AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಸಿಬಿ ಹರಿದು ಮೂವರು ಕಾರ್ಮಿಕರ ಸಾವು ಪ್ರಕರಣಕ್ಕೆ ಟ್ವಿಸ್ಟ್; ಕೃತ್ಯಕ್ಕೆ ಮರಳು ಮಾಫಿಯಾ ಲಿಂಕ್

ನಿನ್ನೆ(ಜೂ.14) ಜೆಸಿಬಿ(JCB) ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ(Devadurga) ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿತ್ತು. ಇದೀಗ ಈ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದ್ದು, ಈ ಕೃತ್ಯಕ್ಕೆ ಕಾರಣವಾದ ಜೆಸಿಬಿಗೆ ಸ್ಯಾಂಡ್ ಮಾಫಿಯಾ ಲಿಂಕ್​ಯಿದೆ ಎಂಬ ಆರೋಪ ಕೇಳಿಬಂದಿದೆ.

ಜೆಸಿಬಿ ಹರಿದು ಮೂವರು ಕಾರ್ಮಿಕರ ಸಾವು ಪ್ರಕರಣಕ್ಕೆ ಟ್ವಿಸ್ಟ್; ಕೃತ್ಯಕ್ಕೆ ಮರಳು ಮಾಫಿಯಾ ಲಿಂಕ್
ರಾಯಚೂರು ಜೆಸಿಬಿ ಹರಿದು ಸಾವು ಪ್ರಕರಣ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 15, 2023 | 11:13 AM

Share

ರಾಯಚೂರು: ನಿನ್ನೆ(ಜೂ.14) ಜೆಸಿಬಿ(JCB) ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ (Devadurga) ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿತ್ತು. ಛತ್ತೀಸ್​ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಸಾವನ್ನಪ್ಪಿದ್ದರು. ಜಮೀನಿನಲ್ಲಿ ಬೋರ್‌ವೆಲ್ ಕೊರೆದು, ಕಾಲು ದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದರು. ಇದೀಗ ಈ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದೆ. ಈ ಕೃತ್ಯಕ್ಕೆ ಕಾರಣವಾದ ಜೆಸಿಬಿಗೆ ಸ್ಯಾಂಡ್ ಮಾಫಿಯಾ ಲಿಂಕ್ ಆರೋಪವಿದೆ ಎಂದು ಇದೀಗ ವ್ಯಕ್ತವಾಗಿದೆ.

ರಾತ್ರಿಯಿಂದ ಬೆಳಗಿನ ಜಾವದವರೆಗೂ ತಹಶೀಲ್ದಾರ್ ಆ್ಯಂಡ್ ಟೀಂ ಮರಳು ಅಡ್ಡೆಗಳಿಂದ ಹಣ ವಸೂಲಿ ಆರೋಪ

ದೇವದುರ್ಗ ತಹಶಿಲ್ದಾರ್ ಕೆ.ವೈ ಬಿದರಿ ವಿರುದ್ಧ ಮರಳು ಅಡ್ಡೆಗಳಿಂದ ಹಣ ವಸೂಲಿ ಆರೋಪ ಕೇಳಿಬಂದಿದೆ. ಹೌದು ತಹಶಿಲ್ದಾರ್ ಮರಳು ಅಡ್ಡೆಗಳ ಮೇಲೆ ದಾಳಿಗೆ ಹೋದಾಗ ಈ ಘಟನೆ ನಡೆದಿದೆ ಎಂದು ಗಂಭೀರ ಆರೋಪಿಸಲಾಗಿದೆ. ಇದೇ ಜೂನ್ 13 ರಂದು ದೇವದುರ್ಗ ತಾಲ್ಲೂಕಿನ ನಿಲವಂಜಿ ಸುತ್ತಲಿನ ಅಡ್ಡೆಗಳ ದಾಳಿಗೆ ತಹಶಿಲ್ದಾರ್ ತೆರಳಿದ್ದರು. ಈ ವೇಳೆ ಎರಡು ಪಾಯಿಂಟ್​ಗಳಾದ ಹೇರುಂಡಿ ಅಡ್ಡೆಯಲ್ಲಿ ಹೊನ್ನಪ್ಪ ಎನ್ನುವವರಿಂದ 15 ಸಾವಿರ, ನವಿಲುಗುಡ್ಡದಲ್ಲಿ ಶಂಭು ಅವರಿಂದ 15 ಸಾವಿರ ವಸೂಲಿ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ:ಕಾರು-ಬೈಕ್​ಗಳ ಮಧ್ಯೆ ಭೀಕರ ಅಪಘಾತ, ಮೂವರು ಸಾವು: ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ

ಲೈಟ್ ಆಫ್ ಮಾಡಿ ಜೆಸಿಬಿ ಮೂಲಕ ಚಾಲಕ ಬಸವರಾಜ್ ತಪ್ಪಿಸಿಕೊಳ್ಳಲು ಯತ್ನ

ಹೌದು ತಹಶೀಲ್ದಾರ್​ ಮೂರನೇ ಅಡ್ಡೆ‌ ನಿಲವಂಜಿ ಗ್ರಾಮದ ಬಳಿ ರೇಡ್​ಗೆ ಹೋದಾಗ ಲೈಟ್ ಆಫ್ ಮಾಡಿ ಜೆಸಿಬಿ ಮೂಲಕ ಚಾಲಕ ಬಸವರಾಜ್ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆಗ ಮಾರ್ಗ ಮಧ್ಯದ ಹೊಲದಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಕಾರ್ಮಿಕರ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ತಹಶಿಲ್ದಾರ್ ಬಿದರಿ, ಆರ್ ಐ ಭೀಮನಗೌಡ ಸೇರಿ ಹಲವರು ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿಕಾರುತ್ತಿದ್ದಾರೆ. ‘ದಾಳಿಗೆ ಹೋಗಿದ್ರೆ, ಅಕ್ರಮ ತಡೆಯಲು ಹೋಗಿದ್ರೆ, ಪೊಲೀಸ್ ಸಿಬ್ಬಂದಿ ಜೊತೆ ಹೋಗಬೇಕಿತ್ತು‌. ಆದ್ರೆ, ಅಡ್ಡೆಗಳ ಮೇಲೆ ದಾಳಿ ನಡೆಸಿ ಹಣ ವಸೂಲಿಗೆ ಹೋಗಿದ್ದಾರೆ ಎಂದು ಗಂಭೀರ ಆರೋಪ ಹೊರಸಿದ್ದಾರೆ.

ತಮ್ಮ ವಿರುದ್ಧದ ಆರೋಪಕ್ಕೆ ತಹಶೀಲ್ದಾರ್ ಪ್ರತಿಕ್ರಿಯೆ

ಇನ್ನು ತಮ್ಮ ವಿರುದ್ದ ಕೇಳಿಬಂದಿರುವ ಆರೋಪಕ್ಕೆ ತಹಶೀಲ್ದಾರ್ ಪ್ರತಿಕ್ರಿಯೆ ನೀಡಿದ್ದು, ‘ಘಟನೆ ನಡೆದ ದಿನ ನಾನು ಒಂದು ಕಡೆ ಮಾತ್ರ ದಾಳಿಗೆ ಹೋಗಿದ್ದೆ. ಆದ್ರೆ, ನಿಲವಂಜಿ ಗ್ರಾಮಕ್ಕೆ ಹೋಗಿರ್ಲಿಲ್ಲ ಎಂದಿದ್ದಾರೆ. ತಹಶೀಲ್ದಾರ್ ಕೆ.ವೈ ಬಿದರಿ ಅವರ ಹೇಳಿಕೆ ಹಲವಾರು ಅನುಮಾನ ಹುಟ್ಟುಹಾಕಿದೆ. ಇನ್ನು ಈ ಕುರಿತು ರಾಯಚೂರು ಎಸ್​ಪಿ ನಿಖಿಲ್.ಬಿ ಮಾತನಾಡಿ ‘ಈ ಸಂಬಂಧ ಯಾವುದೇ ಮಾಹಿತಿ ಸಿಕ್ಕಿಲ್ಲ. ತನಿಖೆ ವೇಳೆ ಈ ಬಗ್ಗೆ ಮಾಹಿತಿ ಸಿಗುತ್ತಾ ಅನ್ನೋದನ್ನ ನೋಡ್ತೇವೆ. ಆ ಬಗ್ಗೆ ಮಾಹಿತಿ ಸಿಕ್ಕರೆ, ಖಂಡಿತ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ