AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರ ಸಾವು ಪ್ರಕರಣ: ವಾಟರ್ ಟೆಸ್ಟಿಂಗ್ ರಿಪೋರ್ಟ್​ನಲ್ಲಿ ಸ್ಫೋಟಕ ಸತ್ಯ ಬಯಲು

ಪರೀಕ್ಷೆ ವೇಳೆ ಒಟ್ಟು 24 ಮಾದರಿಗಳಲ್ಲಿ ನೀರು ಕುಡಿಯಲು ಯೋಗ್ಯವಲ್ಲ ಎಂದು ದೃಢಪಟ್ಟಿದೆ. ಪ್ರಾಥಮಿಕ ಹಂತದಲ್ಲೇ ಸಮಸ್ಯೆ ಆಗಿರುವ ಬಗ್ಗೆ ರಿಪೋರ್ಟ್​ನಲ್ಲಿ ಉಲ್ಲೇಖವಾಗಿದೆ.

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರ ಸಾವು ಪ್ರಕರಣ: ವಾಟರ್ ಟೆಸ್ಟಿಂಗ್ ರಿಪೋರ್ಟ್​ನಲ್ಲಿ ಸ್ಫೋಟಕ ಸತ್ಯ ಬಯಲು
ಕಲುಷಿತ ನೀರು ಕುಡಿದು ಮಗು ಅಸ್ವಸ್ಥಗೊಂಡಿತ್ತು
TV9 Web
| Edited By: |

Updated on:Jun 07, 2022 | 9:44 AM

Share

ರಾಯಚೂರು: ಕಲುಷಿತ ನೀರು (Contaminated water) ಕುಡಿದು ಮೂವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿ ವಾಟರ್ ಟೆಸ್ಟಿಂಗ್ ರಿಪೋರ್ಟ್ನಲ್ಲಿ (Testing Reoprt) ಸ್ಫೋಟಕ ಸತ್ಯ ಬಯಲಾಗಿದೆ. ರಾಂಪುರ ನೀರು ಶುದ್ಧೀಕರಣ ಘಟಕ ಸೇರಿ ತಜ್ಞರು ಸುಮಾರು 110 ಕಡೆ ಮಾದರಿಗಳನ್ನ ಕಲೆ ಹಾಕಿ ಪರೀಕ್ಷೆ ಮಾಡಿದ್ದರು. ಪರೀಕ್ಷೆ ವೇಳೆ ಒಟ್ಟು 24 ಮಾದರಿಗಳಲ್ಲಿ ನೀರು ಕುಡಿಯಲು ಯೋಗ್ಯವಲ್ಲ ಎಂದು ದೃಢಪಟ್ಟಿದೆ. ಪ್ರಾಥಮಿಕ ಹಂತದಲ್ಲೇ ಸಮಸ್ಯೆ ಆಗಿರುವ ಬಗ್ಗೆ ರಿಪೋರ್ಟ್​ನಲ್ಲಿ ಉಲ್ಲೇಖವಾಗಿದೆ. ಬಲ್ಕ್ ವಾಟರ್ ಸಪ್ಲೈ ಹಂತದಲ್ಲೇ ನೀರಿನ ಸಮಸ್ಯೆ ಎದುರಾಗಿರುವ ಬಗ್ಗೆ ಮಾಹಿತಿ ಬೆಳಕಿಗೆ ಬಂದಿದೆ.

ಟೆಸ್ಟಿಂಗ್ ರಿಪೋರ್ಟ್​ ಬಂದ ಬೆನ್ನಲ್ಲೆ ನಗರದಾದ್ಯಂತ ನೀರು ಪರೀಕ್ಷೆ ಮಾಡಲು ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ಸೂಚನೆ ನೀಡಿದ್ದಾರೆ. ಡಿಎಚ್ಓ ಮೂಲಕ 1,000 ವಾಟರ್ ಸ್ಯಾಂಪಲ್ಸ್ ಪಡೆಯಲು ಸೂಚನೆ ನೀಡಲಾಗಿದೆ. ಡಿಸ್ಟ್ರಿಬ್ಯುಶನ್ ಪಾಯಿಂಟ್, ಬಲ್ಕ್ ಸಪ್ಲೈ, ಫಿಲ್ಟರೇಶನ್ ಪಾಯಿಂಟ್ ಸೇರಿ ವಿವಿಧ ಹಂತಗಳಲ್ಲಿ ವಾಟರ್ ಸ್ಯಾಂಪಲ್ಸ್ ಪಡೆಯಲು ಸೂಚಿಸಿದ್ದಾರೆ. ಸುಮಾರು 16 ವರ್ಷಗಳಿಂದ ರಾಂಪುರ ನೀರು ಶುದ್ಧೀಕರಣ ಘಟಕವನ್ನು ನಿರ್ವಹಣೆ ಮಾಡುತ್ತಿಲ್ಲ . ಹೀಗಾಗಿ ಹೂಳು ತುಂಬಿರುವ‌ ರೀತಿ ಕೆಸರು ತುಂಬಿಕೊಂಡಿದೆ. 15 ದಿನಗಳಿಂದ ಹರಸಾಹಸ ಪಟ್ಟರು ಶುದ್ಧೀಕರಣ ಕಾರ್ಯ ಮುಗಿದಿಲ್ಲ.

ಇದನ್ನೂ ಓದಿ: Joe Root: ಅನುಮಾನ ಮೂಡಿಸಿದ ಜೋ ರೂಟ್ ಬ್ಯಾಟ್: ಯಾವುದೇ ಆಧಾರವಿಲ್ಲದೆ ಮೈದಾನದಲ್ಲಿ ನಿಂತಿದ್ದೇಗೆ?

ಇದನ್ನೂ ಓದಿ
Image
Boris Johnson: ವಿಶ್ವಾಸ ಮತ ಯಾಚನೆಯಲ್ಲಿ ಭರ್ಜರಿ ಗೆಲುವು; ಇಂಗ್ಲೆಂಡ್ ಪ್ರಧಾನಿ ಪಟ್ಟ ಉಳಿಸಿಕೊಂಡ ಬೋರಿಸ್ ಜಾನ್ಸನ್
Image
Joe Root: ಅನುಮಾನ ಮೂಡಿಸಿದ ಜೋ ರೂಟ್ ಬ್ಯಾಟ್: ಯಾವುದೇ ಆಧಾರವಿಲ್ಲದೆ ಮೈದಾನದಲ್ಲಿ ನಿಂತಿದ್ದೇಗೆ?
Image
ಗದಗ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ; ಹೊರಗುತ್ತಿಗೆ ನೌಕರರನ್ನು ಮುಂದುವರಿಸಲು ಲಂಚಕ್ಕೆ ಬೇಡಿಕೆ ಇಟ್ಟ ಗದಗ ಡಿಹೆಚ್ಒ ಡಾ.ಜಗದೀಶ್ ನುಚ್ಚಿನ್
Image
ECIL Recruitment 2022: 10ನೇ ತರಗತಿ ಪಾಸಾದವರಿಗೆ ಇಸಿಐಎಲ್​ನಲ್ಲಿದೆ ಉದ್ಯೋಗಾವಕಾಶ

ನಗರದ ಇಂದಿರಾನಗರದಲ್ಲಿ ಮೇ 31 ಕ್ಕೆ ಕಲುಷಿತ ನೀರು ಕುಡಿದು ಸುಮಾರು 60ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದರು. ರಾಯಚೂರು ನಗರಸಭೆ ಸರಬರಾಜು ಮಾಡಿದ್ದ ನೀರು ಕುಡಿದು ಮೂವರು ಸಾವನ್ನಪ್ಪಿದ್ದರು.

ನಗರಸಭೆ ವಿರುದ್ಧ ಕಿಡಿ: ಕುಡಿಯಲು ಹೊಲಸು ನೀರು ಬಿಡುತ್ತಾರೆ. ಎರಡು ದಿನ ಆದ್ರೆ ಹುಳುಗಳು ಆಗ್ತವೆ. ಹುಡುಗರು,ದೊಡ್ಡೋರಿಗೆ ಇದೇ ರೀತಿ ಸಮಸ್ಯೆ ಆಗ್ತಿದೆ. ವಾಂತಿಬೇಧಿ ಹೆಚ್ಚಾದ ಕಾರಣ ಆಸ್ಪತ್ರೆಗೆ ಅಡ್ಮಿಟ್‌ ಆಗಿದ್ದಿವಿ. ಫುಲ್ ಗಲೀಜ್ ನೀರು ಬರುತ್ತವೆ. ಇವತ್ತಿನ ನೀರು ನಾಳೆ‌ ನೋಡಿದ್ರೆ ಹುಳು ಆಡ್ತಿವೆ. ನೀರು ಕುಡಿದ್ರೆ ಒಳ್ಳೆಯದ್ದು ಅಂತ ವೈದ್ಯರು ಹೇಳ್ತಾರೆ.  ಆದ್ರೆ ನಮ್ಮಲ್ಲಿ ಹೊಸಲು ನೀರು ಬರುತ್ತೆ. ಅದನ್ನು ನೋಡಿದರೆ ಭಯ ಆಗುತ್ತೆ ಎಂದು ಇಂದಿರಾನಗರ ನಿವಾಸಿ ಜಮುನಾ ನಗರಸಭೆ ವಿರುದ್ಧ ಕಿಡಿಕಾರಿದ್ದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:32 am, Tue, 7 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ