AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur Bandh: ನವೋದಯ ಮೆಡಿಕಲ್ ಸಂಸ್ಥೆಯಿಂದ ಸ್ಥಳೀಯರಿಗೆ ಅನ್ಯಾಯ ಆರೋಪ! ಇಂದು ರಾಯಚೂರು ನಗರ ಬಂದ್

ಹೈದ್ರಾಬಾದ್ ಕರ್ನಾಟಕ ಭಾಗಕ್ಕೆಂದೇ 371(ಜೆ) ಕಲಂನಡಿ ವಿಶೇಷ ಸ್ಥಾನ ನೀಡಲಾಗಿದೆ. ಹೀಗಿದ್ದರೂ, ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಮಾತ್ರ 371(ಜೆ) ಮೀಸಲಾತಿಯನ್ನು ಗಾಳಿಗೆ ತೂರಿ, ಬೇಕಾಬಿಟ್ಟಿ ಮೆಡಿಕಲ್ ಸೀಟು ಹಂಚಿಕೆ ಮಾಡುತ್ತಿರುವ ಆರೋಪ ಕೇಳಿಬಂದಿದೆ.

Raichur Bandh: ನವೋದಯ ಮೆಡಿಕಲ್ ಸಂಸ್ಥೆಯಿಂದ ಸ್ಥಳೀಯರಿಗೆ ಅನ್ಯಾಯ ಆರೋಪ! ಇಂದು ರಾಯಚೂರು ನಗರ ಬಂದ್
ರಾಯಚೂರು ನಗರ ಬಂದ್ ಆಗಿದೆ.
TV9 Web
| Edited By: |

Updated on:Mar 07, 2022 | 10:51 AM

Share

ರಾಯಚೂರು: ನವೋದಯ ಮೆಡಿಕಲ್ ಸಂಸ್ಥೆಯಿಂದ (Navodaya Medical Institute ) ಸ್ಥಳೀಯರಿಗೆ ಅನ್ಯಾಯ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಇಂದು (ಮಾರ್ಚ್ 7) ರಾಯಚೂರು ನಗರ ಬಂದ್ ಆಗಿದೆ. ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಬಂದ್ (Bandh) ಆಗಿದ್ದು, ನವೋದಯ ಶಿಕ್ಷಣ ಸಂಸ್ಥೆ ನಿಲುವಿನ ವಿರುದ್ಧ ವಿವಿಧ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಕಲಂ 371(ಜೆ) ಅನ್ವಯಿಸದಂತೆ ನವೋದಯ ಸಂಸ್ಥೆ ಕೋರ್ಟ್ ಮೊರೆ ಹೋಗಿದೆ. ಕೋರ್ಟ್​ಗೆ ಹಾಕಿದ ಅರ್ಜಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಬಂದ್ ನಡೆಸಿದ್ದಾರೆ.

ಹೈದ್ರಾಬಾದ್ ಕರ್ನಾಟಕ ಭಾಗಕ್ಕೆಂದೇ 371(ಜೆ) ಕಲಂನಡಿ ವಿಶೇಷ ಸ್ಥಾನ ನೀಡಲಾಗಿದೆ. ಹೀಗಿದ್ದರೂ, ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಮಾತ್ರ 371(ಜೆ) ಮೀಸಲಾತಿಯನ್ನು ಗಾಳಿಗೆ ತೂರಿ, ಬೇಕಾಬಿಟ್ಟಿ ಮೆಡಿಕಲ್ ಸೀಟು ಹಂಚಿಕೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಮೆಡಿಕಲ್ ಓದಬೇಕು ಎನ್ನುವ ಮಹದಾಸೆ ಹೊಂದಿರುವ ಹೈದರಾಬಾದ್ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಮಹಾನ್ ಅನ್ಯಾಯ ಮಾಡಲಾಗುತ್ತಿದೆ ಅಂತ ಹೋರಾಟಗಾರರು ಆರೋಪಿಸಿದ್ದಾರೆ. ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಧೋರಣೆಯಿಂದ ಈ ಸಾಲಿನ ಸುಮಾರು 106 ವಿದ್ಯಾರ್ಥಿಗಳು ಭವಿಷ್ಯ ಅತಂತ್ರದಲ್ಲಿದೆ ಅನ್ನೋದು ಹೋರಾಟಗಾರರ ಆರೋಪ.

ನವೋದಯ ಮೆಡಿಕಲ್ ಕಾಲೇಜು ಪ್ರಾರಂಭವಾಗಿದ್ದು, ಭಾಷಾ ಅಲ್ಪಸಂಖ್ಯಾತರ ಖೋಟಾದಡಿ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾಷಾ ಅಲ್ಪಸಂಖ್ಯಾತರಡಿಯಲ್ಲಿರೊದು ಇದೊಂದೆ ಮೆಡಿಕಲ್ ಕಾಲೇಜು. ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಹೆಚ್ಚಾಗಿ ತೆಲುಗು ಭಾಷಿಕರಿದ್ದಾರೆ. ನವೋದಯ ಮೆಡಿಕಲ್ ಕಾಲೇಜಿನಲ್ಲಿ ಸರ್ಕಾರದ ಖೋಟಾದಲ್ಲಿ 371(ಜೆ) ಮೀಸಲಾತಿ ಅನ್ವಯ ಸೀಟು ನೀಡಲಾಗಿದೆ. ಪ್ರೈವೇಟ್ ಮ್ಯಾನೇಜ್ಮೆಂಟ್​ನ ಸೀಟ್ ಮ್ಯಾಟ್ರಿಕ್ಸ್​ನಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಭಾಷಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸೀಟ್ ಅಲಾಟ್ ಆಗಿದೆ. ಅದನ್ನು ಪ್ರಶ್ನಿಸಿ ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಹೈಕೋರ್ಟ್ ಮೆಟ್ಟಿಲೇರಿದೆ. ಇದು ಸರಿಯಲ್ಲ ಕೂಡಲೇ ಅರ್ಜಿ ಹಿಂಪಡೆಯಬೇಕು ಅಂತ ಹೈದರಾಬಾದ್ ಕರ್ನಾಟಕ ಹೋರಾಟ ಸಮೀತಿ ಅಧ್ಯಕ್ಷ ರಜಾಕ್ ಉಸ್ತಾದ್ ಆಗ್ರಹಿಸಿದ್ದಾರೆ.

ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ: ಬಂದ್ ಹಿನ್ನೆಲೆ ರಾಯಚೂರು-ಲಿಂಗಸುಗೂರು ಬೈಪಾಸ್ ರಸ್ತೆ ಬಳಿ ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋರ್ಟ್​ಗೆ ಸಲ್ಲಿಸಿರುವ ರಿಟ್ ಅರ್ಜಿ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. ರಸ್ತೆ ಮಧ್ಯೆ ವಾಹನಗಳನ್ನು ತಡೆದು ಧರಣಿ ನಡೆಸಿದ್ದಾರೆ. ರಸ್ತೆಯಲ್ಲಿ ಕುಳಿತಿದ್ದ ಪ್ರತಿಭಟನಾಕಾರರನ್ನು ತಡೆದ ಪೊಲೀಸರು ವಾಹನಗಳು ಚಲಾಯಿಸಲು ಬಿಟ್ಟರು.

ಇದನ್ನೂ ಓದಿ

ಮಾನಸಿಕ ಖಿನ್ನತೆ: ಐವರ ಮೇಲೆ ಗುಂಡಿನ ದಾಳಿ ಮಾಡಿ ತಾನೂ ಹತನಾದ ಬೆಳಗಾವಿಯ BSF ಯೋಧ

ಒಡೆದ ಹಿಮ್ಮಡಿಗಳಿಂದ ಆತಂಕಗೊಂಡಿದ್ದೀರಾ? ಪರಿಹಾರಕ್ಕಾಗಿ ಈ ಮನೆಮದ್ದುಗಳನ್ನು ಪ್ರಯತ್ನಿಸಿ

Published On - 10:45 am, Mon, 7 March 22

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ