AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧನೂರು: ಬಾಂಗ್ಲಾ ಕ್ಯಾಂಪ್‌ನಲ್ಲಿ ಅಪ್ರಾಪ್ತನಿಂದ ಪ್ರೀತಿ ಕಿರುಕುಳ, ಬಾಲಕಿ ಆತ್ಮಹತ್ಯೆ

ನನ್ನ ಪ್ರೀತಿ ಒಪ್ಪಿಕೊಳ್ಳದಿದ್ದರೆ ನಿನನ್ನು ಕಿಡ್ನ್ಯಾಪ್ ಮಾಡುತ್ತೀನಿ ಎಂದು ಬಾಲಕ, ಬಾಲಕಿಗೆ ಬೆದರಿಕೆ ಹಾಕಿದ್ದ. ಅಲ್ಲದೆ ಬಾಲಕಿ ಪೋಷಕರನ್ನ ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದ. ಇದರಿಂದ ರೋಸಿ ಹೋಗಿದ್ದ ಬಾಲಕಿ ಮನೆಯಲ್ಲಿದ್ದ ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಿಂಧನೂರು: ಬಾಂಗ್ಲಾ ಕ್ಯಾಂಪ್‌ನಲ್ಲಿ ಅಪ್ರಾಪ್ತನಿಂದ ಪ್ರೀತಿ ಕಿರುಕುಳ, ಬಾಲಕಿ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 09, 2021 | 5:35 PM

Share

ರಾಯಚೂರು: ಪ್ರೀತಿಗಾಗಿ ಪೀಡಿಸ್ತಿದ್ದ ಬಾಲಕನ ನಿತ್ಯ ಕಿರುಕುಳ ತಾಳಲಾಗದೆ 14 ವರ್ಷದ ಬಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧನೂರ ತಾಲೂಕಿನ ಬಾಂಗ್ಲಾ ಕ್ಯಾಂಪ್​ನಲ್ಲಿ ನಡೆದಿದೆ. ತಮನ್ನ (14) ಕ್ರಿಮಿನಾಷಕ ಸೇವಿಸಿ ಅತ್ನಹತ್ಯೆ ಮಾಡಿಕೊಂಡ ಬಾಲಕಿ.

ಬಿನ್ನಿಮಯಿ ಬಿಸ್ವಾಸ (17) ಎಂಬ ಬಾಲಕ ತಮನ್ನ ಎಂಬ ಬಾಲಕಿಗೆ ನಿತ್ಯ ಚುಡಾಯಿಸ್ತಿದ್ದ. ಬಾಲಕಿ ತನ್ನ ಅಜ್ಜನ ಮನೆಗೆ ಹೊಗುವಾಗೆಲ್ಲ ಆಕೆಯನ್ನು ಹಿಂಬಾಲಿಸಿ ಪ್ರೀತಿ ಮಾಡುವಂತೆ ಒತ್ತಾಯಿಸ್ತಿದ್ದ. ಮದುವೆಯಾಗುವಂತೆ ಪೀಡಿಸ್ತಿದ್ದ. ಪ್ರೀತ್ಸೆ ಪ್ರೀತ್ಸೆ ಅಂತ ನಿತ್ಯ ಆತ ಕೊಡ್ತಿದ್ದ ಟಾರ್ಚರ್ಗೆ ಬಾಲಕಿ ಬೇಸತ್ತಿದ್ದಳು. ನನ್ನ ಪ್ರೀತಿ ಒಪ್ಪಿಕೊಳ್ಳದಿದ್ದರೆ ನಿನನ್ನು ಕಿಡ್ನ್ಯಾಪ್ ಮಾಡುತ್ತೀನಿ ಎಂದು ಬಾಲಕ, ಬಾಲಕಿಗೆ ಬೆದರಿಕೆ ಹಾಕಿದ್ದ. ಅಲ್ಲದೆ ಬಾಲಕಿ ಪೋಷಕರನ್ನ ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದ. ಇದರಿಂದ ರೋಸಿ ಹೋಗಿದ್ದ ಬಾಲಕಿ ಮನೆಯಲ್ಲಿದ್ದ ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆದ್ರೆ ಇದಕ್ಕೆಲ್ಲ ತಮನ್ನ ಪೋಷಕರ ಸೈಟ್ ಮೇಲೆ ಕಣ್ಣಿಟ್ಟಿದ್ದ ಶೃತಿ ಎಂಬ ಮಹಿಳೆ ಕಾರಣವೆಂದು ಕೆಲವರು ಆರೋಪಿಸ್ತಿದ್ದಾರೆ. ತಮನ್ನ ಪೋಷಕರಿಗೆ ಸೇರಿದ ಸೈಟ್ ತನಗೆ ಮಾರದಿದದ್ದಕ್ಕೆ ಶೃತಿ ಎಂಬ ಮಹಿಳೆ ಬಿನ್ನಿಮಯಿ ಎಂಬ ಬಾಲಕನನ್ನು ಬಾಲಕಿ ಹಿಂದೆ ಬಿಟ್ಟು ಹಿಂಸೆ ನೀಡಿದ್ದಾರೆಂದು ಆರೋಪಿಸಲಾಗಿದೆ. ಸದ್ಯ ಬಾಲಕ ಬಿನ್ನಿಮಯಿ ಮತ್ತು ಶೃತಿ ವಿರುದ್ಧ ಸಿಂಧನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ವಿಚಾರಣೆ ಬಳಿಕವಷ್ಟೆ ಸತ್ಯ ಹೊರ ಬೀಳಲಿದೆ. ಆದ್ರೆ ಪ್ರೀತಿ ವಿಷಯಕ್ಕೆ ಬಾಲಕಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

ಇದನ್ನೂ ಓದಿ: ಪ್ರೀತಿಗೆ ಒಪ್ಪದ ಅಮ್ಮನ ಹತ್ಯೆ ಮಾಡಿದ ಬಾಲಕಿ; ವಿಡಿಯೋ ಕಾಲ್​​ನಲ್ಲೇ ಕೊಲೆ ಮಾಡುವುದನ್ನು ಕಲಿಸಿದ ಪ್ರಿಯತಮ

Published On - 9:11 am, Mon, 9 August 21

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ