AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧನೂರು: ಬಾಂಗ್ಲಾ ಕ್ಯಾಂಪ್‌ನಲ್ಲಿ ಅಪ್ರಾಪ್ತನಿಂದ ಪ್ರೀತಿ ಕಿರುಕುಳ, ಬಾಲಕಿ ಆತ್ಮಹತ್ಯೆ

ನನ್ನ ಪ್ರೀತಿ ಒಪ್ಪಿಕೊಳ್ಳದಿದ್ದರೆ ನಿನನ್ನು ಕಿಡ್ನ್ಯಾಪ್ ಮಾಡುತ್ತೀನಿ ಎಂದು ಬಾಲಕ, ಬಾಲಕಿಗೆ ಬೆದರಿಕೆ ಹಾಕಿದ್ದ. ಅಲ್ಲದೆ ಬಾಲಕಿ ಪೋಷಕರನ್ನ ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದ. ಇದರಿಂದ ರೋಸಿ ಹೋಗಿದ್ದ ಬಾಲಕಿ ಮನೆಯಲ್ಲಿದ್ದ ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಿಂಧನೂರು: ಬಾಂಗ್ಲಾ ಕ್ಯಾಂಪ್‌ನಲ್ಲಿ ಅಪ್ರಾಪ್ತನಿಂದ ಪ್ರೀತಿ ಕಿರುಕುಳ, ಬಾಲಕಿ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 09, 2021 | 5:35 PM

Share

ರಾಯಚೂರು: ಪ್ರೀತಿಗಾಗಿ ಪೀಡಿಸ್ತಿದ್ದ ಬಾಲಕನ ನಿತ್ಯ ಕಿರುಕುಳ ತಾಳಲಾಗದೆ 14 ವರ್ಷದ ಬಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧನೂರ ತಾಲೂಕಿನ ಬಾಂಗ್ಲಾ ಕ್ಯಾಂಪ್​ನಲ್ಲಿ ನಡೆದಿದೆ. ತಮನ್ನ (14) ಕ್ರಿಮಿನಾಷಕ ಸೇವಿಸಿ ಅತ್ನಹತ್ಯೆ ಮಾಡಿಕೊಂಡ ಬಾಲಕಿ.

ಬಿನ್ನಿಮಯಿ ಬಿಸ್ವಾಸ (17) ಎಂಬ ಬಾಲಕ ತಮನ್ನ ಎಂಬ ಬಾಲಕಿಗೆ ನಿತ್ಯ ಚುಡಾಯಿಸ್ತಿದ್ದ. ಬಾಲಕಿ ತನ್ನ ಅಜ್ಜನ ಮನೆಗೆ ಹೊಗುವಾಗೆಲ್ಲ ಆಕೆಯನ್ನು ಹಿಂಬಾಲಿಸಿ ಪ್ರೀತಿ ಮಾಡುವಂತೆ ಒತ್ತಾಯಿಸ್ತಿದ್ದ. ಮದುವೆಯಾಗುವಂತೆ ಪೀಡಿಸ್ತಿದ್ದ. ಪ್ರೀತ್ಸೆ ಪ್ರೀತ್ಸೆ ಅಂತ ನಿತ್ಯ ಆತ ಕೊಡ್ತಿದ್ದ ಟಾರ್ಚರ್ಗೆ ಬಾಲಕಿ ಬೇಸತ್ತಿದ್ದಳು. ನನ್ನ ಪ್ರೀತಿ ಒಪ್ಪಿಕೊಳ್ಳದಿದ್ದರೆ ನಿನನ್ನು ಕಿಡ್ನ್ಯಾಪ್ ಮಾಡುತ್ತೀನಿ ಎಂದು ಬಾಲಕ, ಬಾಲಕಿಗೆ ಬೆದರಿಕೆ ಹಾಕಿದ್ದ. ಅಲ್ಲದೆ ಬಾಲಕಿ ಪೋಷಕರನ್ನ ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದ. ಇದರಿಂದ ರೋಸಿ ಹೋಗಿದ್ದ ಬಾಲಕಿ ಮನೆಯಲ್ಲಿದ್ದ ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆದ್ರೆ ಇದಕ್ಕೆಲ್ಲ ತಮನ್ನ ಪೋಷಕರ ಸೈಟ್ ಮೇಲೆ ಕಣ್ಣಿಟ್ಟಿದ್ದ ಶೃತಿ ಎಂಬ ಮಹಿಳೆ ಕಾರಣವೆಂದು ಕೆಲವರು ಆರೋಪಿಸ್ತಿದ್ದಾರೆ. ತಮನ್ನ ಪೋಷಕರಿಗೆ ಸೇರಿದ ಸೈಟ್ ತನಗೆ ಮಾರದಿದದ್ದಕ್ಕೆ ಶೃತಿ ಎಂಬ ಮಹಿಳೆ ಬಿನ್ನಿಮಯಿ ಎಂಬ ಬಾಲಕನನ್ನು ಬಾಲಕಿ ಹಿಂದೆ ಬಿಟ್ಟು ಹಿಂಸೆ ನೀಡಿದ್ದಾರೆಂದು ಆರೋಪಿಸಲಾಗಿದೆ. ಸದ್ಯ ಬಾಲಕ ಬಿನ್ನಿಮಯಿ ಮತ್ತು ಶೃತಿ ವಿರುದ್ಧ ಸಿಂಧನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ವಿಚಾರಣೆ ಬಳಿಕವಷ್ಟೆ ಸತ್ಯ ಹೊರ ಬೀಳಲಿದೆ. ಆದ್ರೆ ಪ್ರೀತಿ ವಿಷಯಕ್ಕೆ ಬಾಲಕಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

ಇದನ್ನೂ ಓದಿ: ಪ್ರೀತಿಗೆ ಒಪ್ಪದ ಅಮ್ಮನ ಹತ್ಯೆ ಮಾಡಿದ ಬಾಲಕಿ; ವಿಡಿಯೋ ಕಾಲ್​​ನಲ್ಲೇ ಕೊಲೆ ಮಾಡುವುದನ್ನು ಕಲಿಸಿದ ಪ್ರಿಯತಮ

Published On - 9:11 am, Mon, 9 August 21

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು