AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧನೂರು: ಬಾಂಗ್ಲಾ ಕ್ಯಾಂಪ್‌ನಲ್ಲಿ ಅಪ್ರಾಪ್ತನಿಂದ ಪ್ರೀತಿ ಕಿರುಕುಳ, ಬಾಲಕಿ ಆತ್ಮಹತ್ಯೆ

ನನ್ನ ಪ್ರೀತಿ ಒಪ್ಪಿಕೊಳ್ಳದಿದ್ದರೆ ನಿನನ್ನು ಕಿಡ್ನ್ಯಾಪ್ ಮಾಡುತ್ತೀನಿ ಎಂದು ಬಾಲಕ, ಬಾಲಕಿಗೆ ಬೆದರಿಕೆ ಹಾಕಿದ್ದ. ಅಲ್ಲದೆ ಬಾಲಕಿ ಪೋಷಕರನ್ನ ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದ. ಇದರಿಂದ ರೋಸಿ ಹೋಗಿದ್ದ ಬಾಲಕಿ ಮನೆಯಲ್ಲಿದ್ದ ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಿಂಧನೂರು: ಬಾಂಗ್ಲಾ ಕ್ಯಾಂಪ್‌ನಲ್ಲಿ ಅಪ್ರಾಪ್ತನಿಂದ ಪ್ರೀತಿ ಕಿರುಕುಳ, ಬಾಲಕಿ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Aug 09, 2021 | 5:35 PM

Share

ರಾಯಚೂರು: ಪ್ರೀತಿಗಾಗಿ ಪೀಡಿಸ್ತಿದ್ದ ಬಾಲಕನ ನಿತ್ಯ ಕಿರುಕುಳ ತಾಳಲಾಗದೆ 14 ವರ್ಷದ ಬಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧನೂರ ತಾಲೂಕಿನ ಬಾಂಗ್ಲಾ ಕ್ಯಾಂಪ್​ನಲ್ಲಿ ನಡೆದಿದೆ. ತಮನ್ನ (14) ಕ್ರಿಮಿನಾಷಕ ಸೇವಿಸಿ ಅತ್ನಹತ್ಯೆ ಮಾಡಿಕೊಂಡ ಬಾಲಕಿ.

ಬಿನ್ನಿಮಯಿ ಬಿಸ್ವಾಸ (17) ಎಂಬ ಬಾಲಕ ತಮನ್ನ ಎಂಬ ಬಾಲಕಿಗೆ ನಿತ್ಯ ಚುಡಾಯಿಸ್ತಿದ್ದ. ಬಾಲಕಿ ತನ್ನ ಅಜ್ಜನ ಮನೆಗೆ ಹೊಗುವಾಗೆಲ್ಲ ಆಕೆಯನ್ನು ಹಿಂಬಾಲಿಸಿ ಪ್ರೀತಿ ಮಾಡುವಂತೆ ಒತ್ತಾಯಿಸ್ತಿದ್ದ. ಮದುವೆಯಾಗುವಂತೆ ಪೀಡಿಸ್ತಿದ್ದ. ಪ್ರೀತ್ಸೆ ಪ್ರೀತ್ಸೆ ಅಂತ ನಿತ್ಯ ಆತ ಕೊಡ್ತಿದ್ದ ಟಾರ್ಚರ್ಗೆ ಬಾಲಕಿ ಬೇಸತ್ತಿದ್ದಳು. ನನ್ನ ಪ್ರೀತಿ ಒಪ್ಪಿಕೊಳ್ಳದಿದ್ದರೆ ನಿನನ್ನು ಕಿಡ್ನ್ಯಾಪ್ ಮಾಡುತ್ತೀನಿ ಎಂದು ಬಾಲಕ, ಬಾಲಕಿಗೆ ಬೆದರಿಕೆ ಹಾಕಿದ್ದ. ಅಲ್ಲದೆ ಬಾಲಕಿ ಪೋಷಕರನ್ನ ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದ. ಇದರಿಂದ ರೋಸಿ ಹೋಗಿದ್ದ ಬಾಲಕಿ ಮನೆಯಲ್ಲಿದ್ದ ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆದ್ರೆ ಇದಕ್ಕೆಲ್ಲ ತಮನ್ನ ಪೋಷಕರ ಸೈಟ್ ಮೇಲೆ ಕಣ್ಣಿಟ್ಟಿದ್ದ ಶೃತಿ ಎಂಬ ಮಹಿಳೆ ಕಾರಣವೆಂದು ಕೆಲವರು ಆರೋಪಿಸ್ತಿದ್ದಾರೆ. ತಮನ್ನ ಪೋಷಕರಿಗೆ ಸೇರಿದ ಸೈಟ್ ತನಗೆ ಮಾರದಿದದ್ದಕ್ಕೆ ಶೃತಿ ಎಂಬ ಮಹಿಳೆ ಬಿನ್ನಿಮಯಿ ಎಂಬ ಬಾಲಕನನ್ನು ಬಾಲಕಿ ಹಿಂದೆ ಬಿಟ್ಟು ಹಿಂಸೆ ನೀಡಿದ್ದಾರೆಂದು ಆರೋಪಿಸಲಾಗಿದೆ. ಸದ್ಯ ಬಾಲಕ ಬಿನ್ನಿಮಯಿ ಮತ್ತು ಶೃತಿ ವಿರುದ್ಧ ಸಿಂಧನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ವಿಚಾರಣೆ ಬಳಿಕವಷ್ಟೆ ಸತ್ಯ ಹೊರ ಬೀಳಲಿದೆ. ಆದ್ರೆ ಪ್ರೀತಿ ವಿಷಯಕ್ಕೆ ಬಾಲಕಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

ಇದನ್ನೂ ಓದಿ: ಪ್ರೀತಿಗೆ ಒಪ್ಪದ ಅಮ್ಮನ ಹತ್ಯೆ ಮಾಡಿದ ಬಾಲಕಿ; ವಿಡಿಯೋ ಕಾಲ್​​ನಲ್ಲೇ ಕೊಲೆ ಮಾಡುವುದನ್ನು ಕಲಿಸಿದ ಪ್ರಿಯತಮ

Published On - 9:11 am, Mon, 9 August 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು