AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಸಿಬಿ ಹರಿದು ಮೂವರು ಕಾರ್ಮಿಕರ ಸಾವು ಪ್ರಕರಣಕ್ಕೆ ಟ್ವಿಸ್ಟ್; ಕೃತ್ಯಕ್ಕೆ ಮರಳು ಮಾಫಿಯಾ ಲಿಂಕ್

ನಿನ್ನೆ(ಜೂ.14) ಜೆಸಿಬಿ(JCB) ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ(Devadurga) ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿತ್ತು. ಇದೀಗ ಈ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದ್ದು, ಈ ಕೃತ್ಯಕ್ಕೆ ಕಾರಣವಾದ ಜೆಸಿಬಿಗೆ ಸ್ಯಾಂಡ್ ಮಾಫಿಯಾ ಲಿಂಕ್​ಯಿದೆ ಎಂಬ ಆರೋಪ ಕೇಳಿಬಂದಿದೆ.

ಜೆಸಿಬಿ ಹರಿದು ಮೂವರು ಕಾರ್ಮಿಕರ ಸಾವು ಪ್ರಕರಣಕ್ಕೆ ಟ್ವಿಸ್ಟ್; ಕೃತ್ಯಕ್ಕೆ ಮರಳು ಮಾಫಿಯಾ ಲಿಂಕ್
ರಾಯಚೂರು ಜೆಸಿಬಿ ಹರಿದು ಸಾವು ಪ್ರಕರಣ
ಕಿರಣ್ ಹನುಮಂತ್​ ಮಾದಾರ್
|

Updated on: Jun 15, 2023 | 11:13 AM

Share

ರಾಯಚೂರು: ನಿನ್ನೆ(ಜೂ.14) ಜೆಸಿಬಿ(JCB) ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ (Devadurga) ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿತ್ತು. ಛತ್ತೀಸ್​ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಸಾವನ್ನಪ್ಪಿದ್ದರು. ಜಮೀನಿನಲ್ಲಿ ಬೋರ್‌ವೆಲ್ ಕೊರೆದು, ಕಾಲು ದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದರು. ಇದೀಗ ಈ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದೆ. ಈ ಕೃತ್ಯಕ್ಕೆ ಕಾರಣವಾದ ಜೆಸಿಬಿಗೆ ಸ್ಯಾಂಡ್ ಮಾಫಿಯಾ ಲಿಂಕ್ ಆರೋಪವಿದೆ ಎಂದು ಇದೀಗ ವ್ಯಕ್ತವಾಗಿದೆ.

ರಾತ್ರಿಯಿಂದ ಬೆಳಗಿನ ಜಾವದವರೆಗೂ ತಹಶೀಲ್ದಾರ್ ಆ್ಯಂಡ್ ಟೀಂ ಮರಳು ಅಡ್ಡೆಗಳಿಂದ ಹಣ ವಸೂಲಿ ಆರೋಪ

ದೇವದುರ್ಗ ತಹಶಿಲ್ದಾರ್ ಕೆ.ವೈ ಬಿದರಿ ವಿರುದ್ಧ ಮರಳು ಅಡ್ಡೆಗಳಿಂದ ಹಣ ವಸೂಲಿ ಆರೋಪ ಕೇಳಿಬಂದಿದೆ. ಹೌದು ತಹಶಿಲ್ದಾರ್ ಮರಳು ಅಡ್ಡೆಗಳ ಮೇಲೆ ದಾಳಿಗೆ ಹೋದಾಗ ಈ ಘಟನೆ ನಡೆದಿದೆ ಎಂದು ಗಂಭೀರ ಆರೋಪಿಸಲಾಗಿದೆ. ಇದೇ ಜೂನ್ 13 ರಂದು ದೇವದುರ್ಗ ತಾಲ್ಲೂಕಿನ ನಿಲವಂಜಿ ಸುತ್ತಲಿನ ಅಡ್ಡೆಗಳ ದಾಳಿಗೆ ತಹಶಿಲ್ದಾರ್ ತೆರಳಿದ್ದರು. ಈ ವೇಳೆ ಎರಡು ಪಾಯಿಂಟ್​ಗಳಾದ ಹೇರುಂಡಿ ಅಡ್ಡೆಯಲ್ಲಿ ಹೊನ್ನಪ್ಪ ಎನ್ನುವವರಿಂದ 15 ಸಾವಿರ, ನವಿಲುಗುಡ್ಡದಲ್ಲಿ ಶಂಭು ಅವರಿಂದ 15 ಸಾವಿರ ವಸೂಲಿ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ:ಕಾರು-ಬೈಕ್​ಗಳ ಮಧ್ಯೆ ಭೀಕರ ಅಪಘಾತ, ಮೂವರು ಸಾವು: ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ

ಲೈಟ್ ಆಫ್ ಮಾಡಿ ಜೆಸಿಬಿ ಮೂಲಕ ಚಾಲಕ ಬಸವರಾಜ್ ತಪ್ಪಿಸಿಕೊಳ್ಳಲು ಯತ್ನ

ಹೌದು ತಹಶೀಲ್ದಾರ್​ ಮೂರನೇ ಅಡ್ಡೆ‌ ನಿಲವಂಜಿ ಗ್ರಾಮದ ಬಳಿ ರೇಡ್​ಗೆ ಹೋದಾಗ ಲೈಟ್ ಆಫ್ ಮಾಡಿ ಜೆಸಿಬಿ ಮೂಲಕ ಚಾಲಕ ಬಸವರಾಜ್ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆಗ ಮಾರ್ಗ ಮಧ್ಯದ ಹೊಲದಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಕಾರ್ಮಿಕರ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ತಹಶಿಲ್ದಾರ್ ಬಿದರಿ, ಆರ್ ಐ ಭೀಮನಗೌಡ ಸೇರಿ ಹಲವರು ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿಕಾರುತ್ತಿದ್ದಾರೆ. ‘ದಾಳಿಗೆ ಹೋಗಿದ್ರೆ, ಅಕ್ರಮ ತಡೆಯಲು ಹೋಗಿದ್ರೆ, ಪೊಲೀಸ್ ಸಿಬ್ಬಂದಿ ಜೊತೆ ಹೋಗಬೇಕಿತ್ತು‌. ಆದ್ರೆ, ಅಡ್ಡೆಗಳ ಮೇಲೆ ದಾಳಿ ನಡೆಸಿ ಹಣ ವಸೂಲಿಗೆ ಹೋಗಿದ್ದಾರೆ ಎಂದು ಗಂಭೀರ ಆರೋಪ ಹೊರಸಿದ್ದಾರೆ.

ತಮ್ಮ ವಿರುದ್ಧದ ಆರೋಪಕ್ಕೆ ತಹಶೀಲ್ದಾರ್ ಪ್ರತಿಕ್ರಿಯೆ

ಇನ್ನು ತಮ್ಮ ವಿರುದ್ದ ಕೇಳಿಬಂದಿರುವ ಆರೋಪಕ್ಕೆ ತಹಶೀಲ್ದಾರ್ ಪ್ರತಿಕ್ರಿಯೆ ನೀಡಿದ್ದು, ‘ಘಟನೆ ನಡೆದ ದಿನ ನಾನು ಒಂದು ಕಡೆ ಮಾತ್ರ ದಾಳಿಗೆ ಹೋಗಿದ್ದೆ. ಆದ್ರೆ, ನಿಲವಂಜಿ ಗ್ರಾಮಕ್ಕೆ ಹೋಗಿರ್ಲಿಲ್ಲ ಎಂದಿದ್ದಾರೆ. ತಹಶೀಲ್ದಾರ್ ಕೆ.ವೈ ಬಿದರಿ ಅವರ ಹೇಳಿಕೆ ಹಲವಾರು ಅನುಮಾನ ಹುಟ್ಟುಹಾಕಿದೆ. ಇನ್ನು ಈ ಕುರಿತು ರಾಯಚೂರು ಎಸ್​ಪಿ ನಿಖಿಲ್.ಬಿ ಮಾತನಾಡಿ ‘ಈ ಸಂಬಂಧ ಯಾವುದೇ ಮಾಹಿತಿ ಸಿಕ್ಕಿಲ್ಲ. ತನಿಖೆ ವೇಳೆ ಈ ಬಗ್ಗೆ ಮಾಹಿತಿ ಸಿಗುತ್ತಾ ಅನ್ನೋದನ್ನ ನೋಡ್ತೇವೆ. ಆ ಬಗ್ಗೆ ಮಾಹಿತಿ ಸಿಕ್ಕರೆ, ಖಂಡಿತ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ