AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur News: ಜಲಾವೃತವಾದ ಸೇತುವೆ ಮೇಲೆ ಶಾಲಾ ವಾಹನ ಓಡಿಸಿ ಚಾಲಕನ ದುಸ್ಸಾಹಸ: ತಪ್ಪಿದ ಭಾರೀ ಅನಾಹುತ

ತುಂಬಿ ಹರಿಯುತ್ತಿರುವ ಸೇತುವೆ ಮಧ್ಯೆ ಖಾಸಗಿ ಬಸ್ ಸಿಲುಕಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ದೊಮ್ಮತಮರಿ ಗ್ರಾಮದ ಬಳಿ ನಡೆದಿದೆ. ಸ್ವಲ್ಪದರಲ್ಲೇ ಬಸ್​​ನಲ್ಲಿದ್ದ 50 ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Raichur News: ಜಲಾವೃತವಾದ ಸೇತುವೆ ಮೇಲೆ ಶಾಲಾ ವಾಹನ ಓಡಿಸಿ ಚಾಲಕನ ದುಸ್ಸಾಹಸ: ತಪ್ಪಿದ ಭಾರೀ ಅನಾಹುತ
ಜಲಾವೃತವಾದ ಸೇತುವೆ ಮೇಲೆ ಶಾಲಾ ವಾಹನ ಓಡಿಸಿ ದುಸ್ಸಾಹಸ
TV9 Web
| Edited By: |

Updated on:Aug 04, 2022 | 11:02 AM

Share

ರಾಯಚೂರು: ಜಲಾವೃತವಾದ ಸೇತುವೆ ಮೇಲೆ ಶಾಲಾ ವಾಹನ (school bus) ಓಡಿಸಿ ದುಸ್ಸಾಹಸ ಮೇರೆದಿರುವಂತಹ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಚಿತ್ತಾಪುರ ರಸ್ತೆಯಲ್ಲಿ ನಡೆದಿದೆ. ಭಾರೀ ಮಳೆ‌ ಹಿನ್ನೆಲೆ ಬೆಂಡೋಣಿ ಹಳ್ಳ ತುಂಬಿ ಹರಿಯುತ್ತಿದ್ದು, ಸೇತುಬೆ ಮೇಲೆ ನೀರಿನ ರಭಸ ಹೆಚ್ಚಾದ ಹಿನ್ನೆಲೆ ಸಂಚಾರ ಸ್ಥಗಿತವಾಗಿದೆ. ಆದರೆ ಖಾಸಗಿ ಶಾಲಾ ವಾಹನದ ಚಾಲಕ ದುಸ್ಸಾಹಸ ಮೇರೆದಿದ್ದು, ಸುಮಾರು 30 ಮಕ್ಕಳಿದ್ದ ಶಾಲಾ ವಾಹನ ಸೇತುವೆ ದಾಟಿಸಲು ಪ್ರಯತ್ನಿಸಿದ್ದಾನೆ. ಜಾಗಿರ ನಂದಿಹಾಳ ಸೇರಿ ಸುತ್ತಲಿನ ಗ್ರಾಮದ ಮಕ್ಕಳು ಶಾಲಾ ಬಸ್​ನಲ್ಲಿದ್ದರು. ಸೇತುವೆ ಮೇಲೆ ಮೂರ್ನಾಲ್ಕು ಅಡಿ ನೀರು ಹರಿಯುತ್ತಿದ್ದು, ಈ ಮಧ್ಯೆ ಮಕ್ಕಳಿದ್ದ ವಾಹನವನ್ನು ಸೇತುವೆ ದಾಟಿಸಲು ಚಾಲಕ ಯತ್ನಿಸಿದ್ದಾನೆ. ಇದನ್ನ ನೋಡಿ ಸ್ಥಳೀಯರಿಂದ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಚಾಲಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಇನ್ನೂ ಮೂರು ದಿನ ಮಳೆ; ನೆರೆ ರಾಜ್ಯಗಳಲ್ಲೂ ಮಳೆಗಿಲ್ಲ ವಿರಾಮ

ತುಂಬಿ ಹರಿಯೊ ಹಳ್ಳದಲ್ಲಿ ಟ್ರಾಕ್ಟರ್ ಓಡಿಸಿ ದುಸ್ಸಾಹಸ ಮಾಡಿರುವಂತಹ ಘಟನೆ ಜಿಲ್ಲೆಯ ಸಿರವಾರ ತಾಲ್ಲೂಕಿನ ಕುರಕುಂದ ಗ್ರಾಮದಲ್ಲಿ ಘಟನೆ ನಡೆದಿದೆ. ಭಾರೀ ಮಳೆ ಹಿನ್ನೆಲೆ ಕಾಣಿಗಿ ಹಳ್ಳ ತುಂಬಿ ಹರಿಯುತ್ತಿದ್ದು, ಐದಾರು ಅಡಿ ನೀರಿನಲ್ಲೇ ಟ್ರಾಕ್ಟರ್ ಓಡಿಸಿ ಚಾಲಕನ ದುಸ್ಸಾಹಸ ಮೇರೆದಿದ್ದಾನೆ. ಕೂದಲೆಳೆಯ ಅಂತರದಲ್ಲಿ ಜಸ್ಟ್ ಮಿಸ್ ಆಗಿ ಟ್ರಾಕ್ಟರ್ ಸಮೇತ ದಡ ಸೇರಿದ ಚಾಲಕ. ಯಲ್ಲಪ್ಪ ಅನ್ನೋರ ಟ್ರಾಕ್ಟರ್ ಓಡಿಸುತ್ತಿದ್ದ ರಾಮಾಂಜನೇಯ ಅನ್ನೊ ಚಾಲಕನ ದುಸ್ಸಾಹಸ.

ತುಂಬಿ ಹರಿಯುತ್ತಿದ್ದ ಸೇತುವೆ ಮಧ್ಯೆ ಸಿಲುಕಿದ ಖಾಸಗಿ ಬಸ್

ತುಮಕೂರು: ತುಂಬಿ ಹರಿಯುತ್ತಿರುವ ಸೇತುವೆ ಮಧ್ಯೆ ಖಾಸಗಿ ಬಸ್ ಸಿಲುಕಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ದೊಮ್ಮತಮರಿ ಗ್ರಾಮದ ಬಳಿ ನಡೆದಿದೆ. ಸ್ವಲ್ಪದರಲ್ಲೇ ಬಸ್​​ನಲ್ಲಿದ್ದ 50 ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆಯಿಂದಾಗಿ ಕೆರೆಗಳು ತುಂಬಿ ಹರಿಯುತ್ತಿವೆ. ಅದೇ ರಸ್ತೆಯಲ್ಲಿ ಖಾಸಗಿ ಬಸ್​ ಸಂಚಾರ ಮಾಡುತ್ತಿರುವಾಗ ಇದ್ದಕ್ಕಿದ್ದಂತೆ ನೀರಿನ ಹೆಚ್ಚಳದಿಂದ ನೀರಿನಲ್ಲೇ ಖಾಸಗಿ ಬಸ್ ನಿಂತ್ತಿದೆ. ಸ್ಥಳಕ್ಕೆ ದಾವಿಸಿದ ಗ್ರಾಮಸ್ಥರಿಂದ ಬಸ್​ನಲ್ಲಿದ್ದ ಪ್ರಯಾಣಿಕರ‌ ರಕ್ಷಣೆ ಮಾಡಲಾಗಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಳೆ ನಿಂತರೂ ನಿಲ್ಲದ ಕೆರೆಗಳ ಹೊರ ಹರಿಯುವಿಕೆ

ಹಾಸನ: ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಹಿನ್ನೆಲೆ ಮಳೆ ನಿಂತರೂ ಕೆರೆಗಳ ಹೊರ ಹರಿಯುವಿಕೆ ಪ್ರಮಾಣ ಕಡಿಮೆಯಾಗಿಲ್ಲ. ಬಾಗೂರು ಕೆರೆ ಭರ್ತಿಯಾಗಿ ಹೆಚ್ಚಿದ ಕೋಡಿ ಹರಿಯುವಿಕೆ ಪ್ರಮಾಣ ಹೆಚ್ಚಿದ್ದು, ರಸ್ತೆ ಮೇಲೆ ಎರಡು ಅಡಿಗೂ ಹೆಚ್ಚು ನೀರು ಹರಿಯುತ್ತಿದೆ. ಬಾಗೂರು, ನುಗ್ಗೇಹಳ್ಳಿ ರಸ್ತೆ ಸಂಪರ್ಕ ತಾತ್ಕಾಲಿಕ ಬಂದ್ ಮಾಡಲಾಗಿದ್ದು, ವೇಗವಾಗಿ ಹರಿಯುತ್ತಿರುವ ನೀರಿನಲ್ಲಿಯೇ ರಸ್ತೆ ದಾಟಲು ಬೈಕ್ ಸವಾರ ಮುಂದಾಗಿದ್ದು, ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನನ್ನ ಸ್ಥಳಿಯರು ರಕ್ಷಿಸಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಗ್ರಾಮದಲ್ಲಿ ಘಟನೆ ನಡೆದಿದೆ.

Published On - 11:01 am, Thu, 4 August 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ