AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಕೊವಿಡ್ ಲಸಿಕೆ ನಿರಾಕರಿಸಿದವರಿಗೆ ಪಡಿತರ ಕಟ್!

ಕೊವಿಡ್ ಲಸಿಕೆ ಪಡೆದಿರುವ ಬಗ್ಗೆ ದೃಢೀಕರಿಸಿದ ನಂತರವೇ, ಪಡಿತರ ವಿತರಿಸಬೇಕೆಂದು ತಹಶೀಲ್ದಾರರಾದ ಡಾ.ಹಂಪಣ್ಣ ಅವರು ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಯಚೂರು: ಕೊವಿಡ್ ಲಸಿಕೆ ನಿರಾಕರಿಸಿದವರಿಗೆ ಪಡಿತರ ಕಟ್!
ಸಂಗ್ರಹ ಚಿತ್ರ
TV9 Web
| Edited By: |

Updated on:Aug 16, 2021 | 12:52 PM

Share

ರಾಯಚೂರು: ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ನಿರಾಕರಿಸಿದವರಿಗೆ ಪಡಿತರ ನೀಡದಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ರಾಯಚೂರು ತಹಶೀಲ್ದಾರರು ಸೂಚನೆ ನೀಡಿದ್ದಾರೆ. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ನ್ಯಾಯಬೆಲೆ ಅಂಗಡಿ ಮಾಲೀಕರು ಆಗಸ್ಟ್ ತಿಂಗಳ ಪಡಿತರ ವಿತರಣೆಗೆ ಮುನ್ನ ಪಡಿತರ ಚೀಟಿದಾರರು ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರು, ಕೊವಿಡ್ ಲಸಿಕೆ ಪಡೆದಿರುವ ಬಗ್ಗೆ ದೃಢೀಕರಿಸಿದ ನಂತರವೇ, ಪಡಿತರ ವಿತರಿಸಬೇಕೆಂದು ತಹಶೀಲ್ದಾರರಾದ ಡಾ.ಹಂಪಣ್ಣ ಅವರು ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಲಸಿಕೆ ಪಡೆಯಲು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜನರು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ ಕೆಲ ಅಪನಂಬಿಕೆ ಮತ್ತು ವದಂತಿಗಳು ಹೀಂದೇಟಿಗೆ ಕಾರಣವಾಗಿದೆ. ಕೊವಿಡ್ ಮೂರನೇ ಅಲೆ ಹರಡುವ ಮುನ್ನ ಪ್ರತಿಯೊಬ್ಬರು ಕಡ್ಡಾಯವಾಗಿ ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ತಹಶೀಲ್ದಾರರಾದ ಡಾ.ಹಂಪಣ್ಣ ಈ ಆದೇಶ ಹೊರಡಿಸಿದ್ದಾರೆ.

ಕೊವಿಡ್ ಲಸಿಕೆ ಹಾಕಿಸಿಕೊಂಡರೆ ಸೋಂಕಿನಿಂದ ರಕ್ಷಣೆ ಮಾಡಿಕೊಳ್ಳಬಹುದು. ಕೊವಿಡ್ ಮೂರನೇ ಅಲೆ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ಪ್ರತಿಯೊಬ್ಬರು ಕೊವಿಡ್ ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಿದ್ದರೂ ಸಹ ಜನರು ಮಾತ್ರ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿರುವುದರಿಂದ ತಹಶೀಲ್ದಾರರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

notice

ನೀಡದಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ರಾಯಚೂರು ತಹಶೀಲ್ದಾರರು ಸೂಚನೆ

ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪಡಿತರ ಧಾನ್ಯ ವಿತರಿಸಬೇಕೆಂದು ಆದೇಶಿರುವುದರಿಂದ ಇದುವರೆಗೂ ಒಂದು ಬಾರಿಯೂ ಲಸಿಕೆ ಹಾಕಿಸಿಕೊಳ್ಳದವರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಇಲ್ಲದಿದ್ದರೆ ಪಡಿತರ ಪಡೆಯದಂತಾಗುತ್ತದೆ ಎನ್ನುವುದು ಮಾತ್ರ ಸತ್ಯ.

ಇದನ್ನೂ ಓದಿ:

ಕೊವಿಡ್ ನಡುವೆ ಲಕ್ಷಾಂತರ ಬಡವರಿಗೆ ಉಚಿತ ಪಡಿತರ ನೆರವಿಗೆ ಬಂದಿದೆ: ನರೇಂದ್ರ ಮೋದಿ

ಮೂರನೇ ಡೋಸ್​ ಕೊರೊನಾ ಲಸಿಕೆ ನೀಡುವುದಕ್ಕೆ ಒಪ್ಪಿಗೆ ಸೂಚಿಸಿದ ಸಿಡಿಸಿ; ಆದ್ಯತೆ ಮೇರೆಗೆ ವಿತರಿಸಲು ಸೂಚನೆ

Published On - 12:36 pm, Mon, 16 August 21

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ