AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಅಡುಗೆ ಮಾಡದೆ ಹಾಸ್ಟೆಲ್ ಸಿಬ್ಬಂದಿ ನಾಪ್ಪತ್ತೆ, ಊಟ ರೆಡಿ ಮಾಡಿ ಬಡಿಸಿದ ಪೊಲೀಸ್ ಇನ್​ಸ್ಪೆಕ್ಟರ್

ವಾರ್ಡನ್, ಅಡುಗೆ ಸಿಬ್ಬಂದಿ ನಿರ್ಲಕ್ಷಕ್ಕೆ ಹಾಸ್ಟೆಲ್ ಹುಡುಗರು ಊಟ ಇಲ್ಲದೆ ಪರದಾಟ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಸಂಜೆಯಿಂದ ತಡರಾತ್ರಿ ವರೆಗೂ ಅಡುಗೆ ಮಾಡದೇ ಸಿಬ್ಬಂದಿ ಹಾಸ್ಟೆಲ್ ಬಿಟ್ಟಿದ್ದಾರೆ. ಹೊಟ್ಟೆ ಹಸಿದು ವಾರ್ಡನ್​ಗೆ ಕರೆ ಮಾಡಿದರೆ ಸೂಕ್ತ ಪ್ರತಿಕ್ರಿಯೆ ನೀಡಿಲ್ಲ ಎಂದು ಆರೋಪಿಸಲಾಗಿದೆ.

ರಾಯಚೂರು: ಅಡುಗೆ ಮಾಡದೆ ಹಾಸ್ಟೆಲ್ ಸಿಬ್ಬಂದಿ ನಾಪ್ಪತ್ತೆ, ಊಟ ರೆಡಿ ಮಾಡಿ ಬಡಿಸಿದ ಪೊಲೀಸ್ ಇನ್​ಸ್ಪೆಕ್ಟರ್
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಡುಗೆ ಮಾಡಿ ಊಟ ಬಡಿಸಿದ ಪೊಲೀಸ್ ಇನ್​ಸ್ಪೆಕ್ಟರ್ ಹೊಸ್ಕೇರಪ್ಪ ಮತ್ತು ಸಿಬ್ಬಂದಿ
ಭೀಮೇಶ್​​ ಪೂಜಾರ್
| Edited By: Rakesh Nayak Manchi|

Updated on: Nov 23, 2023 | 11:48 AM

Share

ರಾಯಚೂರು, ನ.23: ವಾರ್ಡನ್, ಅಡುಗೆ ಸಿಬ್ಬಂದಿ ನಿರ್ಲಕ್ಷಕ್ಕೆ ಹಾಸ್ಟೆಲ್ ಹುಡುಗರು ಊಟ ಇಲ್ಲದೆ ಪರದಾಟ ನಡೆಸಿದ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಸಂಜೆಯಿಂದ ತಡರಾತ್ರಿ ವರೆಗೂ ಅಡುಗೆ ಮಾಡದೇ ಸಿಬ್ಬಂದಿ ಹಾಸ್ಟೆಲ್ ಬಿಟ್ಟಿದ್ದಾರೆ. ಹೊಟ್ಟೆ ಹಸಿದು ವಾರ್ಡನ್​ಗೆ ಕರೆ ಮಾಡಿದರೆ ಸೂಕ್ತ ಪ್ರತಿಕ್ರಿಯೆ ನೀಡಿಲ್ಲ ಎಂದು ಆರೋಪಿಸಲಾಗಿದೆ.

ಹಟ್ಟಿ ಪಟ್ಟಣದಲ್ಲಿರೊ ಡಾ.ಬಿಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಹಾಸ್ಟೆಲ್​​ನಲ್ಲಿ ತಡ ರಾತ್ರಿವರೆಗೂ ಅಡುಗೆ ಮಾಡದೇ ವಾರ್ಡನ್ ಪ್ರಕಾಶ್ ಹಾಗೂ ಅಡುಗೆ ಸಿಬ್ಬಂದಿ ನಾಪತ್ತೆಯಾಗಿದ್ದರು. ಹೊಟ್ಟೆ ಹಸಿವು ತಾಳಲಾಗದೆ ವಿದ್ಯಾರ್ಥಿಗಳು ವಾರ್ಡನ್ ಪ್ರಕಾಶ್ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿದರೆ ಅವರ ಕೂಡ ಸೂಕ್ತ ಪ್ರತಿಕ್ರಿಯೆ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ರಾಯಚೂರಿನ ಆರ್​ಟಿಪಿಎಸ್ ಕಲ್ಲಿದ್ದಲು ಅಕ್ರಮ ಸಾಗಾಟ: ಟಿವಿ9 ತಂಡ ಬರ್ತಿದ್ದಂತೆ ದಂಧೆಕೋರರು ಎಸ್ಕೇಪ್

ಕೊನೆಗೆ ಹಟ್ಟಿ ಪೊಲೀಸರಿಗೆ ವಿದ್ಯಾರ್ಥಿಗಳು ದೂರು ನೀಡಿದ್ದಾರೆ. ಆಗಲೂ ಪೊಲೀಸರಿಗೆ ಸಿಬ್ಬಂದಿ ಸಮರ್ಪಕ ಉತ್ತರ ನೀಡಿಲ್ಲ. ಕೊನೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇನ್​ಸ್ಪೆಕ್ಟರ್ ಹೊಸ್ಕೇರಪ್ಪ ಅವರು, ತಾವೇ ಅಡುಗೆ ಮಾಡಿ ವಿದ್ಯಾರ್ಥಿಗಳಿಗೆ ಊಟ ಬಡಿಸಿದ್ದಾರೆ. ಪೊಲೀಸರ ಮಾನವೀಯತೆಗೆ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದು, ನಿರ್ಲಕ್ಷ್ಯ ತೋರಿದ ವಾರ್ಡನ್ ಹಾಗೂ ಅಡುಗೆ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ