ರಾಯಚೂರು: ರಾಷ್ಟ್ರ ಮಟ್ಟದ ಓಟದ ಸ್ವರ್ಧೆ ಹೆಸರಿನಲ್ಲಿ ಮಹಾ ವಂಚನೆ, ಹೀಗೂ ಹಣ ಮಾಡುವ ದಂಧೆ

ರಾಯಚೂರಿನಲ್ಲಿ ಹಾಕಲಾಗಿದ್ದ ಓಟದ ಸ್ಪರ್ಧೆಯ ನಕಲಿ ಫ್ಲೆಕ್ಸ್ ನಂಬಿ ಹಲವಾರು ಸ್ಪರ್ಧಿಗಳು ಹಣ ಕಳೆದುಕೊಂಡಿದ್ದಾರೆ. ಬೇರೆ ಜಿಲ್ಲೆ ಮತ್ತು ರಾಜ್ಯದಿಂದ ಬಂದ ಸ್ಪರ್ಧಿಗಳು ತಲಾ 5 ಸಾವಿರ ರೂ.ಗಳನ್ನು ಆಯೋಜಕರಿಗೆ ನೀಡಿದ್ದು, ಹಣ ಪಡೆದ ಆಯೋಜಕರು ಹೇಳದೆ ಕೇಳದೆ ಪರಾರಿಯಾಗಿದ್ದಾರೆ. ದಿಕ್ಕು ತೋಚದಂತಾದ ಸ್ಪರ್ಧಿಗಳು ಪೊಲೀಸರಲ್ಲಿ ದೂರು ನೀಡಿದ್ದಾರೆ.

ರಾಯಚೂರು: ರಾಷ್ಟ್ರ ಮಟ್ಟದ ಓಟದ ಸ್ವರ್ಧೆ ಹೆಸರಿನಲ್ಲಿ ಮಹಾ ವಂಚನೆ, ಹೀಗೂ ಹಣ ಮಾಡುವ ದಂಧೆ
ಪೊಲೀಸರಲ್ಲಿ ಮನವಿ ಮಾಡಿಕೊಂಡ ವಂಚಿತ ಸ್ಪರ್ಧಿಗಳು
Edited By:

Updated on: Sep 26, 2025 | 4:37 PM

ರಾಯಚೂರು, ಸೆಪ್ಟೆಂಬರ್ 26:  ನಗರದ ಸ್ಟೇಶನ್ ರಸ್ತೆಯಲ್ಲಿ ಡಾ.ಅಬ್ದುಲ್ ಕಲಾಂ ಫೌಂಡೇಶನ್ ಮಸ್ಕಿ ಹೆಸರಿನಲ್ಲಿ ಒಂದು  ಫ್ಲೆಕ್ಸ್ ಹಾಕಲಾಗಿತ್ತು. ಓಟದ ಸ್ಫರ್ಧೆಯ ಕುರಿತಾಗಿದ್ದ ಈ ಫ್ಲೆಕ್ಸ್ ನೋಡಿ ಹಲಾವರು ಸ್ಪರ್ಧಿಗಳು ನಂಬಿ ಹಣ ಕಟ್ಟಿ ಮೋಸ ಹೋಗಿದ್ದಾರೆ. ಫ್ಲೆಕ್ಸ್​ನಲ್ಲಿ ರಾಯಚೂರಿನ ಮಸ್ಕಿಯಲ್ಲಿ ಓಟದ ಸ್ಪರ್ಧೆ ಏರ್ಪಡಿಸಲಾಗಿದ್ದು,ಸ್ಪರ್ಧಾಳುಗಳು ಐದು ಸಾವಿರ ಹಣ ಕೊಟ್ಟು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಿ ಎಂದು ಬರೆಯಲಾಗಿತ್ತು. ಈ ಐದು ಸಾವಿರ ರೂಪಾಯಿ ಪೈಕಿ ಹೆಸರು ನೊಂದಾಯಿಸಿಕೊಳ್ಳಲು ರೂ.1500  ಮುಂಗಡ ಹಣ ಕೊಡಬೇಕೆಂದು ಹೇಳಲಾಗಿತ್ತು.

ಮೊದಲನೇ ಬಹುಮಾನ 6 ಲಕ್ಷ, ಎರಡನೇ ಬಹುಮಾನ 5 ಲಕ್ಷ ಹಾಗೆಯೇ ಏಳನೇ ಬಹುಮಾನ 50 ಸಾವಿರ. ಹೀಗೆ  ಸಾರ್ವಜನಿಕರನ್ನು ಅಬ್ದುಲ್ ಕಲಾಂ ಫೌಂಡೇಶನ್ ಹೆಸರಿನ ಆಯೋಜಕರು ನಂಬಿಸಿದ್ದರು. ಇದೇ ಫ್ಲೆಕ್ಸ್ ನಂಬಿ ರಾಜ್ಯದ ನಾನಾ ಕಡೆಗಳಿಂದ ಯುವಕರು ಮತ್ತು ಯುವತಿಯರು ಆಯೋಜಕರಿಗೆ ಹಣ ನೀಡಿದ್ದರು.ಓಟದ ಸ್ಪರ್ಧೆ ನಡೆಯುತ್ತದೆಯೆಂದು  ನಂಬಿ ರಾಯಚೂರಿಗೆ ಬಂದಿರುವ  ಸ್ಪರ್ಧಾಳುಗಳು ಈಗ ತಲೆಗೆ ಕೈಹೊತ್ತು ಕುಳಿತಿದ್ದಾರೆ.

ಇದನ್ನೂ ಓದಿ ಓದುವ ವಯಸ್ಸಲ್ಲಿ ಪ್ರೀತಿ-ಪ್ರೇಮ: ಹೆದರಿ ದುರಂತ ಅಂತ್ಯ ಕಂಡ ಅಪ್ರಾಪ್ತ ಪ್ರೇಮಿಗಳು

ಸ್ಪರ್ಧಿಗಳನ್ನು ನಂಬಿಸಿ ಮೋಸ ಮಾಡಿದ್ದು ಹೇಗೆ?

ಆಯೋಜಕರು ಹಾಕಿದ್ದ ಪ್ಲೆಕ್ಸ್​ ನೋಡಿ ಹಾಸನ,ಬೆಂಗಳೂರು, ಬೆಳಗಾವಿ,ಬಳ್ಳಾರಿ,ವಿಜಯನಗರ,ಬಾಗಲಕೋಟೆ,ಆಂದ್ರದ ಕರ್ನೂಲ್ ನಿಂದ  ಸ್ಪರ್ಧಿಗಳು  ರಾಯಚೂರಿಗೆ ಬಂದಿದ್ದರು. ರಾಯಚೂರಿಗೆ ಬಂದಿದ್ದ ಸ್ಪರ್ಧಾಳುಗಳಿಗೆ ತಿಳಿಸಿದ್ದ ಓಟದ ಸ್ಪರ್ಧೆಯ ವಿಳಾಸವೇ ತಪ್ಪಾಗಿತ್ತು. ಇತ್ತ ಸ್ಪರ್ಧಾಳುಗಳಿಂದ ಹಣ ಪಡೆದಿರುವವರು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ನಿನ್ನೆ ತಡ ರಾತ್ರಿ ಅನೇಕ ಯುವಕರು, ಯುವತಿಯರು ರಾಯಚೂರಿಗೆ ಬಂದು ಕಂಗಾಲಾಗಿದ್ದಾರೆ‌. ಒಂದು ಕಡೆ ಆಯೋಜಕರು ಪರಾರಿಯಾಗಿ ವಂಚಿಸಿದ್ದರೆ, ಇನ್ನೊಂದು ಕಡೆ  ರಾಯಚೂರಿನಲ್ಲಿ ಉಳಿದುಕೊಳ್ಳಲು ಅವರಿಗೆ ಜಾಗವೇ ಗೊತ್ತಿಲ್ಲ. ಈ ಮಧ್ಯೆ ತಡ ರಾತ್ರಿಯಾಗಿದ್ದರಿಂದ ಊರುಗಳಿಗೆ ಮರಳಲು ಬಸ್​ಗಳಿಲ್ಲದೇ  ಪರದಾಡಿದ್ದಾರೆ. ಹೆಚ್ಚಿನದಾಗಿ ಕೂಲಿ ಮಾಡುವ ಮತ್ತು ಕಡು ಬಡತನದಲ್ಲಿರುವ ಮಕ್ಕಳೇ ಈ ನಕಲಿ ಓಟದ ಸ್ಪರ್ಧೆ ನಂಬಿ ವಂಚನೆಗೊಳಲಾಗಿದ್ದಾರೆ.

ಈ ವಂಚನೆಯ ವಿಷಯ ಜಿಲ್ಲೆಯ ಪೊಲೀಸರ ಗಮನಕ್ಕೂ ಬಂದಿದೆ. ಈ ಕುರಿತು ಪೊಲೀಸರು ಕೂಡ ಆಯೋಜಕರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಆದರೆ ಸ್ಪರ್ಧಾಳುಗಳಾಗಿ ಬಂದಿದ್ದ ಬಡ ಯುವಕರು ಈ ಜಾಲವನ್ನು ಪತ್ತೆ ಹಚ್ಚಿ ಸೂಕ್ತ ಕ್ರಮಕೈಗೊಳ್ಳಿ ಎಂದು ಪೊಲೀಸರಿಗೆ ಮನವಿ ಮಾಡ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
Follow Us