Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಟು ತಿಂಗಳಿಂದ ಬಾಡಿಗೆ ಬಾಕಿ ಇರಿಸಿದ ರಾಜ್ಯ ಸರ್ಕಾರ; ಸಂಕಷ್ಟದಲ್ಲಿ ರಾಯಚೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳು

ರಾಯಚೂರು ಜಿಲ್ಲೆಯಲ್ಲಿ 2856 ಅಂಗನವಾಡಿ ಕೇಂದ್ರಗಳ ಪೈಕಿ ಒಟ್ಟು 808 ಬಾಡಿಗೆ ಕಟ್ಟಡಗಳ ಹಣ ಬಾಕಿ ಇರಿಸಲಾಗಿದೆ. ಕೆಲವು ಕಾರ್ಯಕರ್ತೆಯರು ಪತಿಯ ಹಣದಲ್ಲಿ ಬಾಡಿಗೆ ಕಟ್ಟುತ್ತಿದ್ದು, ಇನ್ನೂ ಕೆಲವರು ಬಡ್ಡಿಗೆ ಸಾಲು ಪಡೆದು ಕಟ್ಟಡದ ಬಾಡಿಗೆ ಕಟ್ಟುತ್ತಿದ್ದಾರೆ. ರಾಜ್ಯ ಸರ್ಕಾರ ಹಣ ನೀಡದ ಹಿನ್ನೆಲೆ ಅಂಗನವಾಡಿ ಕಾರ್ಯಕರ್ತೆಯರು ಮಾತ್ರವಲ್ಲದೆ, ಅಧಿಕಾರಿಗಳು ಕೂಡ ಹೈರಾಣಾಗಿದ್ದಾರೆ.

ಎಂಟು ತಿಂಗಳಿಂದ ಬಾಡಿಗೆ ಬಾಕಿ ಇರಿಸಿದ ರಾಜ್ಯ ಸರ್ಕಾರ; ಸಂಕಷ್ಟದಲ್ಲಿ ರಾಯಚೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳು
ರಾಜ್ಯ ಸರ್ಕಾರ ಬಾಡಿಗೆ ಹಣ ಬಿಡುಗಡೆ ಮಾಡದ ಹಿನ್ನೆಲೆ ಸಂಕಷ್ಟದಲ್ಲಿ ರಾಯಚೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳು
Follow us
ಭೀಮೇಶ್​​ ಪೂಜಾರ್
| Updated By: Rakesh Nayak Manchi

Updated on: Jan 24, 2024 | 8:49 AM

ರಾಯಚೂರು, ಜ.24: ರಾಜ್ಯ ಸರ್ಕಾರ ಬಾಡಿಗೆ ಹಣ ಬಿಡುಗಡೆ ಮಾಡದ ಪರಿಣಾಮ ಜಿಲ್ಲೆಯಲ್ಲಿ (Raichur) ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿ ಕೇಂದ್ರಗಳು (Anganwadi centers) ಸಂಕಷ್ಟಕ್ಕೆ ಸಿಲುಕಿವೆ. ಕೆಲವು ಕಾರ್ಯಕರ್ತೆಯರು ಪತಿಯ ಹಣದಲ್ಲಿ ಬಾಡಿಗೆ ಕಟ್ಟುತ್ತಿದ್ದು, ಇನ್ನೂ ಕೆಲವರು ಬಡ್ಡಿಗೆ ಸಾಲು ಪಡೆದು ಕಟ್ಟಡದ ಬಾಡಿಗೆ ಕಟ್ಟುವಂತಾಗಿದೆ. ಹಣ ಬಿಡುಗಡೆಯಾಗದ ಹಿನ್ನೆಲೆ ಅಧಿಕಾರಿಗಳು ಕೂಡ ಹೈರಾಣಾಗಿದ್ದಾರೆ.

ಜಿಲ್ಲೆಯ ಅಂಗನವಾಡಿಗಳಿಗೆ ರಾಜ್ಯ ಸರ್ಕಾರ ಕಳೆದ 6-8 ತಿಂಗಳುಗಳಿನಿಂದ ಬಾಡಿಗೆ ಹಣ ಬಿಡುಗಡೆ ಮಾಡದೆ ಬಾಕಿ ಇರಿಸಿಕೊಂಡಿದೆ. ಇದರಿಂದಾಗಿ ಬಾಡಿಗೆ ಕಟ್ಟಲು ಆಗದೆ ಅಂಗನವಾಡಿ ಕಾರ್ಯಕರ್ತೆಯರು ಗೋಳಾಡುತ್ತಿದ್ದಾರೆ. ಕೆಲವರು ಬಡ್ಡಿಗೆ ಸಾಲ ತಂದು ಬಾಡಿಗೆ ಕಟ್ಟುತ್ತಿದ್ದು, ಇನ್ನು ಕೆಲವರು ಪತಿ ದುಡಿದ ಹಣದಿಂದ ಬಾಡಿಗೆ ಪಾವತಿಸಿ ಅಂಗನವಾಡಿ ಕೇಂದ್ರಗಳನ್ನು ತೆರೆಯುತ್ತಿದ್ದಾರೆ.

ನಗರದಲ್ಲಿರುವ ಅಂಗನವಾಡಿ ಕಟ್ಟಡಕ್ಕೆ 4000 ಸಾವಿರ ರೂಪಾಯಿ ಬಾಡಿಗೆ ನೀಡಬೇಕು. ಗ್ರಾಮೀಣ ಭಾಗದಲ್ಲಿ ಅಂಗನವಾಡಿ ಕಟ್ಟಡಕ್ಕೆ 2000 ಸಾವಿರ ರೂಪಾಯಿ ಬಾಡಿಗೆ ನೀಡಬೇಕು. ಒಟ್ಟು 2,856 ಅಂಗನವಾಡಿಗಳ ಪೈಕಿ 808 ಬಾಡಿಗೆ ಕಟ್ಟಡಗಳ ಬಾಡಿಗೆ ಹಣ ಬಾಕಿ ಇರಿಸಲಾಗಿದೆ.

ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನೆಲೆ ಅಧಿಕಾರಿಗಳು ಕೂಡ ಹೈರಾಣಾಗಿದ್ದಾರೆ. ಕೋಟ್ಯಂತರ ರೂಪಾಯಿ ಬಾಡಿಗೆ ಬಾಕಿಯಿಂದಾಗಿ ಅಂಗನವಾಡಿ ಕೇಂದ್ರಗಳು ಸಂಕಷ್ಟಕ್ಕೆ ‌ಸಿಲುಕಿವೆ. ಕೂಡಲೇ ಬಾಡಿಗೆ ಹಣ ಬಿಡುಗಡೆ ಮಾಡುವಂತೆ ಕಾರ್ಯಕರ್ತೆಯರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: WCD Tumakuru Recruitment 2024: 384 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ಮಾತನಾಡಿದ ಬಾಡಿಗೆ ಹಣ ಕಟ್ಟಲಾಗದೇ ಟಿವಿ9 ಜೊತೆ ಅಳಲು ತೋಡಿಕೊಂಡ ಅಂಗನವಾಡಿ ಕಾರ್ಯಕರ್ತೆ ಭುವನೇಶ್ವರಿ, ನಂಗೆ ಮನೆಯವರಿಲ್ಲ (ಗಂಡ ಇಲ್ಲ). ಬಹಳ ಕಷ್ಟ ಆಗುತ್ತಿದೆ. ನನಗೆ ಮೂವರು ಮಕ್ಕಳಿದ್ದಾರೆ. ನನ್ನ ಜೀವನ ನಡೆಯುತ್ತಿರುವುದೇ ಅಂಗನವಾಡಿಯಿಂದಾಗಿದೆ. ಕಳೆದ ಐದು ತಿಂಗಳಿನಿಂದ ಬಾಡಿಗೆ ಬಾಕಿ ಇರಿಸಲಾಗಿದ್ದು, ಎಲ್ಲಾ ಖರ್ಚು ಸೇರಿ 25 ಸಾವಿರ ರೂಪಾಯಿ ಬಾಕಿ ಇದೆ ಎಂದು ಹೇಳಿದ್ದಾರೆ.

ಬೇರೆ ಶಿಕ್ಷಕರು ನಮಗೆ ಸಹಾಯ ಮಾಡುತ್ತಿದ್ದಾರೆ. ಸಂಸಾರ ನಡೆಸಲು ಆಗುತ್ತಿಲ್ಲ. ಪದೇ ಪದೇ ಹಣ ಕೇಳಲು ಅಂಜಿಕೆ ಆಗುತ್ತಿದೆ. ಆದರೂ ಬಾಡಿಗೆ ಕಟ್ಟಬೇಕಲ್ವ ಅಂತ ಅಳಲು ತೋಡಿಕೊಂಡಿದ್ದಾರೆ.

ಟಿವಿ9 ಜೊತೆ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆಯರ ಅಧ್ಯಕ್ಷೆ ಪದ್ಮಾ, 8 ತಿಂಗಳ ಬಾಡಿಗೆ ಕೊಟ್ಟಿಲ್ಲ, 8 ತಿಂಗಳಾದರೂ ತರಕಾರಿ ಬಿಲ್ ಕೊಟ್ಟಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಬಜೆಟ್ ಬಂದ ಮೇಲೆ ಕೊಡುತ್ತೇವೆ, ನಾವೇನು ಮಾಡೋಣ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ. ಆರು ತಿಂಗಳ ಫೋನ್ ಬಿಲ್ ಕೂಡ ಕೊಟ್ಟಿಲ್ಲ. ಆದರೂ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದರು.

ಬಾಡಿಗೆ ಪಡೆಯಲು ಅಡ್ವಾನ್ಸ್ ಕಟ್ಟಬೇಕು. ಕಳೆದ ಎಂಟು ತಿಂಗಳಿನಿಂದ ಗ್ರಾಮೀಣ ಭಾಗದಲ್ಲಿ, ನಾಲ್ಕು ತಿಂಗಳಿನಿಂದ ನಗರ ಪ್ರದೇಶದಲ್ಲಿ ಬಾಡಿಗೆ ಕೊಟ್ಟಿಲ್ಲ ಅಂತ ಪದ್ಮಾ ಅವರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?