AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಡೆಂಗ್ಯೂಗೆ ಮೂರು ಮಕ್ಕಳು ಬಲಿ; ಸ್ಥಳಕ್ಕೆ ಜಿಲ್ಲಾ ವೈದ್ಯಾಧಿಕಾರಿ ಡಾ. ನಾಗರಾಜ್ ಭೇಟಿ

ಆರೋಗ್ಯ ಇಲಾಖೆ 23 ತಂಡಗಳಿಂದ ಪ್ರತೀ ದಿನ 100 ಮನೆಗಳ ಸರ್ವೆ ಕಾರ್ಯಕ್ಕೆ ಮುಂದಾಗಿದೆ. ಅಲ್ಲದೇ ಸ್ವಚ್ಛತೆ ಕಾಪಾಡುವಂತೆ ಪುರಸಭೆ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಜತೆಗೆ ಆರೋಗ್ಯ ಇಲಾಖೆ ಡೆಂಗ್ಯೂ ತಡೆಗಟ್ಟಲು ಜನರ ಸಹಕಾರ ಕೋರಿದೆ.

ರಾಯಚೂರು: ಡೆಂಗ್ಯೂಗೆ ಮೂರು ಮಕ್ಕಳು ಬಲಿ; ಸ್ಥಳಕ್ಕೆ ಜಿಲ್ಲಾ ವೈದ್ಯಾಧಿಕಾರಿ ಡಾ. ನಾಗರಾಜ್ ಭೇಟಿ
ವೈದ್ಯಾಧಿಕಾರಿ ಡಾ. ನಾಗರಾಜ್ ಭೇಟಿ
TV9 Web
| Updated By: preethi shettigar|

Updated on:Oct 24, 2021 | 1:29 PM

Share

ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿ ಡಾ.ನಾಗರಾಜ್ ಮಾನ್ವಿ ಪಟ್ಟಣಕ್ಕೆ ಆಗಮಿಸಿದ್ದು, ನಗರದ ವಾರ್ಡ್​ಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ವಾರದಲ್ಲಿ 3 ಮಕ್ಕಳು ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ತಂಡಗಳನ್ನು ರಚಿಸಿವೆ ಮತ್ತು ಮನೆ ಸರ್ವೆಗೆ ಮುಂದಾಗಿದೆ.

ಆರೋಗ್ಯ ಇಲಾಖೆ 23 ತಂಡಗಳಿಂದ ಪ್ರತೀ ದಿನ 100 ಮನೆಗಳ ಸರ್ವೆ ಕಾರ್ಯಕ್ಕೆ ಮುಂದಾಗಿದೆ. ಅಲ್ಲದೇ ಸ್ವಚ್ಛತೆ ಕಾಪಾಡುವಂತೆ ಪುರಸಭೆ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಜತೆಗೆ ಆರೋಗ್ಯ ಇಲಾಖೆ ಡೆಂಗ್ಯೂ ತಡೆಗಟ್ಟಲು ಜನರ ಸಹಕಾರ ಕೋರಿದೆ.

ಕಳೆದ 21 ದಿನಗಳಿಂದ ಮಾನ್ವಿ ಪಟ್ಟಣದಲ್ಲಿ ಡೇಂಗ್ಯೂ ಜ್ವರ ಹೆಚ್ಚಳವಾಗುತ್ತಿದೆ. ಆದರೆ ಜ್ವರ ಹೆಚ್ಚಳವಾದರೂ ಸ್ವಚ್ಚತೆ ಬಗ್ಗೆ ಗಮನ‌ ನೀಡದ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು. ಹೀಗಾಗಿ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಮಾನವಿ ಶಾಸಕ ರಾಜಾ ವೆಂಕಟಪ್ಪ ನಾಯಕ ನಿರ್ಲಕ್ಷ್ಯದಿಂದ ಬಡ ಮಕ್ಕಳು ನರಳಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ತಾಲೂಕು ಆಸ್ಪತ್ರೆಯೊಂದರಲ್ಲೇ 21 ದಿನಗಳಲ್ಲಿ 1474 ಜನರಿಗೆ ಡೇಂಗ್ಯೂ ಪರೀಕ್ಷೆ ನಡೆಸಲಾಗಿದೆ. 1474 ಜನರಲ್ಲಿ 151 ಜನಕ್ಕೆ ಡೇಂಗ್ಯೂ ಪಾಸಿಟಿವ್ ಬಂದಿದೆ. ಹೀಗಾಗಿ ಆಸ್ಪತ್ರೆ ಭರ್ತಿಯಾಗಿದೆ.

ಮಾನವಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಬೇರೆ ಬೇರೆ ಆಸ್ಪತ್ರೆಗಳಿಗೆ ಶಿಫ್ಟ್​ ಸಿಂಧನೂರು, ರಾಯಚೂರು, ಬಳ್ಳಾರಿ ಹಾಗೂ ಬೆಂಗಳೂರಿನ ಆಸ್ಪತ್ರೆಗಳಿಗೆ ರೋಗಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ. ಇನ್ನು ಬೇರೆ ಕಡೆ ಹೋಗಲು ದುಡ್ಡು ಇಲ್ಲದೆ ಬಡರೋಗಿಗಳ ಪರದಾಟ ನಡೆಸುತ್ತಿದ್ದಾರೆ. ಒಟ್ಟಾರೆ ಹೆಚ್ಚುತ್ತಿರುವ ಕಾಯಿಲೆಯಿಂದ ಸ್ಥಳೀಯರು ಭಯಭೀತರಾಗಿದ್ದಾರೆ.

ಇದನ್ನೂ ಓದಿ: ಗದಗ: ಶಂಕಿತ ಡೆಂಗ್ಯೂಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಬಲಿ

Bengaluru: ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳ ಏರಿಕೆ; ಬಿಬಿಎಂಪಿಯಿಂದ ಮನೆ ಮನೆ ಸಮೀಕ್ಷೆ

Published On - 12:48 pm, Sun, 24 October 21

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್