AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಹೊಲದಲ್ಲಿ ಬಂಡೆ ಉರುಳಿಬಿದ್ದು ಮಕ್ಕಳಿಬ್ಬರು ಸಾವು, ಆನೆ ದಾಳಿಗೆ ಮತ್ತೊಂದು ಬಲಿ

ಪ್ರತ್ಯೇಕ ಘಟನೆ: ಲಿಂಗಸುಗೂರು(Lingasugur) ತಾಲೂಕಿನ ಗೌಡೂರು ತಾಂಡಾದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಕಲ್ಲು ಬಂಡೆ ಜಾರಿ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಇತ್ತ ಮಡಿಕೇರಿ ತಾಲೂಕಿನ ಭಾಗಮಂಡಲ- ಸಮೀಪದ‌ ಚೇರಂಗಾಲ ಗ್ರಾಮದಲ್ಲಿ ಕಾಡಾನೆ ದಾಳಿಗೆ 34 ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ.

ಪ್ರತ್ಯೇಕ ಘಟನೆ: ಹೊಲದಲ್ಲಿ ಬಂಡೆ ಉರುಳಿಬಿದ್ದು ಮಕ್ಕಳಿಬ್ಬರು ಸಾವು, ಆನೆ ದಾಳಿಗೆ ಮತ್ತೊಂದು ಬಲಿ
ಮೃತ ರ್ದುದೈವಿಗಳು
ಭೀಮೇಶ್​​ ಪೂಜಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 15, 2024 | 5:47 PM

Share

ಬೆಂಗಳೂರು, ಅ.15: ಹೊಲದ ಬದುವಿಗೆ ಹಾಕಿದ್ದ ಬಂಡೆ ಉರುಳಿಬಿದ್ದು ಮಕ್ಕಳಿಬ್ಬರು ಸಾವನ್ನಪ್ಪಿದ ದಾರುಣ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು(Lingasugur) ತಾಲೂಕಿನ ಗೌಡೂರು ತಾಂಡಾದಲ್ಲಿ ನಡೆದಿದೆ. ಮಂಜುನಾಥ್​​(9), ವೈಶಾಲಿ(8) ಮೃತ ಮಕ್ಕಳು. ಓರ್ವ ಮಗುವಿನ ಕಾಲು ಮುರಿದಿದ್ದು, ಸದ್ಯ ಗಾಯಾಳು ಮಗುವಿಗೆ ಲಿಂಗಸಗೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಲೆಗೆ ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಮಕ್ಕಳು ಪೋಷಕರ ಜೊತೆಗೆ ಜಮೀನಿಗೆ ಹೋಗಿದ್ದರು. ಇದೇ ವೇಳೆ ಜಮೀನಿನ ಬದುವಿನಲ್ಲಿ ಹಾಕಲಾಗಿದ್ದ ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ ಕಲ್ಲು ಬಂಡೆ ಜಾರಿ ಬಿದ್ದು ದುರ್ಘಟನೆ ನಡೆದಿದೆ. ಈ ಕುರಿತು ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಗದಗ: ತಂಗಿಯನ್ನು ಪ್ರೀತಿಸಿದ ಎಂದು ಯುವಕನಿಗೆ ಚಾಕು ಇರಿದ ಅಣ್ಣ, ಸಾವು ಬದುಕಿನ ನಡುವೆ ಯುವಕನ ಹೋರಾಟ

ಕೊಡಗಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕಿನ ಭಾಗಮಂಡಲ- ಸಮೀಪದ‌ ಚೇರಂಗಾಲ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಕರುಣಾಕರ ಬಲಿ(34) ಮೃತ ರ್ದುದೈವಿ. ಕಾಡಿಗೆ ತೆರಳಿದ್ದಾಗ ಕರುಣಾಕರ ಮೇಲೆ ಕಾಡಾನೆ ದಾಳಿ‌ ಮಾಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಧ್ಯ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೊಳಕಾಲ್ಮೂರಿನಲ್ಲಿ ಪತ್ನಿ ಸಾವಿನಿಂದ ನೊಂದು ಪತಿ ಆತ್ಮಹತ್ಯೆ

ಚಿತ್ರದುರ್ಗ: ಪತ್ನಿ ಸಾವಿನಿಂದ ನೊಂದು ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಗೌರಮ್ಮ(60) ಮನೆಯಲ್ಲಿ ಸಾವನ್ನಪ್ಪಿದ್ದರು. ಪತ್ನಿ ಸಾವಿನಿಂದ ನೊಂದ ಪತಿ ಶಿವಣ್ಣ(70) ನೇಣಿಗೆ ಶರಣಾಗಿದ್ದಾರೆ. ವೃದ್ಧ ದಂಪತಿಯ ದಾರುಣ ಸಾವು ಕಂಡು ಸ್ಥಳೀಯರು ಮರುಕ ಪಡುತ್ತಿದ್ದಾರೆ. 2 ದಶಕದಿಂದ ಮೊಳಕಾಲ್ಮೂರಲ್ಲಿ ನೆಲೆಸಿದ್ದ ದಂಪತಿ, ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಬಂಧಿಕರು ಯಾರೂ ಬಾರದ‌ ಹಿನ್ನೆಲೆ, ಸ್ಥಳೀಯರಿಂದಲೇ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!