AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧನೂರು: ಬಾಂಗ್ಲಾ ಕ್ಯಾಂಪ್‌ನಲ್ಲಿ ಅಪ್ರಾಪ್ತನಿಂದ ಪ್ರೀತಿ ಕಿರುಕುಳ, ಬಾಲಕಿ ಆತ್ಮಹತ್ಯೆ

ನನ್ನ ಪ್ರೀತಿ ಒಪ್ಪಿಕೊಳ್ಳದಿದ್ದರೆ ನಿನನ್ನು ಕಿಡ್ನ್ಯಾಪ್ ಮಾಡುತ್ತೀನಿ ಎಂದು ಬಾಲಕ, ಬಾಲಕಿಗೆ ಬೆದರಿಕೆ ಹಾಕಿದ್ದ. ಅಲ್ಲದೆ ಬಾಲಕಿ ಪೋಷಕರನ್ನ ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದ. ಇದರಿಂದ ರೋಸಿ ಹೋಗಿದ್ದ ಬಾಲಕಿ ಮನೆಯಲ್ಲಿದ್ದ ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಿಂಧನೂರು: ಬಾಂಗ್ಲಾ ಕ್ಯಾಂಪ್‌ನಲ್ಲಿ ಅಪ್ರಾಪ್ತನಿಂದ ಪ್ರೀತಿ ಕಿರುಕುಳ, ಬಾಲಕಿ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Aug 09, 2021 | 5:35 PM

Share

ರಾಯಚೂರು: ಪ್ರೀತಿಗಾಗಿ ಪೀಡಿಸ್ತಿದ್ದ ಬಾಲಕನ ನಿತ್ಯ ಕಿರುಕುಳ ತಾಳಲಾಗದೆ 14 ವರ್ಷದ ಬಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧನೂರ ತಾಲೂಕಿನ ಬಾಂಗ್ಲಾ ಕ್ಯಾಂಪ್​ನಲ್ಲಿ ನಡೆದಿದೆ. ತಮನ್ನ (14) ಕ್ರಿಮಿನಾಷಕ ಸೇವಿಸಿ ಅತ್ನಹತ್ಯೆ ಮಾಡಿಕೊಂಡ ಬಾಲಕಿ.

ಬಿನ್ನಿಮಯಿ ಬಿಸ್ವಾಸ (17) ಎಂಬ ಬಾಲಕ ತಮನ್ನ ಎಂಬ ಬಾಲಕಿಗೆ ನಿತ್ಯ ಚುಡಾಯಿಸ್ತಿದ್ದ. ಬಾಲಕಿ ತನ್ನ ಅಜ್ಜನ ಮನೆಗೆ ಹೊಗುವಾಗೆಲ್ಲ ಆಕೆಯನ್ನು ಹಿಂಬಾಲಿಸಿ ಪ್ರೀತಿ ಮಾಡುವಂತೆ ಒತ್ತಾಯಿಸ್ತಿದ್ದ. ಮದುವೆಯಾಗುವಂತೆ ಪೀಡಿಸ್ತಿದ್ದ. ಪ್ರೀತ್ಸೆ ಪ್ರೀತ್ಸೆ ಅಂತ ನಿತ್ಯ ಆತ ಕೊಡ್ತಿದ್ದ ಟಾರ್ಚರ್ಗೆ ಬಾಲಕಿ ಬೇಸತ್ತಿದ್ದಳು. ನನ್ನ ಪ್ರೀತಿ ಒಪ್ಪಿಕೊಳ್ಳದಿದ್ದರೆ ನಿನನ್ನು ಕಿಡ್ನ್ಯಾಪ್ ಮಾಡುತ್ತೀನಿ ಎಂದು ಬಾಲಕ, ಬಾಲಕಿಗೆ ಬೆದರಿಕೆ ಹಾಕಿದ್ದ. ಅಲ್ಲದೆ ಬಾಲಕಿ ಪೋಷಕರನ್ನ ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದ. ಇದರಿಂದ ರೋಸಿ ಹೋಗಿದ್ದ ಬಾಲಕಿ ಮನೆಯಲ್ಲಿದ್ದ ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆದ್ರೆ ಇದಕ್ಕೆಲ್ಲ ತಮನ್ನ ಪೋಷಕರ ಸೈಟ್ ಮೇಲೆ ಕಣ್ಣಿಟ್ಟಿದ್ದ ಶೃತಿ ಎಂಬ ಮಹಿಳೆ ಕಾರಣವೆಂದು ಕೆಲವರು ಆರೋಪಿಸ್ತಿದ್ದಾರೆ. ತಮನ್ನ ಪೋಷಕರಿಗೆ ಸೇರಿದ ಸೈಟ್ ತನಗೆ ಮಾರದಿದದ್ದಕ್ಕೆ ಶೃತಿ ಎಂಬ ಮಹಿಳೆ ಬಿನ್ನಿಮಯಿ ಎಂಬ ಬಾಲಕನನ್ನು ಬಾಲಕಿ ಹಿಂದೆ ಬಿಟ್ಟು ಹಿಂಸೆ ನೀಡಿದ್ದಾರೆಂದು ಆರೋಪಿಸಲಾಗಿದೆ. ಸದ್ಯ ಬಾಲಕ ಬಿನ್ನಿಮಯಿ ಮತ್ತು ಶೃತಿ ವಿರುದ್ಧ ಸಿಂಧನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ವಿಚಾರಣೆ ಬಳಿಕವಷ್ಟೆ ಸತ್ಯ ಹೊರ ಬೀಳಲಿದೆ. ಆದ್ರೆ ಪ್ರೀತಿ ವಿಷಯಕ್ಕೆ ಬಾಲಕಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

ಇದನ್ನೂ ಓದಿ: ಪ್ರೀತಿಗೆ ಒಪ್ಪದ ಅಮ್ಮನ ಹತ್ಯೆ ಮಾಡಿದ ಬಾಲಕಿ; ವಿಡಿಯೋ ಕಾಲ್​​ನಲ್ಲೇ ಕೊಲೆ ಮಾಡುವುದನ್ನು ಕಲಿಸಿದ ಪ್ರಿಯತಮ

Published On - 9:11 am, Mon, 9 August 21

Follow Us
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ