AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಹೊಲದಲ್ಲಿ ಬಂಡೆ ಉರುಳಿಬಿದ್ದು ಮಕ್ಕಳಿಬ್ಬರು ಸಾವು, ಆನೆ ದಾಳಿಗೆ ಮತ್ತೊಂದು ಬಲಿ

ಪ್ರತ್ಯೇಕ ಘಟನೆ: ಲಿಂಗಸುಗೂರು(Lingasugur) ತಾಲೂಕಿನ ಗೌಡೂರು ತಾಂಡಾದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಕಲ್ಲು ಬಂಡೆ ಜಾರಿ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಇತ್ತ ಮಡಿಕೇರಿ ತಾಲೂಕಿನ ಭಾಗಮಂಡಲ- ಸಮೀಪದ‌ ಚೇರಂಗಾಲ ಗ್ರಾಮದಲ್ಲಿ ಕಾಡಾನೆ ದಾಳಿಗೆ 34 ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ.

ಪ್ರತ್ಯೇಕ ಘಟನೆ: ಹೊಲದಲ್ಲಿ ಬಂಡೆ ಉರುಳಿಬಿದ್ದು ಮಕ್ಕಳಿಬ್ಬರು ಸಾವು, ಆನೆ ದಾಳಿಗೆ ಮತ್ತೊಂದು ಬಲಿ
ಮೃತ ರ್ದುದೈವಿಗಳು
ಭೀಮೇಶ್​​ ಪೂಜಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 15, 2024 | 5:47 PM

Share

ಬೆಂಗಳೂರು, ಅ.15: ಹೊಲದ ಬದುವಿಗೆ ಹಾಕಿದ್ದ ಬಂಡೆ ಉರುಳಿಬಿದ್ದು ಮಕ್ಕಳಿಬ್ಬರು ಸಾವನ್ನಪ್ಪಿದ ದಾರುಣ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು(Lingasugur) ತಾಲೂಕಿನ ಗೌಡೂರು ತಾಂಡಾದಲ್ಲಿ ನಡೆದಿದೆ. ಮಂಜುನಾಥ್​​(9), ವೈಶಾಲಿ(8) ಮೃತ ಮಕ್ಕಳು. ಓರ್ವ ಮಗುವಿನ ಕಾಲು ಮುರಿದಿದ್ದು, ಸದ್ಯ ಗಾಯಾಳು ಮಗುವಿಗೆ ಲಿಂಗಸಗೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಲೆಗೆ ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಮಕ್ಕಳು ಪೋಷಕರ ಜೊತೆಗೆ ಜಮೀನಿಗೆ ಹೋಗಿದ್ದರು. ಇದೇ ವೇಳೆ ಜಮೀನಿನ ಬದುವಿನಲ್ಲಿ ಹಾಕಲಾಗಿದ್ದ ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ ಕಲ್ಲು ಬಂಡೆ ಜಾರಿ ಬಿದ್ದು ದುರ್ಘಟನೆ ನಡೆದಿದೆ. ಈ ಕುರಿತು ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಗದಗ: ತಂಗಿಯನ್ನು ಪ್ರೀತಿಸಿದ ಎಂದು ಯುವಕನಿಗೆ ಚಾಕು ಇರಿದ ಅಣ್ಣ, ಸಾವು ಬದುಕಿನ ನಡುವೆ ಯುವಕನ ಹೋರಾಟ

ಕೊಡಗಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕಿನ ಭಾಗಮಂಡಲ- ಸಮೀಪದ‌ ಚೇರಂಗಾಲ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಕರುಣಾಕರ ಬಲಿ(34) ಮೃತ ರ್ದುದೈವಿ. ಕಾಡಿಗೆ ತೆರಳಿದ್ದಾಗ ಕರುಣಾಕರ ಮೇಲೆ ಕಾಡಾನೆ ದಾಳಿ‌ ಮಾಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಧ್ಯ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೊಳಕಾಲ್ಮೂರಿನಲ್ಲಿ ಪತ್ನಿ ಸಾವಿನಿಂದ ನೊಂದು ಪತಿ ಆತ್ಮಹತ್ಯೆ

ಚಿತ್ರದುರ್ಗ: ಪತ್ನಿ ಸಾವಿನಿಂದ ನೊಂದು ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಗೌರಮ್ಮ(60) ಮನೆಯಲ್ಲಿ ಸಾವನ್ನಪ್ಪಿದ್ದರು. ಪತ್ನಿ ಸಾವಿನಿಂದ ನೊಂದ ಪತಿ ಶಿವಣ್ಣ(70) ನೇಣಿಗೆ ಶರಣಾಗಿದ್ದಾರೆ. ವೃದ್ಧ ದಂಪತಿಯ ದಾರುಣ ಸಾವು ಕಂಡು ಸ್ಥಳೀಯರು ಮರುಕ ಪಡುತ್ತಿದ್ದಾರೆ. 2 ದಶಕದಿಂದ ಮೊಳಕಾಲ್ಮೂರಲ್ಲಿ ನೆಲೆಸಿದ್ದ ದಂಪತಿ, ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಬಂಧಿಕರು ಯಾರೂ ಬಾರದ‌ ಹಿನ್ನೆಲೆ, ಸ್ಥಳೀಯರಿಂದಲೇ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್