AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coal shortage in RTPS: ಆರ್​ಟಿ​ಪಿಎಸ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ; ಕತ್ತಲಲ್ಲಿ ಮುಳುಗಲಿದೆ ಅರ್ಧ ರಾಜ್ಯ

ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಎಂಟು ಘಟಕಗಳಿಂದ ನಿತ್ಯ 1720 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತೆ. ಆದ್ರೆ ಕಲ್ಲಿದ್ದಲು ಕೊರತೆಯಿಂದ ನಾಲ್ಕು ಘಟಕಗಳು ವಿದ್ಯುತ್ ಉತ್ಪಾದನೆಯನ್ನು ನಿಲ್ಲಿಸಿವೆ.

Coal shortage in RTPS: ಆರ್​ಟಿ​ಪಿಎಸ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ; ಕತ್ತಲಲ್ಲಿ ಮುಳುಗಲಿದೆ ಅರ್ಧ ರಾಜ್ಯ
RTPS ಘಟಕ
TV9 Web
| Updated By: ಆಯೇಷಾ ಬಾನು|

Updated on: Oct 08, 2021 | 10:16 AM

Share

ರಾಯಚೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ(Raichur Thermal Power Station) ಕಲ್ಲಿದ್ದಲು ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಅಭಾವ ಉಂಟಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಸಿಕ್ಕಿದೆ. ರಾಜ್ಯಕ್ಕೆ ಶೇ. 45 ರಷ್ಟು ವಿದ್ಯುತ್ ನೀಡುವ ಆರ್​ಟಿ​ಪಿಎಸ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದ್ದು ವಿದ್ಯುತ್ ಉತ್ಪಾದನೆಯಲ್ಲಿ ಸಮಸ್ಯೆ ಎದುರಾಗಿದೆ.

ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಎಂಟು ಘಟಕಗಳಿಂದ ನಿತ್ಯ 1720 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತೆ. ಆದ್ರೆ ಕಲ್ಲಿದ್ದಲು ಕೊರತೆಯಿಂದ ನಾಲ್ಕು ಘಟಕಗಳು ವಿದ್ಯುತ್ ಉತ್ಪಾದನೆಯನ್ನು ನಿಲ್ಲಿಸಿವೆ. ಕೇವಲ 4 ಘಟಕಗಳಿಂದ 480 ರಿಂದ 500 ಮೆಗಾ ವ್ಯಾಟ್ ವಿದ್ಯುತ್ ಮಾತ್ರ ಉತ್ಪಾದನೆಯಾಗುತ್ತಿದೆ. ಇಂದಿಗೆ 12,010 ಮೆಟ್ರಿಕ್ ಟನ್ ಕಲ್ಲಿದ್ದಲು ಮಾತ್ರ ಸ್ಟಾಕ್ ಇದ್ದು, ನಾಲ್ಕು ಘಟಕಗಳಿಗೆ ಮಾತ್ರ ಕಲ್ಲಿದ್ದಲು ಪೂರೈಕೆಯಾಗುತ್ತಿದೆ.

ಎಂಟು ಘಟಕಗಳು ಉತ್ಪಾದನೆಗೆ 25 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಬೇಕು. ಸಿಂಗರೇಣಿ, ಮಹಾನದಿ ಮತ್ತು ವೆಸ್ಟರ್ನ್ ಕೋಲ್ ಗಣಿಯಿಂದ ದಿನಕ್ಕೆ 8 ರಿಂದ 9 ರೇಕ ಕಲ್ಲಿದ್ದಲು ಬರ್ತಾ ಇತ್ತು. ಪ್ರಸ್ತುತ ಕೇವಲ 3 ರಿಂದ 4 ರೇಕ ಕಲ್ಲಿದ್ದಲು ಬರ್ತಿದೆ. ಇಂದು ಕಲ್ಲಿದ್ದಲು ಬಾರದಿದ್ದರೆ ವಿದ್ಯುತ್ ಉತ್ಪಾದಿಸುತ್ತಿರುವ 4 ಘಟಕಗಳು ಬಂದ್ ಆಗುವ ಆತಂಕ ಎದುರಾಗಿದೆ. ಇನ್ನೂ ವೈಟಿಪಿಎಸ್ ಒಂದೇ ಘಟಕದಿಂದ ವಿದ್ಯುತ್ ಉತ್ಪಾದನೆಯಾಗುತ್ತಿದ್ದು 25 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಸ್ಟಾಕ್ ಇದ್ದು, ಎರಡು ದಿನಕ್ಕೆ ಮಾತ್ರ ಸಾಕಾಗಲಿದೆ. ಹೀಗಾಗಿ ರಾಜ್ಯಕ್ಕೆ ವಿದ್ಯುತ್ ಕ್ಷಾಮ ಎದುರಾಗುವ ಸಾಧ್ಯತೆ ಇದೆ ಎಂದು ಆರ್​ಟಿ​ಪಿಎಸ್ ಘಟಕದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಆರ್​ಟಿಪಿಎಸ್ ಘಟಕದಲ್ಲಿನ 7 ವಿದ್ಯುತ್ ಉತ್ಪಾದನೆ ಘಟಕ ಸ್ಥಗಿತ ; ಬೇಡಿಕೆ ಹೆಚ್ಚಾದರೂ ಪೂರೈಕೆಗೆ ಹಿಂದೇಟು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ