AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯದ ಬಳಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಭದ್ರಾ; ರಾಯರ ಭಕ್ತರು ನದಿ ದಂಡೆಗೆ ತೆರಳದಂತೆ ಕಟ್ಟೆಚ್ಚರ

ನದಿ ನೀರು ಹೆಚ್ಚಾದ ಕಾರಣ ಹಾವು ಸೇರಿದಂತೆ ಹಲವು ಜಲಚರಗಳು ನದಿ ದಂಡೆಯಲ್ಲಿ ಪ್ರತ್ಯಕ್ಷವಾಗಿದ್ದು, ಸಿಂಧನೂರ, ಮಾನವಿ ಮತ್ತು ರಾಯಚೂರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪ್ರವಾಹ ಆತಂಕ ಶುರುವಾಗಿದೆ.

ಮಂತ್ರಾಲಯದ ಬಳಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಭದ್ರಾ; ರಾಯರ ಭಕ್ತರು ನದಿ ದಂಡೆಗೆ ತೆರಳದಂತೆ ಕಟ್ಟೆಚ್ಚರ
ಮಂತ್ರಾಲಯದ ಬಳಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಭದ್ರಾ
TV9 Web
| Edited By: |

Updated on:Jul 27, 2021 | 11:38 AM

Share

ರಾಯಚೂರು: ತುಂಗಭದ್ರಾ ನದಿಗೆ ನೀರು‌ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ, ರಾಯಚೂರು ಜಿಲ್ಲೆಯ ತುಂಗಭದ್ರಾ ನದಿ ದಂಡೆ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಅಲ್ಲದೆ ಮಂತ್ರಾಲಯದ ಬಳಿ ಅಪಾಯದ ಮಟ್ಟ ಮೀರಿ ನದಿ ಹರಿಯುತ್ತಿದ್ದು, ರಾಯರ ಭಕ್ತರು ನದಿ ದಂಡೆಗೆ ತೆರಳದ‌ಂತೆ ಕಟ್ಟೆಚ್ಚರ ವಹಿಸಲಾಗಿದೆ. ನದಿ ನೀರು ಹೆಚ್ಚಾದ ಕಾರಣ ಹಾವು ಸೇರಿದಂತೆ ಹಲವು ಜಲಚರಗಳು ನದಿ ದಂಡೆಯಲ್ಲಿ ಪ್ರತ್ಯಕ್ಷವಾಗಿದ್ದು, ಸಿಂಧನೂರ, ಮಾನವಿ ಮತ್ತು ರಾಯಚೂರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪ್ರವಾಹ ಆತಂಕ ಶುರುವಾಗಿದೆ. ಅಪಾಯದ ಮುನ್ನೆಚ್ಚರಿಕೆ ಅರಿತು ನದಿ ತೀರದ ಗ್ರಾಮಗಳಲ್ಲಿ ಕಂದಾಯ ಪೊಲೀಸ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

ರಾಯರ ಏಕಶಿಲಾ ಬೃಂದಾವನ ಜಲಾವೃತ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮದಲ್ಲಿರುವ ರಾಯರ ಏಕಶಿಲಾ ಬೃಂದಾವನ ಜಲಾವೃತವಾಗಿದೆ. ತುಂಗಭದ್ರಾ ನದಿ ನೀರು ಜಪದಕಟ್ಟೆ ಸುತ್ತವರಿದಿದೆ.

mantralaya

ಬಿಚ್ಚಾಲಿ ಗ್ರಾಮದಲ್ಲಿರುವ ರಾಯರ ಏಕಶಿಲಾ ಬೃಂದಾವನ ಜಲಾವೃತ

ಬಾಗಲಕೋಟೆ: ಮಳೆ ಕಡಿಮೆಯಾದರೂ ಪ್ರವಾಹ ತಗ್ಗಿಲ್ಲ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ರೂಗಿ ಗ್ರಾಮದ 20ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದ್ದು, ಸುಮಾರು 800 ಎಕರೆಯಷ್ಟು ಕಬ್ಬು ಬೆಳೆ ನೀರು ಪಾಲಾಗಿದೆ. ಬೆಳೆ ನಾಶದಿಂದ ಬೇಸರಗೊಂಡ ಈ ಭಾಗದ ರೈತರು, ನೀರಿನಲ್ಲಿ ನಿಂತು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಚಿಕ್ಕಪಡಸಲಗಿ ಬಳಿಯ ಕೃಷ್ಣಾ ನದಿ ಸೇತುವೆ ಜಲಾವೃತ ಕೃಷ್ಣಾ ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಬಳಿಯ ಕೃಷ್ಣಾ ನದಿ ಸೇತುವೆ ಜಲಾವೃತವಾಗಿದೆ. ಹೀಗಾಗಿ ಧಾರವಾಡ-ವಿಜಯಪುರ ಮಾರ್ಗದಲ್ಲಿ ರಸ್ತೆ ಸಂಚಾರ ಸ್ಥಗಿತವಾಗಿದ್ದು, ಬ್ಯಾರಿಕೇಡ್ ಹಾಕಿ ಪೊಲೀಸರು ರಸ್ತೆ ಬಂದ್‌ ಮಾಡಿದ್ದಾರೆ.

ಇದನ್ನೂ ಓದಿ:

ದಾವಣಗೆರೆ: ಯಾವುದೇ ಕ್ಷಣದಲ್ಲಿ ತುಂಗಭದ್ರಾ ನದಿಗೆ ನೀರು ಬಿಡಬಹುದು; ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವುದು ಸೂಕ್ತ

ಬೆಳಗಾವಿಯಲ್ಲಿ ಮುಂದುವರಿದ ಪ್ರವಾಹ ಭೀತಿ; ಗ್ರಾಮವೊಂದರಲ್ಲಿ 300ಕ್ಕೂ ಹೆಚ್ಚು ಮನೆಗಳು ಜಲಾವೃತ

Published On - 11:14 am, Tue, 27 July 21

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ