AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ತಿಂಗಳಿಂದ ಸಂಬಳವಿಲ್ಲದೆ ಕಂಗಾಲಾದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರು, ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ

ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರು ಕಳೆದ 7 ತಿಂಗಳಿನಿಂದ ವೇತನವೇ ಸಿಗುತ್ತಿಲ್ಲವಂತೆ. ಅದರಲ್ಲೂ ಇಎಸ್ಐ, ಪಿಎಫ್ ಹಣ ಹಾಕುತ್ತಿಲ್ಲವಂತೆ. ಹೀಗಾಗಿ ಸಂಬಳವಿಲ್ಲದೆ ಕಾರ್ಮಿಕರು ಪರದಾಡುತ್ತಿದ್ದಾರೆ. ವೇತನ ಕೊಡಬೇಕಾಗಿದ್ದ ಗುತ್ತಿಗೆದಾರರು ನಾಪತ್ತೆಯಾಗಿದ್ದಾರೆ.

7 ತಿಂಗಳಿಂದ ಸಂಬಳವಿಲ್ಲದೆ ಕಂಗಾಲಾದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರು, ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ
7 ತಿಂಗಳಿಂದ ಸಂಬಳವಿಲ್ಲದೆ ಕಂಗಾಲಾದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರು, ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ
TV9 Web
| Edited By: |

Updated on:Jan 31, 2022 | 3:00 PM

Share

ರಾಯಚೂರು: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ‌ ನೀರಾವರಿ ಇಲಾಖೆ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಕಾರ್ಮಿಕರಿಗೆ ನೀಡಬೇಕಿದ್ದ ಕೋಟ್ಯಾಂತರ ರೂ. ವೇತನ ಗುಳುಂ ಮಾಡಿದ್ದಾರೆ ಎಂದು ರಾಯಚೂರು ಜಿಲ್ಲೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರು ಆರೋಪಿಸಿದ್ದಾರೆ. ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಕಾರ್ಮಿಕರು ಆಕ್ರೋಶ ಹೊರ ಹಾಕಿದ್ದಾರೆ. ನೀರು ಸರಬರಾಜು ಮಾಡುವ ಕಾರ್ಮಿಕರಿಗೆ ವೇತನ ನೀಡುತ್ತಿಲ್ಲ. ಇಎಸ್ಐ, ಪಿಎಫ್ ಹಣ ಸೇರಿದಂತೆ 7 ತಿಂಗಳಿನಿಂದ ಸಂಬಳವಿಲ್ಲದೇ 748 ಕಾರ್ಮಿಕರು ಪರದಾಡುತ್ತಿದ್ದಾರೆ. 2018 ಇಎಸ್ಐ ಹಾಗೂ ಪಿಎಫ್ ಕೂಡ ನೀಡುತ್ತಿಲ್ಲ. ವೇತನ ಕೊಡುವಂತೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.

ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರು ಕಳೆದ 7 ತಿಂಗಳಿನಿಂದ ವೇತನವೇ ಸಿಗುತ್ತಿಲ್ಲವಂತೆ. ಅದರಲ್ಲೂ ಇಎಸ್ಐ, ಪಿಎಫ್ ಹಣ ಹಾಕುತ್ತಿಲ್ಲವಂತೆ. ಹೀಗಾಗಿ ಸಂಬಳವಿಲ್ಲದೆ ಕಾರ್ಮಿಕರು ಪರದಾಡುತ್ತಿದ್ದಾರೆ. ವೇತನ ಕೊಡಬೇಕಾಗಿದ್ದ ಗುತ್ತಿಗೆದಾರರು ನಾಪತ್ತೆಯಾಗಿದ್ದಾರೆ. ವಿರೋಧದ ನಡುವೆಯೂ ಕಾಂಟ್ರಾಕ್ಟ್ ಪದ್ದತಿಗೆ ಸರ್ಕಾರ ಜೋತು ಬಿದ್ದಿದೆ. ಗುತ್ತಿಗೆದಾರರು ವೇತನ ಕೊಡದಿದ್ರೆ, ಇಲಾಖೆಯಿಂದ ಅವಕಾಶವಿದೆ. ಹೀಗಿದ್ರೂ ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ಇಲಾಖೆ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಕಾರ್ಮಿಕರು ಮಾತ್ರ ತಮ್ಮ ಅಳಲನ್ನು ತೋಡಿಕೊಂಡರೂ ಫಲ ಸಿಗದಂತಾಗಿದೆ. ಈ ಸಮಸ್ಯೆಗೆ ಗುತ್ತಿಗೆದಾರರು & ಅಧಿಕಾರಿಗಳು ಕಾರಣ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಕೂಡಲೇ ಬಾಕಿ ಸಂಬಳ, ಇಎಸ್ಐ ಮತ್ತು ಪಿಎಫ್ ಹಣ ಬಿಡುಗಡೆಗೊಳಿಸದಿದ್ದರೇ ಉಗ್ರ ಹೋರಾಟ ಮಾಡುವುದಾಗಿ ಕಾರ್ಮಿಕರು ಎಚ್ಚರಿಕೆ ಕೊಟ್ಟಿದ್ದಾರೆ.

ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾರ್ಮಿಕರಿಗೆ ಸಂಬಳ ನೀಡಿಲ್ಲ.ಸಂಬಳದ ಕೋಟ್ಯಂತರ ರೂ.ಗಳನ್ನು ನೀಡದೇ ಭ್ರಷ್ಟಾಚಾರವೆಸಗಿದ್ದಾರೆ. ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರಿಗೆ 7 ತಿಂಗಳ ಸಂಬಳ ನೀಡಿಲ್ಲ. ನಾಲ್ಕು ವರ್ಷಗಳಿಂದ ಇಎಸ್​ಐ ಹಾಗೂ ಪಿಎಫ್ ಹಣವನ್ನು ಜಮೆ ಮಾಡಿಲ್ಲ. ಕೂಡಲೇ ಸಮಸ್ಯೆ ಪರಿಹರಿಸದೇ ಇದ್ರೆ ಉಗ್ರ ಹೋರಾಟ ಮಾಡಲಾಗುವುದು ಎಂದು ತುಂಗಭದ್ರಾ ನೀರಾವರಿ ವಲಯದ ಹಂಗಾಮಿ ಕಾರ್ಮಿಕರ ಸಂಘದ ಅಧ್ಯಕ್ಷ ಆರ್.ಮಾನಸಯ್ಯ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ದುಪ್ಪಟ್ಟು ದರಕ್ಕೆ ಮೆಣಸಿನಕಾಯಿ ಬೀಜ ವ್ಯಾಪಾರ; ರೈತರು ಕಂಗಾಲು

Published On - 1:52 pm, Mon, 31 January 22

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ