AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ: ಜೀವ ಪಣಕ್ಕಿಟ್ಟು, ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದು ಹಳ್ಳ ದಾಟುವ ಸ್ಥಿತಿ

ದೇವರಗುಡಿ ಗ್ರಾಮದಿಂದ ಪಗಡದಿನ್ನಿ ಗ್ರಾಮದ ಶಾಲೆಗೆ ಹೋಗುವ ಹೈ ಸ್ಕೂಲ್ ವಿದ್ಯಾರ್ಥಿಗಳು ಹಳ್ಳ ದಾಟಿ ಹೋಗಬೇಕಿದೆ. ಹೀಗಾಗಿ ವಿದ್ಯಾರ್ಥಿಗಳು ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದುಕೊಂಡು ಹಳ್ಳ ದಾಟುತ್ತಿದ್ದಾರೆ.

ಶಾಲೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ: ಜೀವ ಪಣಕ್ಕಿಟ್ಟು, ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದು ಹಳ್ಳ ದಾಟುವ ಸ್ಥಿತಿ
ಶಾಲೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ
TV9 Web
| Edited By: |

Updated on:Jul 19, 2022 | 7:12 PM

Share

ರಾಯಚೂರು: ಶಾಲೆ ಮಕ್ಕಳು ತಮ್ಮ ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದುಕೊಂಡು ಹಳ್ಳ ದಾಟವಂತಹ ಪರಿಸ್ಥಿತಿ ರಾಯಚೂರಿನಲ್ಲಿ ಕಂಡು ಬಂದಿದೆ. ಹಳ್ಳ ದಾಟಿ ಶಾಲೆಗೆ ಹೋಗಲು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ದೇವರಗುಡಿ ಗ್ರಾಮದಲ್ಲಿ 1ರಿಂದ 7ನೇ ತರಗತಿವರೆಗೆ ಮಾತ್ರ ಶಾಲೆ ಇದ್ದು ಪ್ರೌಢಶಾಲೆಗೆ ಪಗಡದಿನ್ನಿಗೆ ಹೋಗಬೇಕು. ಆದ್ರೆ ಅಲ್ಲಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ದೇವರಗುಡಿ ಗ್ರಾಮದಿಂದ ಪಗಡದಿನ್ನಿ ಗ್ರಾಮದ ಶಾಲೆಗೆ ಹೋಗುವ ಹೈ ಸ್ಕೂಲ್ ವಿದ್ಯಾರ್ಥಿಗಳು ಹಳ್ಳ ದಾಟಿ ಹೋಗಬೇಕಿದೆ. ಹೀಗಾಗಿ ವಿದ್ಯಾರ್ಥಿಗಳು ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದುಕೊಂಡು ಹಳ್ಳ ದಾಟುತ್ತಿದ್ದಾರೆ. ಪಗಡದಿನ್ನಿಗೆ ಹೋಗಲು ಸೇತುವೆ, ರಸ್ತೆ ವ್ಯವಸ್ಥೆ ಇಲ್ಲ. ದೇವರಗುಡಿ, ಮಲ್ಲಾಪುರ ಕ್ಯಾಂಪ್, ದುಗ್ಗಮ್ಮನ ಗುಂಡಾ ಸೇರಿ ನಾಲ್ಕೈದು ಹಳ್ಳಿಗಳ ಮಕ್ಕಳ ಸ್ಥಿತಿ ಅಯೋಮಯವಾಗಿದೆ. ಜೀವ ಪಣಕ್ಕಿಟ್ಟು ಶಾಲೆಗೆ ತೆರಳಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕ್ರಮಕೈಗೊಳ್ಳುವಂತೆ ಸುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪಗಡದಿನ್ನಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸುತ್ತೇನೆ

ಇನ್ನು ವಿದ್ಯಾರ್ಥಿಗಳು ಬಟ್ಟೆ ಕಳಚಿ ಹಳ್ಳ ದಾಟಿ ಶಾಲೆಗೆ ಹೋಗೊ ವಿಚಾರಕ್ಕೆ ಸಂಬಂಧಿಸಿ ಈ ಬಗ್ಗೆ ರಾಯಚೂರು ಜಿಲ್ಲೆ ಡಿಡಿಪಿಐ ವೃಷಬೇಂದ್ರಯ್ಯ ಸ್ಪಷ್ಟನೆ ನೀಡಿದ್ದಾರೆ. ದೇವರಗುಡಿ ಗ್ರಾಮದ ಮಕ್ಕಳು ಪಗಡದಿನ್ನಿಗೆ ಹೋಗ್ತಾರೆ. ಹೈ ಸ್ಕೂಲ್ ವಿದ್ಯಾರ್ಥಿಗಳು ಅಲ್ಲಿಗೆ ಹಳ್ಳ ದಾಟಿ ಹೋಗ್ತಾರೆ. ಪ್ರತಿ ಬಾರಿ ತುಂಗಭದ್ರಾ ನದಿ ನೀರು ಹೆಚ್ಚಾದಾಗ ಈ ಪರಿಸ್ಥಿತಿ ಇರುತ್ತೆ. ಇಲ್ಲಿ ಸೇತುವೆ ನಿರ್ಮಿಸಬೇಕು ಅನ್ನೋದು ಸ್ಥಳೀಯರ ಆಗ್ರಹ. ಈ ಬಗ್ಗೆ ನಾವೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡುತ್ತೇವೆ. ಸಣ್ಣ ಸೇತುವೆ ನಿರ್ಮಿಸಲು ಮನವಿ ಮಾಡಲಾಗುವುದು. ಪಗಡದಿನ್ನಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಗುಳ್ಯ ಗ್ರಾಮದಲ್ಲಿ ಪ್ರಾಣವನ್ನು ಪಣಕಿಟ್ಟು ಕಾಲುಸಂಕದಲ್ಲಿ ಜನರ ಸಂಚಾರ

ಇನ್ನು ಮತ್ತೊಂದು ಕಡೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಗುಳ್ಯದಲ್ಲಿ ಕಾಲು ಮುರಿದುಕೊಂಡಿದ್ದ ವ್ಯಕ್ತಿಯನ್ನು ಸಾಗಿಸಲು ಸ್ಥಳೀಯರು ಹರಸಾಹಸಪಟ್ಟ ಘಟನೆ ನಡೆದಿದೆ. ಕಾಲುಸಂಕ ದಾಟಲು ಜನರು ಪರದಾಡುತ್ತಿದ್ದ ಬಗ್ಗೆ ಟಿವಿ9 ವರದಿ ಮಾಡಿತ್ತು. ವರದಿ ಪ್ರಸಾರ ಬೆನ್ನಲ್ಲೆ ಗ್ರಾಮಕ್ಕೆ ಎಮ್ಎಲ್ಸಿ ಎಂ.ಕೆ ಪ್ರಾಣೇಶ್ ಭೇಟಿ ನೀಡಿ ಗುಳ್ಯ ಗ್ರಾಮದ ಡೆಡ್ಲಿ ಕಾಲುಸಂಕ ವೀಕ್ಷಿಸಿದ್ದಾರೆ. ಹಾಗೂ ಆದಷ್ಟು ಬೇಗ ಶಾಶ್ವತ ಸೇತುವೆ ನಿರ್ಮಿಸುವ ಭರವಸೆ ನೀಡಿದ್ದಾರೆ.

ಮಳೆಯಿಂದ ರಾಜ್ಯ ಹೆದ್ದಾರಿ ಕುಸಿತ

ಉ.ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿ ಕುಸಿದಿದೆ. ಜೋಯಿಡಾ ತಾಲೂಕಿನಲ್ಲಿ ಮಳೆಯಿಂದ ಕಾರವಾರ-ರಾಮನಗರ ಸಂಪರ್ಕಿಸುವ ಹೆದ್ದಾರಿ ಕುಸಿಯುವ ಭೀತಿ ಎದುರಾಗಿದೆ. ಮಣ್ಣು ಕುಸಿಯುವ ಭೀತಿಯಿಂದ ಸಿಮೆಂಟ್ ತಡೆಗೋಡೆ ನಿರ್ಮಾಣ ಮಾಡಲಾಗಿದ್ದು ಸಿಮೆಂಟ್ ತಡೆಗೋಡೆಯಿದ್ದರೂ ಪದೇ ಪದೆ ರಸ್ತೆ ಕುಸಿಯುತ್ತಿದೆ.

Published On - 4:57 pm, Tue, 19 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್