AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ತಿಂಗಳಿಂದ ಸಂಬಳವಿಲ್ಲದೆ ಕಂಗಾಲಾದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರು, ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ

ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರು ಕಳೆದ 7 ತಿಂಗಳಿನಿಂದ ವೇತನವೇ ಸಿಗುತ್ತಿಲ್ಲವಂತೆ. ಅದರಲ್ಲೂ ಇಎಸ್ಐ, ಪಿಎಫ್ ಹಣ ಹಾಕುತ್ತಿಲ್ಲವಂತೆ. ಹೀಗಾಗಿ ಸಂಬಳವಿಲ್ಲದೆ ಕಾರ್ಮಿಕರು ಪರದಾಡುತ್ತಿದ್ದಾರೆ. ವೇತನ ಕೊಡಬೇಕಾಗಿದ್ದ ಗುತ್ತಿಗೆದಾರರು ನಾಪತ್ತೆಯಾಗಿದ್ದಾರೆ.

7 ತಿಂಗಳಿಂದ ಸಂಬಳವಿಲ್ಲದೆ ಕಂಗಾಲಾದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರು, ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ
7 ತಿಂಗಳಿಂದ ಸಂಬಳವಿಲ್ಲದೆ ಕಂಗಾಲಾದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರು, ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ
TV9 Web
| Edited By: ಆಯೇಷಾ ಬಾನು|

Updated on:Jan 31, 2022 | 3:00 PM

Share

ರಾಯಚೂರು: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ‌ ನೀರಾವರಿ ಇಲಾಖೆ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಕಾರ್ಮಿಕರಿಗೆ ನೀಡಬೇಕಿದ್ದ ಕೋಟ್ಯಾಂತರ ರೂ. ವೇತನ ಗುಳುಂ ಮಾಡಿದ್ದಾರೆ ಎಂದು ರಾಯಚೂರು ಜಿಲ್ಲೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರು ಆರೋಪಿಸಿದ್ದಾರೆ. ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಕಾರ್ಮಿಕರು ಆಕ್ರೋಶ ಹೊರ ಹಾಕಿದ್ದಾರೆ. ನೀರು ಸರಬರಾಜು ಮಾಡುವ ಕಾರ್ಮಿಕರಿಗೆ ವೇತನ ನೀಡುತ್ತಿಲ್ಲ. ಇಎಸ್ಐ, ಪಿಎಫ್ ಹಣ ಸೇರಿದಂತೆ 7 ತಿಂಗಳಿನಿಂದ ಸಂಬಳವಿಲ್ಲದೇ 748 ಕಾರ್ಮಿಕರು ಪರದಾಡುತ್ತಿದ್ದಾರೆ. 2018 ಇಎಸ್ಐ ಹಾಗೂ ಪಿಎಫ್ ಕೂಡ ನೀಡುತ್ತಿಲ್ಲ. ವೇತನ ಕೊಡುವಂತೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.

ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರು ಕಳೆದ 7 ತಿಂಗಳಿನಿಂದ ವೇತನವೇ ಸಿಗುತ್ತಿಲ್ಲವಂತೆ. ಅದರಲ್ಲೂ ಇಎಸ್ಐ, ಪಿಎಫ್ ಹಣ ಹಾಕುತ್ತಿಲ್ಲವಂತೆ. ಹೀಗಾಗಿ ಸಂಬಳವಿಲ್ಲದೆ ಕಾರ್ಮಿಕರು ಪರದಾಡುತ್ತಿದ್ದಾರೆ. ವೇತನ ಕೊಡಬೇಕಾಗಿದ್ದ ಗುತ್ತಿಗೆದಾರರು ನಾಪತ್ತೆಯಾಗಿದ್ದಾರೆ. ವಿರೋಧದ ನಡುವೆಯೂ ಕಾಂಟ್ರಾಕ್ಟ್ ಪದ್ದತಿಗೆ ಸರ್ಕಾರ ಜೋತು ಬಿದ್ದಿದೆ. ಗುತ್ತಿಗೆದಾರರು ವೇತನ ಕೊಡದಿದ್ರೆ, ಇಲಾಖೆಯಿಂದ ಅವಕಾಶವಿದೆ. ಹೀಗಿದ್ರೂ ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ಇಲಾಖೆ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಕಾರ್ಮಿಕರು ಮಾತ್ರ ತಮ್ಮ ಅಳಲನ್ನು ತೋಡಿಕೊಂಡರೂ ಫಲ ಸಿಗದಂತಾಗಿದೆ. ಈ ಸಮಸ್ಯೆಗೆ ಗುತ್ತಿಗೆದಾರರು & ಅಧಿಕಾರಿಗಳು ಕಾರಣ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಕೂಡಲೇ ಬಾಕಿ ಸಂಬಳ, ಇಎಸ್ಐ ಮತ್ತು ಪಿಎಫ್ ಹಣ ಬಿಡುಗಡೆಗೊಳಿಸದಿದ್ದರೇ ಉಗ್ರ ಹೋರಾಟ ಮಾಡುವುದಾಗಿ ಕಾರ್ಮಿಕರು ಎಚ್ಚರಿಕೆ ಕೊಟ್ಟಿದ್ದಾರೆ.

ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾರ್ಮಿಕರಿಗೆ ಸಂಬಳ ನೀಡಿಲ್ಲ.ಸಂಬಳದ ಕೋಟ್ಯಂತರ ರೂ.ಗಳನ್ನು ನೀಡದೇ ಭ್ರಷ್ಟಾಚಾರವೆಸಗಿದ್ದಾರೆ. ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರಿಗೆ 7 ತಿಂಗಳ ಸಂಬಳ ನೀಡಿಲ್ಲ. ನಾಲ್ಕು ವರ್ಷಗಳಿಂದ ಇಎಸ್​ಐ ಹಾಗೂ ಪಿಎಫ್ ಹಣವನ್ನು ಜಮೆ ಮಾಡಿಲ್ಲ. ಕೂಡಲೇ ಸಮಸ್ಯೆ ಪರಿಹರಿಸದೇ ಇದ್ರೆ ಉಗ್ರ ಹೋರಾಟ ಮಾಡಲಾಗುವುದು ಎಂದು ತುಂಗಭದ್ರಾ ನೀರಾವರಿ ವಲಯದ ಹಂಗಾಮಿ ಕಾರ್ಮಿಕರ ಸಂಘದ ಅಧ್ಯಕ್ಷ ಆರ್.ಮಾನಸಯ್ಯ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ದುಪ್ಪಟ್ಟು ದರಕ್ಕೆ ಮೆಣಸಿನಕಾಯಿ ಬೀಜ ವ್ಯಾಪಾರ; ರೈತರು ಕಂಗಾಲು

Published On - 1:52 pm, Mon, 31 January 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್