AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಟನ್​ ಊಟ ಮಾಡಿ ಒಂದೇ ಕುಟುಂಬದ ನಾಲ್ವರ ಸಾವು

ರಾತ್ರಿ ಮಟನ್​ ಊಟ ಮಾಡಿ ಮಲಗಿದ್ದ ಕುಟುಂಬದ ನಾಲ್ವರು ಬೆಳಗ್ಗೆ ಏಳಲೆ ಇಲ್ಲ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಇದೇ ಕುಟುಂಬ ಓರ್ವ ಬಾಲಕಿ ಸ್ಥಿತಿ ಗಂಭಿರವಾಗಿದೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಟನ್​ ಊಟ ಮಾಡಿ ಒಂದೇ ಕುಟುಂಬದ ನಾಲ್ವರ ಸಾವು
ಭೀಮಣ್ಣ, ಈರಮ್ಮ, ಮಲ್ಲೇಶ್, ಪಾರ್ವತಿ ಮೃತರು
Follow us
ಭೀಮೇಶ್​​ ಪೂಜಾರ್
| Updated By: ವಿವೇಕ ಬಿರಾದಾರ

Updated on:Aug 02, 2024 | 11:05 AM

ರಾಯಚೂರು, ಆಗಸ್ಟ್​ 02: ಮಟನ್​ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಸಿರವಾರ (Sirwar) ತಾಲೂಕಿನ ಕಲ್ಲೂರು ಗ್ರಾಮ ನಡೆದಿದೆ. ಭೀಮಣ್ಣ (60), ಪತ್ನಿ ಈರಮ್ಮ (54), ಮಗ ಮಲ್ಲೇಶ್ (19), ಪುತ್ರಿ ಪಾರ್ವತಿ (17) ಮೃತರು. ಭೀಮಣ್ಣ ಮತ್ತು ಈರಮ್ಮ ಮತ್ತೊಬ್ಬ ಪುತ್ರಿ ಮಲ್ಲಮ್ಮ (18) ಎಂಬವರ ಸ್ಥಿತಿ ಗಂಭೀರವಾಗಿದ್ದು, ರಾಯಚೂರಿನ (Raichur) ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಟನ್ ಮಾಡುವ ವೇಳೆ ಅಡುಗೆಯಲ್ಲಿ ಹಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸಿರವಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭೀಮಾ ನದಿಯಲ್ಲಿ‌ ಮುಳುಗಿ ವ್ಯಕ್ತಿ ಸಾವು

ಕಲಬುರಗಿ: ಸ್ನೇಹಿತನನ್ನು ಉಳಿಸಲು ಹೋಗಿ ಭೀಮಾ ನದಿಯಲ್ಲಿ ಮುಳುಗಿ ವ್ಯಕ್ತಿ ಮೃತಪಟ್ಟಿರುವ ಘಟನೆ ಅಫಜಲಪುರ್ ತಾಲೂಕಿನ ಗಾಣಗಾಪುರ ಗ್ರಾಮದಲ್ಲಿ ನಡೆದಿದೆ. ಶಶಿಕಾಂತ್ (42) ಮೃತ ದುರ್ದೈವಿ. ಶಶಿಕಾಂತ್ ಸ್ನೇಹಿತರ ಜೊತೆ ಭೀಮಾ‌ ನದಿ ತೀರಕ್ಕೆ ಹೋಗಿದ್ದನು. ಈ ವೇಳೆ ಆತನ ಸ್ನೇಹಿತ ಕಾಲು ಜಾರಿ ಭೀಮಾ‌ ನದಿಯಲ್ಲಿ ಬಿದ್ದಿದ್ದಾನೆ. ಈ ವೇಳೆ ಸ್ಥಳೀಯರು ಶಶಿಕಾಂತ್ ಸ್ನೇಹಿತನನ್ನು ರಕ್ಷಣೆ ಮಾಡಿದ್ದಾರೆ. ಆದರೆ, ಸ್ನೇಹಿತನನ್ನು ಕಾಪಾಡಲು ಹೋಗಿ ಶಶಿಕಾಂತ್ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:44 am, Fri, 2 August 24

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ