AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ: ಜೀವ ಪಣಕ್ಕಿಟ್ಟು, ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದು ಹಳ್ಳ ದಾಟುವ ಸ್ಥಿತಿ

ದೇವರಗುಡಿ ಗ್ರಾಮದಿಂದ ಪಗಡದಿನ್ನಿ ಗ್ರಾಮದ ಶಾಲೆಗೆ ಹೋಗುವ ಹೈ ಸ್ಕೂಲ್ ವಿದ್ಯಾರ್ಥಿಗಳು ಹಳ್ಳ ದಾಟಿ ಹೋಗಬೇಕಿದೆ. ಹೀಗಾಗಿ ವಿದ್ಯಾರ್ಥಿಗಳು ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದುಕೊಂಡು ಹಳ್ಳ ದಾಟುತ್ತಿದ್ದಾರೆ.

ಶಾಲೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ: ಜೀವ ಪಣಕ್ಕಿಟ್ಟು, ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದು ಹಳ್ಳ ದಾಟುವ ಸ್ಥಿತಿ
ಶಾಲೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ
TV9 Web
| Edited By: ಆಯೇಷಾ ಬಾನು|

Updated on:Jul 19, 2022 | 7:12 PM

Share

ರಾಯಚೂರು: ಶಾಲೆ ಮಕ್ಕಳು ತಮ್ಮ ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದುಕೊಂಡು ಹಳ್ಳ ದಾಟವಂತಹ ಪರಿಸ್ಥಿತಿ ರಾಯಚೂರಿನಲ್ಲಿ ಕಂಡು ಬಂದಿದೆ. ಹಳ್ಳ ದಾಟಿ ಶಾಲೆಗೆ ಹೋಗಲು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ದೇವರಗುಡಿ ಗ್ರಾಮದಲ್ಲಿ 1ರಿಂದ 7ನೇ ತರಗತಿವರೆಗೆ ಮಾತ್ರ ಶಾಲೆ ಇದ್ದು ಪ್ರೌಢಶಾಲೆಗೆ ಪಗಡದಿನ್ನಿಗೆ ಹೋಗಬೇಕು. ಆದ್ರೆ ಅಲ್ಲಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ದೇವರಗುಡಿ ಗ್ರಾಮದಿಂದ ಪಗಡದಿನ್ನಿ ಗ್ರಾಮದ ಶಾಲೆಗೆ ಹೋಗುವ ಹೈ ಸ್ಕೂಲ್ ವಿದ್ಯಾರ್ಥಿಗಳು ಹಳ್ಳ ದಾಟಿ ಹೋಗಬೇಕಿದೆ. ಹೀಗಾಗಿ ವಿದ್ಯಾರ್ಥಿಗಳು ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದುಕೊಂಡು ಹಳ್ಳ ದಾಟುತ್ತಿದ್ದಾರೆ. ಪಗಡದಿನ್ನಿಗೆ ಹೋಗಲು ಸೇತುವೆ, ರಸ್ತೆ ವ್ಯವಸ್ಥೆ ಇಲ್ಲ. ದೇವರಗುಡಿ, ಮಲ್ಲಾಪುರ ಕ್ಯಾಂಪ್, ದುಗ್ಗಮ್ಮನ ಗುಂಡಾ ಸೇರಿ ನಾಲ್ಕೈದು ಹಳ್ಳಿಗಳ ಮಕ್ಕಳ ಸ್ಥಿತಿ ಅಯೋಮಯವಾಗಿದೆ. ಜೀವ ಪಣಕ್ಕಿಟ್ಟು ಶಾಲೆಗೆ ತೆರಳಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕ್ರಮಕೈಗೊಳ್ಳುವಂತೆ ಸುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪಗಡದಿನ್ನಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸುತ್ತೇನೆ

ಇನ್ನು ವಿದ್ಯಾರ್ಥಿಗಳು ಬಟ್ಟೆ ಕಳಚಿ ಹಳ್ಳ ದಾಟಿ ಶಾಲೆಗೆ ಹೋಗೊ ವಿಚಾರಕ್ಕೆ ಸಂಬಂಧಿಸಿ ಈ ಬಗ್ಗೆ ರಾಯಚೂರು ಜಿಲ್ಲೆ ಡಿಡಿಪಿಐ ವೃಷಬೇಂದ್ರಯ್ಯ ಸ್ಪಷ್ಟನೆ ನೀಡಿದ್ದಾರೆ. ದೇವರಗುಡಿ ಗ್ರಾಮದ ಮಕ್ಕಳು ಪಗಡದಿನ್ನಿಗೆ ಹೋಗ್ತಾರೆ. ಹೈ ಸ್ಕೂಲ್ ವಿದ್ಯಾರ್ಥಿಗಳು ಅಲ್ಲಿಗೆ ಹಳ್ಳ ದಾಟಿ ಹೋಗ್ತಾರೆ. ಪ್ರತಿ ಬಾರಿ ತುಂಗಭದ್ರಾ ನದಿ ನೀರು ಹೆಚ್ಚಾದಾಗ ಈ ಪರಿಸ್ಥಿತಿ ಇರುತ್ತೆ. ಇಲ್ಲಿ ಸೇತುವೆ ನಿರ್ಮಿಸಬೇಕು ಅನ್ನೋದು ಸ್ಥಳೀಯರ ಆಗ್ರಹ. ಈ ಬಗ್ಗೆ ನಾವೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡುತ್ತೇವೆ. ಸಣ್ಣ ಸೇತುವೆ ನಿರ್ಮಿಸಲು ಮನವಿ ಮಾಡಲಾಗುವುದು. ಪಗಡದಿನ್ನಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಗುಳ್ಯ ಗ್ರಾಮದಲ್ಲಿ ಪ್ರಾಣವನ್ನು ಪಣಕಿಟ್ಟು ಕಾಲುಸಂಕದಲ್ಲಿ ಜನರ ಸಂಚಾರ

ಇನ್ನು ಮತ್ತೊಂದು ಕಡೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಗುಳ್ಯದಲ್ಲಿ ಕಾಲು ಮುರಿದುಕೊಂಡಿದ್ದ ವ್ಯಕ್ತಿಯನ್ನು ಸಾಗಿಸಲು ಸ್ಥಳೀಯರು ಹರಸಾಹಸಪಟ್ಟ ಘಟನೆ ನಡೆದಿದೆ. ಕಾಲುಸಂಕ ದಾಟಲು ಜನರು ಪರದಾಡುತ್ತಿದ್ದ ಬಗ್ಗೆ ಟಿವಿ9 ವರದಿ ಮಾಡಿತ್ತು. ವರದಿ ಪ್ರಸಾರ ಬೆನ್ನಲ್ಲೆ ಗ್ರಾಮಕ್ಕೆ ಎಮ್ಎಲ್ಸಿ ಎಂ.ಕೆ ಪ್ರಾಣೇಶ್ ಭೇಟಿ ನೀಡಿ ಗುಳ್ಯ ಗ್ರಾಮದ ಡೆಡ್ಲಿ ಕಾಲುಸಂಕ ವೀಕ್ಷಿಸಿದ್ದಾರೆ. ಹಾಗೂ ಆದಷ್ಟು ಬೇಗ ಶಾಶ್ವತ ಸೇತುವೆ ನಿರ್ಮಿಸುವ ಭರವಸೆ ನೀಡಿದ್ದಾರೆ.

ಮಳೆಯಿಂದ ರಾಜ್ಯ ಹೆದ್ದಾರಿ ಕುಸಿತ

ಉ.ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿ ಕುಸಿದಿದೆ. ಜೋಯಿಡಾ ತಾಲೂಕಿನಲ್ಲಿ ಮಳೆಯಿಂದ ಕಾರವಾರ-ರಾಮನಗರ ಸಂಪರ್ಕಿಸುವ ಹೆದ್ದಾರಿ ಕುಸಿಯುವ ಭೀತಿ ಎದುರಾಗಿದೆ. ಮಣ್ಣು ಕುಸಿಯುವ ಭೀತಿಯಿಂದ ಸಿಮೆಂಟ್ ತಡೆಗೋಡೆ ನಿರ್ಮಾಣ ಮಾಡಲಾಗಿದ್ದು ಸಿಮೆಂಟ್ ತಡೆಗೋಡೆಯಿದ್ದರೂ ಪದೇ ಪದೆ ರಸ್ತೆ ಕುಸಿಯುತ್ತಿದೆ.

Published On - 4:57 pm, Tue, 19 July 22

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ