉದ್ಯಾನವನ ನಡೆಸುವ ಆಸೆ ಹೊರ ಹಾಕಿದ ಉರಗ ತಜ್ಞ ಅಫ್ಸರ್ ಹುಸೇನ್
TV9 Web
| Updated By: ಆಯೇಷಾ ಬಾನು|

Updated on: Aug 27, 2021 | 3:50 PM

Share

ರಾಯಚೂರು: ವೈಲ್ಡ್ ಲೈಫ್ ಸೊಸೈಟಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ರಾಯಚೂರಿನ ಉರಗ ತಜ್ಞ ಅಫ್ಸರ್ ಹುಸೇನ್ ತಾವು ಹಿಡಿದಿದ್ದ ಹಾವುಗಳನ್ನು ಮರಳಿ ಕಾಡಿಗೆ ಬಿಟ್ಟಿದ್ದಾರೆ. ನಗರದ ವಿಭಿನ್ನ ಪ್ರದೇಶಗಳಿಂದ ರಕ್ಷಿಸಿದ್ದ ಸುಮಾರು 63 ಹಾವುಗಳನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಕಳೆದ 31 ವರ್ಷಗಳಿಂದ ಇಂತಹ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು ಉರಗ ತಜ್ಞ ಅಫ್ಸರ್ ಹುಸೇನ್ ರಕ್ಷಿಸಿದ ಹಾವುಗಳನ್ನು ಕಾಡಿಗೆ ಬಿಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಇನ್ನು ಹಾವು ಬಿಡುಗಡೆ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನದ ಜೊತೆಗೆ ಮುಂದಿನ ದಿನಗಳಲ್ಲಿ ರಾಯಚೂರು ನಗರದಲ್ಲಿ ಹಾವಿನ ಉದ್ಯಾನವನ ನಡೆಸುವ ಉದ್ದೇಶವನ್ನು ಹುಸೇನ್ ಹೊರ ಹಾಕಿದ್ದಾರೆ. ಹೀಗಾಗಿ ಜನರಿಗೆ ವಿಶೇಷವಾಗಿ ಮಕ್ಕಳಿಗೆ ಶಿಕ್ಷಣ ನೀಡಲು ಈ ಕಾರ್ಯಕ್ರಮ ಸಹಾಯಕವಾಗಿದೆ. ಹಾಗೂ ಎಲ್ಲಾ ರಾಜಕಾರಣಿಗಳು ಮತ್ತು ಸಾಮಾಜಿಕ ಮುಖಂಡರು ಈ ಉದಾತ್ತ ಉದ್ದೇಶಕ್ಕಾಗಿ ಸಹಾಯ ಮಾಡಬೇಕು ಎಂದು ಹುಸೇನ್ ವಿನಂತಿಸಿದ್ದಾರೆ.

ಹಾವು ಕಂಡರೆ ಹೊಡೆಯಬೇಡಿ ನಮಗೆ ಕರೆ ಮಾಡಿ 9900127861 ಎಂದು ಹುಸೇನ್ ಜನರಲ್ಲಿ ಕೇಳಿ ಕೊಂಡಿದ್ದಾರೆ. ಹಾವು ಬಿಡುಗಡೆ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಕೆಲ ಗಣ್ಯರು ಉಪಸ್ಥಿತರಿದ್ದರು. ರಾಯಚೂರ ನಗರದ ಮಲಿಯಾಬಾದ ಮೀಸಲು ಅರಣ್ಯದಲ್ಲಿ ಎಸ್ಪಿ ಪ್ರಕಾಶ ನಿಕ್ಕಂ ಹಾವು ಬಿಡುವ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾದರು.

raichur snake

ಹಾವುಗಳ ಬಗ್ಗೆ ಮಾಹಿತಿ ನೀಡುತ್ತಿರುವುದು

ಇದನ್ನೂ ಓದಿ: ವಿಷಪೂರಿತ ಹಾವನ್ನು ಹಿಡಿದು ಕಚ್ಚಿ ಸಾಯಿಸಿದ ವ್ಯಕ್ತಿ; ನೋವು ತಾಳಲಾರದೇ ಸತ್ತ ಹಾವು

‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್