AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಅಡುಗೆ ಮಾಡದೆ ಹಾಸ್ಟೆಲ್ ಸಿಬ್ಬಂದಿ ನಾಪ್ಪತ್ತೆ, ಊಟ ರೆಡಿ ಮಾಡಿ ಬಡಿಸಿದ ಪೊಲೀಸ್ ಇನ್​ಸ್ಪೆಕ್ಟರ್

ವಾರ್ಡನ್, ಅಡುಗೆ ಸಿಬ್ಬಂದಿ ನಿರ್ಲಕ್ಷಕ್ಕೆ ಹಾಸ್ಟೆಲ್ ಹುಡುಗರು ಊಟ ಇಲ್ಲದೆ ಪರದಾಟ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಸಂಜೆಯಿಂದ ತಡರಾತ್ರಿ ವರೆಗೂ ಅಡುಗೆ ಮಾಡದೇ ಸಿಬ್ಬಂದಿ ಹಾಸ್ಟೆಲ್ ಬಿಟ್ಟಿದ್ದಾರೆ. ಹೊಟ್ಟೆ ಹಸಿದು ವಾರ್ಡನ್​ಗೆ ಕರೆ ಮಾಡಿದರೆ ಸೂಕ್ತ ಪ್ರತಿಕ್ರಿಯೆ ನೀಡಿಲ್ಲ ಎಂದು ಆರೋಪಿಸಲಾಗಿದೆ.

ರಾಯಚೂರು: ಅಡುಗೆ ಮಾಡದೆ ಹಾಸ್ಟೆಲ್ ಸಿಬ್ಬಂದಿ ನಾಪ್ಪತ್ತೆ, ಊಟ ರೆಡಿ ಮಾಡಿ ಬಡಿಸಿದ ಪೊಲೀಸ್ ಇನ್​ಸ್ಪೆಕ್ಟರ್
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಡುಗೆ ಮಾಡಿ ಊಟ ಬಡಿಸಿದ ಪೊಲೀಸ್ ಇನ್​ಸ್ಪೆಕ್ಟರ್ ಹೊಸ್ಕೇರಪ್ಪ ಮತ್ತು ಸಿಬ್ಬಂದಿ
ಭೀಮೇಶ್​​ ಪೂಜಾರ್
| Edited By: |

Updated on: Nov 23, 2023 | 11:48 AM

Share

ರಾಯಚೂರು, ನ.23: ವಾರ್ಡನ್, ಅಡುಗೆ ಸಿಬ್ಬಂದಿ ನಿರ್ಲಕ್ಷಕ್ಕೆ ಹಾಸ್ಟೆಲ್ ಹುಡುಗರು ಊಟ ಇಲ್ಲದೆ ಪರದಾಟ ನಡೆಸಿದ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಸಂಜೆಯಿಂದ ತಡರಾತ್ರಿ ವರೆಗೂ ಅಡುಗೆ ಮಾಡದೇ ಸಿಬ್ಬಂದಿ ಹಾಸ್ಟೆಲ್ ಬಿಟ್ಟಿದ್ದಾರೆ. ಹೊಟ್ಟೆ ಹಸಿದು ವಾರ್ಡನ್​ಗೆ ಕರೆ ಮಾಡಿದರೆ ಸೂಕ್ತ ಪ್ರತಿಕ್ರಿಯೆ ನೀಡಿಲ್ಲ ಎಂದು ಆರೋಪಿಸಲಾಗಿದೆ.

ಹಟ್ಟಿ ಪಟ್ಟಣದಲ್ಲಿರೊ ಡಾ.ಬಿಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಹಾಸ್ಟೆಲ್​​ನಲ್ಲಿ ತಡ ರಾತ್ರಿವರೆಗೂ ಅಡುಗೆ ಮಾಡದೇ ವಾರ್ಡನ್ ಪ್ರಕಾಶ್ ಹಾಗೂ ಅಡುಗೆ ಸಿಬ್ಬಂದಿ ನಾಪತ್ತೆಯಾಗಿದ್ದರು. ಹೊಟ್ಟೆ ಹಸಿವು ತಾಳಲಾಗದೆ ವಿದ್ಯಾರ್ಥಿಗಳು ವಾರ್ಡನ್ ಪ್ರಕಾಶ್ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿದರೆ ಅವರ ಕೂಡ ಸೂಕ್ತ ಪ್ರತಿಕ್ರಿಯೆ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ರಾಯಚೂರಿನ ಆರ್​ಟಿಪಿಎಸ್ ಕಲ್ಲಿದ್ದಲು ಅಕ್ರಮ ಸಾಗಾಟ: ಟಿವಿ9 ತಂಡ ಬರ್ತಿದ್ದಂತೆ ದಂಧೆಕೋರರು ಎಸ್ಕೇಪ್

ಕೊನೆಗೆ ಹಟ್ಟಿ ಪೊಲೀಸರಿಗೆ ವಿದ್ಯಾರ್ಥಿಗಳು ದೂರು ನೀಡಿದ್ದಾರೆ. ಆಗಲೂ ಪೊಲೀಸರಿಗೆ ಸಿಬ್ಬಂದಿ ಸಮರ್ಪಕ ಉತ್ತರ ನೀಡಿಲ್ಲ. ಕೊನೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇನ್​ಸ್ಪೆಕ್ಟರ್ ಹೊಸ್ಕೇರಪ್ಪ ಅವರು, ತಾವೇ ಅಡುಗೆ ಮಾಡಿ ವಿದ್ಯಾರ್ಥಿಗಳಿಗೆ ಊಟ ಬಡಿಸಿದ್ದಾರೆ. ಪೊಲೀಸರ ಮಾನವೀಯತೆಗೆ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದು, ನಿರ್ಲಕ್ಷ್ಯ ತೋರಿದ ವಾರ್ಡನ್ ಹಾಗೂ ಅಡುಗೆ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ