ರಾಯಚೂರು: 8 ವರ್ಷಗಳಿಂದ ಗೃಹಬಂಧನದಲ್ಲಿರುವ ಮಾನಸಿಕ ಅಸ್ವಸ್ಥನಿಗೆ ಮುಕ್ತಿ; ಆಸ್ಪತ್ರೆಗೆ ದಾಖಲು

ಮರದ ಮೇಲಿಂದ ಬಿದ್ದು ಮಾನಸಿಕ ಅಸ್ವಸ್ಥನಾಗಿದ್ದ ಮಗನನ್ನು ಹೆತ್ತವರೇ ಕಳೆದ ಎಂಟು ವರ್ಷಗಳಿಂದ ಮಗನನ್ನ ಗೃಹ ಬಂಧನದಲ್ಲಿರಿಸಿದ್ದರು. ಈ ಬಗ್ಗೆ ಟಿವಿ9 ಡಿಜಿಟಲ್​​ನಲ್ಲಿ ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಜಿಲ್ಲಾ ಆರೋಗ್ಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದರು.

ರಾಯಚೂರು: 8 ವರ್ಷಗಳಿಂದ ಗೃಹಬಂಧನದಲ್ಲಿರುವ ಮಾನಸಿಕ ಅಸ್ವಸ್ಥನಿಗೆ ಮುಕ್ತಿ; ಆಸ್ಪತ್ರೆಗೆ ದಾಖಲು
ಮಾನಸಿಕ ಅಸ್ವಸ್ಥ ಯುವಕ
Follow us
| Updated By: ವಿವೇಕ ಬಿರಾದಾರ

Updated on: Oct 08, 2023 | 1:19 PM

ರಾಯಚೂರು ಅ.08: ಲಿಂಗಸೂರು (Lingasuru) ತಾಲ್ಲೂಕಿನ ದೇವರಭೂಪೂರ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ಎಂಬ ಕಾರಣಕ್ಕೆ ಹೆತ್ತವರೇ ಮಗನನ್ನ ಗೃಹ ಬಂಧನದಲ್ಲಿರಿಸಿದ್ದರು. ಈ ಸುದ್ದಿ ಟವಿ9 ಡಿಜಿಟಲ್​​ನಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳು (Health Department Officers) ಮತ್ತು ಪೊಲೀಸರು ಎಚ್ಚೆತ್ತುಕೊಂಡು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಆರೋಗ್ಯ ಅಧಿಕಾರಿಗಳು ಮಾನಸಿಕ ಅಸ್ವಸ್ಥ ಹನುಮಂತನ ಆರೋಗ್ಯ ಸ್ಥಿತಿ-ಗತಿ ಬಗ್ಗೆ ಮಾಹಿತಿ ಕಲೆ ಹಾಕಿ, ಆತನ ಕೇಸ್ ಹಿಸ್ಟರಿ ಪಡೆದು ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅವಶ್ಯಕತೆ ಇದ್ದರೆ ರಿಮ್ಸ್​ನಿಂದ ಧಾರವಾಡದ ಮಾನಸಿಕ ರೋಗಿಗಳ ಆಸ್ಪತ್ರೆಗೆ ಹನುಮಂತನನ್ನು ರವಾನಿಸಲು ವೈದ್ಯರು ಚಿಂತನೆ ನಡೆಸಿದ್ದಾರೆ.

ಎಂಟು ವರ್ಷಗಳಿಂದ ಗೃಹಬಂಧನದಲ್ಲಿರುವ ಮಾನಸಿಕ ಅಸ್ವಸ್ಥ

ಲಿಂಗಸುಗೂರು ತಾಲ್ಲೂಕಿನ ದೇವರಭೂಪೂರ ಗ್ರಾಮದಲ್ಲಿ ವಾಸವಾಗಿರುವ ರಂಗಪ್ಪ ಹಾಗೂ ನೀಲಮ್ಮ ದಂಪತಿಯ ಹಿರಿಯ ಮಗ ಹನುಮಂತ (28) ಪಿಯುಸಿವರೆಗೂ ಓದಿದ್ದಾನೆ. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದಿದ್ದರಿಂದ ಮುಂದೆ ಓದಲು ಸಾಧ್ಯವಾಗಲಿಲ್ಲ. ಹೀಗಾಗಿ ಬೇರೆಯವರ ಹೊಲಕ್ಕೆ ದುಡಿಯಲು ಹೋಗುತ್ತಿದ್ದನು.

ಹೀಗೆ ಒಂದು ದಿನ ಹೊಲಕ್ಕೆ ದುಡಿಯಲು ಹೋದಾಗ ಮರದ ಮೇಲಿಂದ ಬಿದ್ದು, ತಲೆಗೆ ಪೆಟ್ಟಾಗಿದೆ. ಇದರಿಂದ ಆತ ಮಾನಸಿಕ ಅಸ್ವಸ್ಥನಂತೆ ವರ್ತಿಸಲು ಆರಂಭಿಸಿದ್ದಾನೆ. ಕಲ್ಲು, ಗಾಜು, ಕಟ್ಟಿಗೆ ತಿನ್ನಲು ಆರಂಭಿಸಿದ್ದಾರೆ. ಅಲ್ಲದೆ ಸಾಕು ಪ್ರಾಣಿಗಳ ಕತ್ತು ಸೀಳಿ ಹತ್ಯೆಗೈಯಲು ಆರಂಭಿಸಿದ್ದಾನೆ. ಇಷ್ಟೇ ಅಲ್ಲದೆ ಗ್ರಾಮಸ್ಥರ ಮೇಲೆ ಹಲ್ಲೆಗೆ ಮುಂದಾಗುತ್ತಿದ್ದನು. ಈ ಬಗ್ಗೆ ಗ್ರಾಮಸ್ಥರು ಹನುಮಂತನ ಪೋಷಕರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ರಾಯಚೂರಿನಲ್ಲಿ ಪೋಷಕರಿಂದಲೇ 28 ವರ್ಷದ ಮಗನ ಗೃಹ ಬಂಧನ! ಹೆತ್ತವರ ಕಣ್ಣೀರ ಕಥೆ

ಈ ಹಿನ್ನೆಲೆಯಲ್ಲಿ ಪೋಷಕರು ಹನುಮಂತನ ಕೈಕಾಲುಗಳಿಗೆ ಸರಪಳಿ ಕಟ್ಟಿ ಕಳೆದ ಎಂಟು ವರ್ಷಗಳಿಂದ ಗೃಹ ಬಂಧನದಲ್ಲಿರಿಸಿದ್ದರು. ಹನುಮಂತ ಕೋಣೆಯೊಳಗೆ ಮಲ, ಮೂತ್ರ ವಿಸರ್ಜನೆ ಮಾಡುತ್ತಿದ್ದನು. ಈ ಬಗ್ಗೆ ರಾಯಚೂರು ಟಿವಿ9 ಡಿಜಿಟಲ್​ ಜಿಲ್ಲಾ ವರದಿಗಾರರು ತಿಳಿದು ವರದಿ ಮಾಡಿದ್ದಾರೆ. ವರದಿ ಪ್ರಕಟವಾಗುತ್ತಿದ್ದಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ