Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್​ನವರು ದೇಶಕ್ಕಾಗಿ ಹೋರಾಡಿ ಜೈಲಿಗೆ ಹೋದವರಲ್ಲ: ಪಠ್ಯ ಪರಿಷ್ಕರಣೆ ಬಗ್ಗೆ ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಕಿಡಿ

ಪಠ್ಯ ಪರಿಷ್ಕರಣೆ ಹಿನ್ನೆಲೆ ಡಿ.ಕೆ. ಶಿವಕುಮಾರ ಪುಸ್ತಕ ಹರಿದು ಹಾಕಿದ್ದ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಬೇಸರ ವ್ಯಕ್ತಪಡಿಸಿದ್ದು, ಬಹಳ ಆವೇಷದಿಂದ ಹರಿದು ಹಾಕಿದ್ದಾರೆ ಎಂದರು.

ಆರ್​ಎಸ್​ಎಸ್​ನವರು ದೇಶಕ್ಕಾಗಿ ಹೋರಾಡಿ ಜೈಲಿಗೆ ಹೋದವರಲ್ಲ: ಪಠ್ಯ ಪರಿಷ್ಕರಣೆ ಬಗ್ಗೆ ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಕಿಡಿ
ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jun 22, 2022 | 10:54 AM

ರಾಯಚೂರು: ಆರ್​ಎಸ್​ಎಸ್​ನವರು (RSS) ದೇಶಕ್ಕಾಗಿ ಹೋರಾಡಿ ಜೈಲಿಗೆ ಹೋದವರಲ್ಲ. ಅಂಥವರ ವಿಚಾರವನ್ನ ಪಠ್ಯದಲ್ಲಿ (Text book) ಸೇರಿಸಿ, ದೇಶಪ್ರೇಮ ಹೇಳುತ್ತಿರುವುದು ಅಪಹಾಸ್ಯ. ಈಗಿನ ಪಠ್ಯಕ್ರಮ ಅಪಾಯಕಾರಿಯಾಗಿದೆ. ಇದಕ್ಕೆಲ್ಲಾ ಆರ್​ಎಸ್​ಎಸ್​ ಕಾರಣ ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ವಿವಾದ ಸೃಷ್ಟಿಸಿದ್ದಾರೆ. ನಗರದಲ್ಲಿ ಟಿವಿ 9ಗೆ ಹೇಳಿಕೆ ನೀಡಿದ ಕುಂ ವೀರಭದ್ರಪ್ಪ, ಪಠ್ಯ ಪುಸ್ತಕ ಪರಿಷ್ಕರಣೆ ದುರಂತ ನಾಟಕ. ಯಾವ ರಾಜ್ಯ ಮತ್ತು ದೇಶದಲ್ಲಿ ನಡೆದಿಲ್ಲ. ಮಕ್ಕಳನ್ನ ರಾಷ್ಟ್ರ ನಿರ್ಮಾಣಕ್ಕೆ ರೂಪಿಸಲು ಪಠ್ಯಕ್ರಮ ಜಾರಿಗೊಳಿಸಬೇಕು. ಬಿಸಿ ನಾಗೇಶ್ ಅನ್ನೋ ಮಹಾನುಭಾವ ಶಿಕ್ಷಣ ಸಚಿವ, ಟುಟೋರಿಯಲ್ ಶಿಕ್ಷಕ ರೋಹಿತ್ ಚಕ್ರತೀರ್ಥ ಅನ್ನೋನನ್ನ ಅಯ್ಕೆ ಮಾಡಿದ್ದಾರೆ. ಬ್ರಾಹ್ಮಣ್ಯದ ಬಗ್ಗೆ ಅಪಾರ ಕಾಳಜಿಯಿರುವ ಉಡಾಫೆ ಹಿನ್ನೆಲೆ ವ್ಯಕ್ತಿ ಆತ. ಕುವೆಂಪು ಅವರ ನಾಡಗೀತೆ ತಿರುಚಿ, ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ. ಈತ ಸಮೀತಿ ಅಧ್ಯಕ್ಷ ಅಂದರೆ ಇದಕ್ಕಿಂತ ದುರಂತ ಮತ್ತೊಂದಿಲ್ಲ. ಇಲ್ಲಿನ ಬಹುತ್ವವನ್ನ ಪ್ರೀತಿಸಬೇಕು. ಗುಡಿ ಕೈಗಾರಿಕೆಗಳಿವೆ. ಅವರನ್ನೆಲ್ಲಾ ಪಠ್ಯದಲ್ಲಿ ಅಳವಡಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: Political Crisis:ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಸಂಪುಟ ಸಭೆ ಕರೆದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ

ಪಠ್ಯ ಪರಿಷ್ಕರಣೆ ಹಿನ್ನೆಲೆ ಡಿ.ಕೆ. ಶಿವಕುಮಾರ ಪುಸ್ತಕ ಹರಿದು ಹಾಕಿದ್ದ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಬೇಸರ ವ್ಯಕ್ತಪಡಿಸಿದ್ದು, ಬಹಳ ಆವೇಷದಿಂದ ಹರಿದು ಹಾಕಿದ್ದಾರೆ. ನಮ್ಮ ಡಿ.ಕೆ. ಶಿವಕುಮಾರ ಹಾಗೇ ಮಾಡೋ ವ್ಯಕ್ತಿಯಲ್ಲ. ನಾನು ಕಾಂಗ್ರೆಸಿಸಮ್ ಅಲ್ಲ, ಬಿಜೆಪಿಗೂ ಸಂಬಂಧವಿಲ್ಲ. ನಾನು ಮನುಷ್ಯನ ಪರವಾಗಿರೋನು. ಪುಸ್ತಕಗಳನ್ನು ಹರಿದು ಎಸೆಯೋದು, ಸುಡೋದು ಇಷ್ಟಪಡಲ್ಲ ಎಂದರು. ಇದಕ್ಕೂ ಮುನ್ನ ಪಠ್ಯ ಪರಿಕ್ಷರಣೆಗೆ ಆರ್​ಎಸ್​ಎಸ್​ ಕಾರಣ ಅಂತ ಕಿಡಿ ಕಾರಿದ್ದ ಕುಂ ವೀರಭದ್ರಪ್ಪ, ಈ ಮಧ್ಯೆ ನಮ್ಮ ಡಿ.ಕೆ. ಶಿವಕುಮಾರ ಅಂತ ಹೇಳಿ ಪೇಚಿಗೆ ಸಿಲುಕಿದರು.

ರೋಹಿತ್ ಚಕ್ರತೀರ್ಥ ಬಂಧನಕ್ಕೆ ಆಗ್ರಹ

ಪಠ್ಯ ಪರಿಷ್ಕರಣೆಯನ್ನು ವಿರೋಧಿಸಿ ಜೂನ್ 18ರಂದು ನಗರದಲ್ಲಿ ಬೃಹತ್ ಪ್ರತಿಭಟನೆ (Protest) ನಡೆಯಿತು. ಕೆಎಸ್ಆರ್ ರೈಲು ನಿಲ್ದಾಣದಿಂದ ಫ್ರೀಡಂಪಾರ್ಕ್​ವರೆಗೂ (Freedom Park) ಪ್ರತಿಭಟನಾ ಮೆರವಣಿಗೆ ಸಡೆಸಲು ಸಜ್ಜಾಗಿದ್ದು, ಈ ವೇಳೆ ರ್ಯಾಲಿಗೆ ಅವಕಾಶ ನೀಡದ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಪ್ರತಿಭಟನಾ ಮೆರವಣಿಗೆಯಲ್ಲಿ ಸಂಗೀತ ನಿರ್ದೇಶಕ ಹಂಸಲೇಖ, ಸಿಎಸ್. ದ್ವಾರಕನಾಥ್, ಎಪಿ ರಂಗನಾಥ್, ಪ್ರವೀಣ್ ಶೆಟ್ಟಿ, ಸಾ.ರಾ ಗೋವಿಂದ್, ಮುಖ್ಯಮಂತ್ರಿ ಚಂದ್ರು ಅಕೈ ಪದ್ಮಾಶಾಲಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಸಮಾವೇಶದಲ್ಲಿ ಕುವೆಂಪು ಹೋರಾಟ ಸಮಿತಿ, ಸ್ವಾಮೀಜಿಗಳು, ಕನ್ನಡ ಪರ ಸಂಘಟ‌ನೆಗಳು, ವಿದ್ಯಾರ್ಥಿ ಸಂಘಟನೆಗಳು, ಸಾಹಿತಿ, ಚಿಂತಕರು, ಸಾರಿಗೆ ಒಕ್ಕೂಟ, ಸಿಐಟಿಯು ಸೇರಿದಂತೆ ಹಲವು ಸಂಘಟನೆಗಳು ಭಾಗಿಯಾಗಿದ್ದರು. ಸದ್ಯ ಪರಿಷ್ಕೃತ ಆಗಿರುವ ಪಠ್ಯಪುಸ್ತಕವನ್ನ ರದ್ದು ಮಾಡಬೇಕು. ರೋಹಿತ್ ಚಕ್ರತೀರ್ಥರನ್ನ ಬಂಧಿಸಬೇಕೆಂದು ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಆಗ್ರಹಿಸಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ