AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಡೆಂಗ್ಯೂಗೆ ಮೂರು ಮಕ್ಕಳು ಬಲಿ; ಸ್ಥಳಕ್ಕೆ ಜಿಲ್ಲಾ ವೈದ್ಯಾಧಿಕಾರಿ ಡಾ. ನಾಗರಾಜ್ ಭೇಟಿ

ಆರೋಗ್ಯ ಇಲಾಖೆ 23 ತಂಡಗಳಿಂದ ಪ್ರತೀ ದಿನ 100 ಮನೆಗಳ ಸರ್ವೆ ಕಾರ್ಯಕ್ಕೆ ಮುಂದಾಗಿದೆ. ಅಲ್ಲದೇ ಸ್ವಚ್ಛತೆ ಕಾಪಾಡುವಂತೆ ಪುರಸಭೆ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಜತೆಗೆ ಆರೋಗ್ಯ ಇಲಾಖೆ ಡೆಂಗ್ಯೂ ತಡೆಗಟ್ಟಲು ಜನರ ಸಹಕಾರ ಕೋರಿದೆ.

ರಾಯಚೂರು: ಡೆಂಗ್ಯೂಗೆ ಮೂರು ಮಕ್ಕಳು ಬಲಿ; ಸ್ಥಳಕ್ಕೆ ಜಿಲ್ಲಾ ವೈದ್ಯಾಧಿಕಾರಿ ಡಾ. ನಾಗರಾಜ್ ಭೇಟಿ
ವೈದ್ಯಾಧಿಕಾರಿ ಡಾ. ನಾಗರಾಜ್ ಭೇಟಿ
TV9 Web
| Edited By: |

Updated on:Oct 24, 2021 | 1:29 PM

Share

ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿ ಡಾ.ನಾಗರಾಜ್ ಮಾನ್ವಿ ಪಟ್ಟಣಕ್ಕೆ ಆಗಮಿಸಿದ್ದು, ನಗರದ ವಾರ್ಡ್​ಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ವಾರದಲ್ಲಿ 3 ಮಕ್ಕಳು ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ತಂಡಗಳನ್ನು ರಚಿಸಿವೆ ಮತ್ತು ಮನೆ ಸರ್ವೆಗೆ ಮುಂದಾಗಿದೆ.

ಆರೋಗ್ಯ ಇಲಾಖೆ 23 ತಂಡಗಳಿಂದ ಪ್ರತೀ ದಿನ 100 ಮನೆಗಳ ಸರ್ವೆ ಕಾರ್ಯಕ್ಕೆ ಮುಂದಾಗಿದೆ. ಅಲ್ಲದೇ ಸ್ವಚ್ಛತೆ ಕಾಪಾಡುವಂತೆ ಪುರಸಭೆ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಜತೆಗೆ ಆರೋಗ್ಯ ಇಲಾಖೆ ಡೆಂಗ್ಯೂ ತಡೆಗಟ್ಟಲು ಜನರ ಸಹಕಾರ ಕೋರಿದೆ.

ಕಳೆದ 21 ದಿನಗಳಿಂದ ಮಾನ್ವಿ ಪಟ್ಟಣದಲ್ಲಿ ಡೇಂಗ್ಯೂ ಜ್ವರ ಹೆಚ್ಚಳವಾಗುತ್ತಿದೆ. ಆದರೆ ಜ್ವರ ಹೆಚ್ಚಳವಾದರೂ ಸ್ವಚ್ಚತೆ ಬಗ್ಗೆ ಗಮನ‌ ನೀಡದ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು. ಹೀಗಾಗಿ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಮಾನವಿ ಶಾಸಕ ರಾಜಾ ವೆಂಕಟಪ್ಪ ನಾಯಕ ನಿರ್ಲಕ್ಷ್ಯದಿಂದ ಬಡ ಮಕ್ಕಳು ನರಳಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ತಾಲೂಕು ಆಸ್ಪತ್ರೆಯೊಂದರಲ್ಲೇ 21 ದಿನಗಳಲ್ಲಿ 1474 ಜನರಿಗೆ ಡೇಂಗ್ಯೂ ಪರೀಕ್ಷೆ ನಡೆಸಲಾಗಿದೆ. 1474 ಜನರಲ್ಲಿ 151 ಜನಕ್ಕೆ ಡೇಂಗ್ಯೂ ಪಾಸಿಟಿವ್ ಬಂದಿದೆ. ಹೀಗಾಗಿ ಆಸ್ಪತ್ರೆ ಭರ್ತಿಯಾಗಿದೆ.

ಮಾನವಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಬೇರೆ ಬೇರೆ ಆಸ್ಪತ್ರೆಗಳಿಗೆ ಶಿಫ್ಟ್​ ಸಿಂಧನೂರು, ರಾಯಚೂರು, ಬಳ್ಳಾರಿ ಹಾಗೂ ಬೆಂಗಳೂರಿನ ಆಸ್ಪತ್ರೆಗಳಿಗೆ ರೋಗಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ. ಇನ್ನು ಬೇರೆ ಕಡೆ ಹೋಗಲು ದುಡ್ಡು ಇಲ್ಲದೆ ಬಡರೋಗಿಗಳ ಪರದಾಟ ನಡೆಸುತ್ತಿದ್ದಾರೆ. ಒಟ್ಟಾರೆ ಹೆಚ್ಚುತ್ತಿರುವ ಕಾಯಿಲೆಯಿಂದ ಸ್ಥಳೀಯರು ಭಯಭೀತರಾಗಿದ್ದಾರೆ.

ಇದನ್ನೂ ಓದಿ: ಗದಗ: ಶಂಕಿತ ಡೆಂಗ್ಯೂಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಬಲಿ

Bengaluru: ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳ ಏರಿಕೆ; ಬಿಬಿಎಂಪಿಯಿಂದ ಮನೆ ಮನೆ ಸಮೀಕ್ಷೆ

Published On - 12:48 pm, Sun, 24 October 21

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​