AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಸ್ಟೇಟಸ್: RSS ಕಾರ್ಯಕರ್ತನ ಬಂಧನ

ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಆರ್​ಎಸ್​ಎಸ್ ಕಾರ್ಯಕರ್ತನನ್ನು ಲಿಂಗಸೂರು ಪೊಲೀಸರು ಬಂಧಿಸಿದ್ದಾರೆ.

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಸ್ಟೇಟಸ್:  RSS ಕಾರ್ಯಕರ್ತನ ಬಂಧನ
ರಾಜು ಬಂಧಿತ RSS ಕಾರ್ಯಕರ್ತ
ರಮೇಶ್ ಬಿ. ಜವಳಗೇರಾ
|

Updated on:Jun 02, 2023 | 7:54 AM

Share

ರಾಯಚೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ವಾಟ್ಸಪ್​ ಸ್ಟೇಟಸ್ ಹಾಕಿದ ಆರೋಪದಡಿ ಆರ್​ಎಸ್​ಎಸ್​ (RSS) ಕಾರ್ಯಕರ್ತನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು(Raichur) ಜಿಲ್ಲೆ ಲಿಂಗಸುಗೂರು ಪಟ್ಟಣದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಮುಸ್ಲೀಂ ಹೆಣ್ಮಕ್ಕಳು ಬರೀ ಮಕ್ಕಳನ್ನ ಹೇರುವ ಮಷಿನ್ ಎಂದು ಆರ್​ಎಸ್​ಎಸ್​ ಸ್ವಯಂ ಸೇವಕ ರಾಜು ಎಂಬಾತ ವಾಟ್ಸಪ್​ ಸ್ಟೇಟಸ್ ಹಾಕಿದ್ದ. ಇದು ಸೋಷಿಯಲ್‌ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಮುಸ್ಲಿಂ ಸಮಯದಾಯ ಜನ ಆಕ್ರೋಶಗೊಂಡು ಲಿಂಗಸುಗೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ರಾಜುನನ್ನು ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡ ಲಿಂಗಸೂರು ಪೊಲೀಸರು ಆರೋಪಿ ರಾಜುನನ್ನ ಬಂಧಿಸಿದ್ದಾರೆ.

ಇದನ್ನೂ ಓದಿ: Chikkamagaluru News: ಫೇಸ್​ಬುಕ್​ನಲ್ಲಿ ಸ್ಪೀಕರ್​ ಯುಟಿ ಖಾದರ್ ವಿರುದ್ಧ ಶ್ರೀರಾಮಸೇನೆ ಮುಖಂಡ ಅವಹೇಳನಕಾರಿ ಪೋಸ್ಟ್; ದೂರು ದಾಖಲು

ಮುಸ್ಲೀಂ ಹೆಣ್ಮಕ್ಕಳು ಬರೀ ಮಕ್ಕಳನ್ನ ಹೇರುವ ಮಷಿನ್ ಎಂದು ಲಿಂಗಸೂರಿನ ಆರ್​ಎಸ್​ಎಸ್​ ಕಾರ್ಯಕರ್ತ ರಾಜು ಎಂಬಾತ ವಾಟ್ಸಪ್ ಸ್ಟೇಟಸ್​ ಹಾಕಿಕೊಂಡಿದ್ದ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಬಳಿಕ ಸ್ಥಳೀಯ ನೂರಾರು ಮುಸ್ಲಿಂ ಸಮುದಾಯದ ಜನ ನಿನ್ನೆ (ಜೂನ್ 01) ತಡ ರಾತ್ರಿ ಲಿಂಗಸೂರು ಪೊಲೀಸ್​ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ಮಾಡಿದ್ದು, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ರಾಜು ಎಂಬಾತನನ್ನು ಕೂಡಲೇ ಬಂಧಿಸಬೇಕೆಂದು ಪಟ್ಟು ಹಿಡಿದಿದ್ದು, ಬಳಿಕ ಪೊಲೀಸರು ರಾಜು ವಿರುದ್ಧ ಎಫ್​ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಿದ್ದಾರೆ.

ಪೊಲೀಸ್ ಠಾಣೆಯಲ್ಲಿ ಬರ್ತಡೇ ಆಚರಿಸಿಕೊಂಡ ಸಿಪಿಐ

ತುಮಕೂರು: ಜಿಲ್ಲೆಯ ಶಿರಾ ನಗರ ಸಿಪಿಐ ಪ್ರಕಾಶ್ ಅವರು ಪೊಲೀಸ್ ಠಾಣೆಯಲ್ಲಿ ಜನ್ಮದಿನ ಆಚರಣೆ ಮಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಠಾಣೆಯಲ್ಲೇ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಸಿಪಿಐ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಕೆಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:47 am, Fri, 2 June 23

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು